ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ಸಾವು, 199 ಮಂದಿಗೆ ಸೋಂಕು

ಕೋವಿಡ್‌: 226 ಮಂದಿ ಗುಣಮುಖ
Last Updated 14 ಸೆಪ್ಟೆಂಬರ್ 2020, 16:48 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕೋವಿಡ್‌-19 ಸೋಂಕು ತಗುಲಿದ್ದ ಮೂವರು ಸಾವಿಗೀಡಾಗಿದ್ದಾರೆ. ಸೋಮವಾರ 199 ಮಂದಿಗೆ ಸೋಂಕು ದೃಢಪಟ್ಟಿದ್ದು, 226 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ರಂಗಾಪುರದ 62 ವರ್ಷದ ಮಹಿಳೆ (ಪಿ– 464310), ಚಿಕ್ಕಮಗಳೂರು ತಾಲ್ಲೂಕಿನ ಬೀಕನಹಳ್ಳಿಯ 52 ವರ್ಷದ ಪುರುಷ (ಪಿ– 448756), ಮೂಡಿಗೆರೆ ತಾಲ್ಲೂಕಿನ ಸಾರಗೋಡುಕುಂದೂರಿನ 45 ವರ್ಷದ ಪುರುಷ (ಪಿ– 478564) ಮೃತಪಟ್ಟವರು.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 74, ತರೀಕೆರೆ– 56, ಕಡೂರು– 40, ಕೊಪ್ಪ–10, ಮೂಡಿಗೆರೆ– 7, ಶೃಂಗೇರಿ ಹಾಗೂ ಎನ್‌.ಆರ್‌.ಪುರ–ತಲಾ ಆರು ಮಂದಿಗೆ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ 1,375 ಸಕ್ರಿಯ ಪ್ರಕರಣಗಳು ಇವೆ. 4,561 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 103 ಮಂದಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. 1,993 ನಿಯಂತ್ರಿತ ವಲಯಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT