<p><strong>ಚಿಕ್ಕಮಗಳೂರು:</strong> ‘ಎಲ್ಲ ರೌಡಿಶೀಟರ್ಗಳೂ ರೌಡಿಗಳಲ್ಲ ಎಂದು ಹೇಳಿದ್ದೆ. ರಾಜಕೀಯ ಕಾರಣಕ್ಕೆ ಸಹಸ್ರಾರು ಜನರನ್ನು ರೌಡಿಶೀಟರ್ಗೆ ಸೇರಿಸಿದ್ದರ ಕುರಿತು ಮಾತನಾಡಿದ್ದೆ. ನಿಜವಾದ ರೌಡಿಗಳಿಗೆ ನಾನು ‘ಕ್ಲೀನ್ ಚಿಟ್’ ಕೊಟ್ಟಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ನವರು ರೌಡಿಗಳನ್ನು ಬೆಳೆಸಿದ್ದಾರೆ. ಆ ಪಕ್ಷದವರು ನಾನು ಹೇಳಿದ ಪ್ರತಿ ಅಂಶ ಹಾಗೂ ಅವರದೇ ಪಕ್ಷದ ಆರ್.ವಿ.ದೇವರಾಜ್, ಹರಿಪ್ರಸಾದ್ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು’ ಎಂದು ಕುಟುಕಿದರು.</p>.<p>‘ನಾನು ಕೊತ್ವಾಲ ರಾಮಚಂದ್ರನ ಶಿಷ್ಯನಲ್ಲ. ಗೂಂಡಾಗಿರಿ ಮಾಡಿಲ್ಲ. ವೈಯಕ್ತಿಕ ಕಾರಣದ ಒಂದೂ ಪ್ರಕರಣ ನನ್ನ ವಿರುದ್ಧ ಇಲ್ಲ.ಇದ್ದವು ಸಾರ್ವಜನಿಕ ಹೋರಾಟದವು, ರೌಡಿಶೀಟರ್ಗೆ ಸೇರಿಸಿದ್ದರು. ಅದಕ್ಕೆ ನನ್ನನ್ನು ಉದಾಹರಣೆಯಾಗಿ ಕೊಟ್ಟಿದ್ದೆ. ಗೂಂಡಾಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ಒಪ್ಪಲ್ಲ’ ಎಂದು ಉತ್ತರಿಸಿದರು.</p>.<p>‘ಟೀಕಾಕಾರರು ನನ್ನನ್ನು ಕುಡುಕ ಎಂದು ಹೇಳಿದ್ದರು. ಸಾರ್ವಜನಿಕವಾಗಿ ಕುಡಿದ, ಅಸಭ್ಯವಾಗಿ ವರ್ತಿಸಿದ ಉದಾಹರಣೆ ಇದೆಯೇ?’ ಎಂದು ಪ್ರಶ್ನಿಸಿದರು.</p>.<p>‘ಗುಜರಾತ್ ವಿಧಾನಸಭೆ ಫಲಿತಾಂಶವು ರಾಮ ಯಾರು? ರಾವಣ ಯಾರು ಎಂಬುದನ್ನು ನಿರ್ಧರಿಸುತ್ತದೆ. ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಎಲ್ಲ ರೌಡಿಶೀಟರ್ಗಳೂ ರೌಡಿಗಳಲ್ಲ ಎಂದು ಹೇಳಿದ್ದೆ. ರಾಜಕೀಯ ಕಾರಣಕ್ಕೆ ಸಹಸ್ರಾರು ಜನರನ್ನು ರೌಡಿಶೀಟರ್ಗೆ ಸೇರಿಸಿದ್ದರ ಕುರಿತು ಮಾತನಾಡಿದ್ದೆ. ನಿಜವಾದ ರೌಡಿಗಳಿಗೆ ನಾನು ‘ಕ್ಲೀನ್ ಚಿಟ್’ ಕೊಟ್ಟಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ನವರು ರೌಡಿಗಳನ್ನು ಬೆಳೆಸಿದ್ದಾರೆ. ಆ ಪಕ್ಷದವರು ನಾನು ಹೇಳಿದ ಪ್ರತಿ ಅಂಶ ಹಾಗೂ ಅವರದೇ ಪಕ್ಷದ ಆರ್.ವಿ.ದೇವರಾಜ್, ಹರಿಪ್ರಸಾದ್ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು’ ಎಂದು ಕುಟುಕಿದರು.</p>.<p>‘ನಾನು ಕೊತ್ವಾಲ ರಾಮಚಂದ್ರನ ಶಿಷ್ಯನಲ್ಲ. ಗೂಂಡಾಗಿರಿ ಮಾಡಿಲ್ಲ. ವೈಯಕ್ತಿಕ ಕಾರಣದ ಒಂದೂ ಪ್ರಕರಣ ನನ್ನ ವಿರುದ್ಧ ಇಲ್ಲ.ಇದ್ದವು ಸಾರ್ವಜನಿಕ ಹೋರಾಟದವು, ರೌಡಿಶೀಟರ್ಗೆ ಸೇರಿಸಿದ್ದರು. ಅದಕ್ಕೆ ನನ್ನನ್ನು ಉದಾಹರಣೆಯಾಗಿ ಕೊಟ್ಟಿದ್ದೆ. ಗೂಂಡಾಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ಒಪ್ಪಲ್ಲ’ ಎಂದು ಉತ್ತರಿಸಿದರು.</p>.<p>‘ಟೀಕಾಕಾರರು ನನ್ನನ್ನು ಕುಡುಕ ಎಂದು ಹೇಳಿದ್ದರು. ಸಾರ್ವಜನಿಕವಾಗಿ ಕುಡಿದ, ಅಸಭ್ಯವಾಗಿ ವರ್ತಿಸಿದ ಉದಾಹರಣೆ ಇದೆಯೇ?’ ಎಂದು ಪ್ರಶ್ನಿಸಿದರು.</p>.<p>‘ಗುಜರಾತ್ ವಿಧಾನಸಭೆ ಫಲಿತಾಂಶವು ರಾಮ ಯಾರು? ರಾವಣ ಯಾರು ಎಂಬುದನ್ನು ನಿರ್ಧರಿಸುತ್ತದೆ. ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>