<p><strong>ಚಿಕ್ಕಮಗಳೂರು: </strong>‘ಪಕ್ಷಕ್ಕಾಗಿ ಹೋರಾಡಿ ಸಂಘಟಿಸಿರುವವರನ್ನು, ಆಡಳಿತ ಪಕ್ಷವಾಗಲು ಕಾರಣಕರ್ತರಾದವರನ್ನೂ ಗಮನದಲ್ಲಿಟ್ಟುಕೊಂಡು ವಿಧಾನಪರಿಷತ್ನ ಚುನಾವಣೆಗೆ ಟಿಕೆಟ್ ವಿಚಾರದಲ್ಲಿ ಸಮತೋಲನದ ನಿರ್ಣಯ ಕೈಗೊಳ್ಳಬೇಕಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಿಜೆಪಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸುತ್ತೇವೆ. ಹಳಬರು ಮತ್ತು ಹೊಸಬರು ಇಬ್ಬರನ್ನೂ ಕಡೆಗಣಿಸುವಂತಿಲ್ಲ. ಸಾಮಾಜಿಕ ನ್ಯಾಯಕ್ಕೂ ಒತ್ತು ನೀಡಬೇಕಿದೆ’ ಎಂದು ಉತ್ತರಿಸಿದರು.</p>.<p>‘ರಾಜ್ಯಸಭೆಗೆ ಸವಿತಾ ಸಮುದಾಯವರೊಬ್ಬರಿಗೆ ಟಿಕೆಟ್ ನೀಡಿದ್ದಕ್ಕೆ ಆ ಇಡೀ ಸಮುದಾಯ ಸಂಭ್ರಮಪಟ್ಟಿದೆ. ಹೀಗೆ ಸಣ್ಣ ಸಮುದಾಯಗಳು, ಪಕ್ಷಕ್ಕಾಗಿ ದುಡಿದವರನ್ನು ಗಮನದಲ್ಲಿಟ್ಟುಕೊಂಡು ನಿರ್ವವಹಿಸಬೇಕಾದ ಸವಾಲು ಇದೆ. ಎಚ್ಚರಿಕೆಯಿಂದ ಆಯ್ಕೆ ಮಾಡಬೇಕಿದೆ. ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷರು, ಕೇಂದ್ರದ ವರಿಷ್ಠರು ಎಲ್ಲರೊಂದಿಗೆ ಚರ್ಚಿಸುತ್ತೇವೆ. ಪಕ್ಷ ಮತ್ತು ಜನರ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>‘ಪಕ್ಷಕ್ಕಾಗಿ ಹೋರಾಡಿ ಸಂಘಟಿಸಿರುವವರನ್ನು, ಆಡಳಿತ ಪಕ್ಷವಾಗಲು ಕಾರಣಕರ್ತರಾದವರನ್ನೂ ಗಮನದಲ್ಲಿಟ್ಟುಕೊಂಡು ವಿಧಾನಪರಿಷತ್ನ ಚುನಾವಣೆಗೆ ಟಿಕೆಟ್ ವಿಚಾರದಲ್ಲಿ ಸಮತೋಲನದ ನಿರ್ಣಯ ಕೈಗೊಳ್ಳಬೇಕಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಿಜೆಪಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸುತ್ತೇವೆ. ಹಳಬರು ಮತ್ತು ಹೊಸಬರು ಇಬ್ಬರನ್ನೂ ಕಡೆಗಣಿಸುವಂತಿಲ್ಲ. ಸಾಮಾಜಿಕ ನ್ಯಾಯಕ್ಕೂ ಒತ್ತು ನೀಡಬೇಕಿದೆ’ ಎಂದು ಉತ್ತರಿಸಿದರು.</p>.<p>‘ರಾಜ್ಯಸಭೆಗೆ ಸವಿತಾ ಸಮುದಾಯವರೊಬ್ಬರಿಗೆ ಟಿಕೆಟ್ ನೀಡಿದ್ದಕ್ಕೆ ಆ ಇಡೀ ಸಮುದಾಯ ಸಂಭ್ರಮಪಟ್ಟಿದೆ. ಹೀಗೆ ಸಣ್ಣ ಸಮುದಾಯಗಳು, ಪಕ್ಷಕ್ಕಾಗಿ ದುಡಿದವರನ್ನು ಗಮನದಲ್ಲಿಟ್ಟುಕೊಂಡು ನಿರ್ವವಹಿಸಬೇಕಾದ ಸವಾಲು ಇದೆ. ಎಚ್ಚರಿಕೆಯಿಂದ ಆಯ್ಕೆ ಮಾಡಬೇಕಿದೆ. ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷರು, ಕೇಂದ್ರದ ವರಿಷ್ಠರು ಎಲ್ಲರೊಂದಿಗೆ ಚರ್ಚಿಸುತ್ತೇವೆ. ಪಕ್ಷ ಮತ್ತು ಜನರ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>