<p><strong>ಚಿಕ್ಕಮಗಳೂರು:</strong> ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆದಿದ್ದು, ಕಾರ್ಯಕರ್ತರು ಗುರುವಾರ ಕೈ ಮಿಲಾಯಿಸಿ ಪರಸ್ಪರ ಧಿಕ್ಕಾರ ಕೂಗಿದರು.</p><p>ನಗರದ ಹೊರ ವಲಯದ ರಾಂಪುರ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ ವಿಚಾರದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನಡುವೆ ಜಟಾಪಟಿ ಆರಂಭವಾಗಿದೆ. ಗುರುವಾರ ರಸ್ತೆ ಕಾಮಗಾರಿ ವೀಕ್ಷಣೆ ಮಾಡಲು ತೆರಳಿದ್ದ ಸಿ.ಟಿ.ರವಿ ಅವರನ್ನು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.</p>.ಚಿಕ್ಕಮಗಳೂರು | ವಸ್ತಾರೆ ಸಹಕಾರ ಸಂಘದ ಚುನಾವಣೆ ಜೂ.7ಕ್ಕೆ.<p>‘20 ವರ್ಷಗಳಿಂದ ಶಾಸಕರಾಗಿದ್ದ ಅವಧಿಯಲ್ಲಿ ರಸ್ತೆ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಶಾಸಕ ಎಚ್.ಡಿ.ತಮ್ಮಯ್ಯ ಆಸಕ್ತಿಯಿಂದ ಕಾಮಗಾರಿ ಕಾರ್ಯಾದೇಶವಾಗಿದೆ. ಈಗಲೂ ಕಾಮಗಾರಿ ಆರಂಭಿಸಲು ವಿಳಂಬ ಮಾಡಲಾಗುತ್ತಿದ್ದು, ಇದಕ್ಕೆ ಸಿ.ಟಿ.ರವಿ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>‘ಕಾಮಗಾರಿಗೆ ಮಂಜೂರಾತಿ ಕೊಡಿಸಿರುವುದು ನಾನು. ಆರಂಭವಾಗಲು ವಿಳಂಬ ಆಗುವುದಕ್ಕೆ ಕಾಂಗ್ರೆಸ್ ಕಾರಣ. 2022ರಲ್ಲಿ ಮಂಜೂರಾಗಿದ್ದ ಕಾಮಗಾರಿಗೆ ಈಗ ಕಾರ್ಯಾದೇಶ ನೀಡಲಾಗಿದೆ’ ಎಂದು ಸಿ.ಟಿ.ರವಿ ಹೇಳಿದರು.</p><p>ಅಷ್ಟರಲ್ಲಿ ಎರಡೂ ಕಡೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪರಸ್ಪರ ಧಿಕ್ಕಾರ ಕೂಗಿದರು. ನೂಕಾಟ, ತಳ್ಳಾಟ ನಡುವೆ ಕೈ ಕೈ ಮಿಲಾಯಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಇರಡೂ ಕಡೆಯ ಕಾರ್ಯಕರ್ತರ ನಡುವೆ ನಿಂತು ಪರಿಸ್ಥಿತಿ ನಿಭಾಯಿಸಲು ಪರದಾಡಿದರು.</p>.ರಾಜ್ಯದಲ್ಲಿರುವುದು ಹಗಲು ದರೋಡೆ ಸರ್ಕಾರ: ಸಿ.ಟಿ. ರವಿ.<p>‘ಮಳೆಗಾಲ ಹತ್ತಿರವಾಗುತ್ತಿದ್ದರೂ ಕಾಮಗಾರಿ ಆರಂಭಿಸಲು ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಊರಿನ ಕಡೆಯಿಂದ ಕಾಮಗಾರಿ ಆರಂಭಿಸದೆ, ಕಾಡಿನ ಕಡೆಯಿಂದ ಕಾಮಗಾರಿ ಆರಂಭಿಸಲಾಗಿತ್ತು. ಸಿ.ಟಿ.ರವಿ ಅವರ ಸಂಬಂಧಿಯೇ ಗುತ್ತಿಗೆದಾರರಾಗಿದ್ದು, ಶಾಸಕ ಎಚ್.ಡಿ.