ಖಚಿತ ಮಾಹಿತಿ ಮೇರೆಗೆ, ಬಾಳೂರು ಹೋಬಳಿಯ ಮಲೆಮನೆ ಎಂಬಲ್ಲಿರುವ ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, ಮಲೆಮನೆಯ ಸುರೇಶ ಎಂಬುವರನ್ನು ಬಂಧಿಸಿದ್ದಾರೆ. 200 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿ.ಸಿ.ಪವನ್ ಕುಮಾರ್, ಸಿಬ್ಬಂದಿ ರಾಜೇಂದ್ರ, ಜಾಫರ್, ಅಭಿಲಾಷ್, ಪ್ರದೀಪ್, ವಸಂತ್, ಸತೀಶ್ ಭಾಗವಹಿಸಿದ್ದರು.