ತಮ್ಮಯ್ಯ ಅವರಿಗೆ ಕೆಟ್ಟ ಹೆಸರು ತರುವುದು ಅವರ ಉದ್ದೇಶ. ಮಳೆ ಆರಂಭವಾಗಿ ಕಾಮಗಾರಿ ಸ್ಥಗಿತವಾದರೆ ಜನ ಶಾಸಕರನ್ನು ಶಪಿಸಲಿ ಎಂದು ಹೀಗೆ ಮಾಡಿದ್ದಾರೆ’ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಆರೋಪ.</p><p>ನಾಲ್ಕು ದಿನಗಳ ಹಿಂದೆ ಇದೇ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಎಚ್.ಡಿ.ತಮ್ಮಯ್ಯ ಊರಿನ ಕಡೆಯಿಂದಲೇ ಕಾಮಗಾರಿ ಆರಂಭಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳಿಗೆ ತಾಕೀತು ಮಾಡಿದ್ದರು.</p>.ಅಹಿಂದ ವರ್ಗಕ್ಕೆ ಸಾಮಾಜಿಕ ಅನ್ಯಾಯ: ಸಿ.ಟಿ. ರವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆದಿದ್ದು, ಕಾರ್ಯಕರ್ತರು ಗುರುವಾರ ಕೈ ಮಿಲಾಯಿಸಿ ಪರಸ್ಪರ ಧಿಕ್ಕಾರ ಕೂಗಿದರು.</p><p>ನಗರದ ಹೊರ ವಲಯದ ರಾಂಪುರ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ ವಿಚಾರದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನಡುವೆ ಜಟಾಪಟಿ ಆರಂಭವಾಗಿದೆ. ಗುರುವಾರ ರಸ್ತೆ ಕಾಮಗಾರಿ ವೀಕ್ಷಣೆ ಮಾಡಲು ತೆರಳಿದ್ದ ಸಿ.ಟಿ.ರವಿ ಅವರನ್ನು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.</p>.ಚಿಕ್ಕಮಗಳೂರು | ವಸ್ತಾರೆ ಸಹಕಾರ ಸಂಘದ ಚುನಾವಣೆ ಜೂ.7ಕ್ಕೆ.<p>‘20 ವರ್ಷಗಳಿಂದ ಶಾಸಕರಾಗಿದ್ದ ಅವಧಿಯಲ್ಲಿ ರಸ್ತೆ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಶಾಸಕ ಎಚ್.ಡಿ.ತಮ್ಮಯ್ಯ ಆಸಕ್ತಿಯಿಂದ ಕಾಮಗಾರಿ ಕಾರ್ಯಾದೇಶವಾಗಿದೆ. ಈಗಲೂ ಕಾಮಗಾರಿ ಆರಂಭಿಸಲು ವಿಳಂಬ ಮಾಡಲಾಗುತ್ತಿದ್ದು, ಇದಕ್ಕೆ ಸಿ.ಟಿ.ರವಿ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>‘ಕಾಮಗಾರಿಗೆ ಮಂಜೂರಾತಿ ಕೊಡಿಸಿರುವುದು ನಾನು. ಆರಂಭವಾಗಲು ವಿಳಂಬ ಆಗುವುದಕ್ಕೆ ಕಾಂಗ್ರೆಸ್ ಕಾರಣ. 2022ರಲ್ಲಿ ಮಂಜೂರಾಗಿದ್ದ ಕಾಮಗಾರಿಗೆ ಈಗ ಕಾರ್ಯಾದೇಶ ನೀಡಲಾಗಿದೆ’ ಎಂದು ಸಿ.ಟಿ.ರವಿ ಹೇಳಿದರು.</p><p>ಅಷ್ಟರಲ್ಲಿ ಎರಡೂ ಕಡೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪರಸ್ಪರ ಧಿಕ್ಕಾರ ಕೂಗಿದರು. ನೂಕಾಟ, ತಳ್ಳಾಟ ನಡುವೆ ಕೈ ಕೈ ಮಿಲಾಯಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಇರಡೂ ಕಡೆಯ ಕಾರ್ಯಕರ್ತರ ನಡುವೆ ನಿಂತು ಪರಿಸ್ಥಿತಿ ನಿಭಾಯಿಸಲು ಪರದಾಡಿದರು.</p>.ರಾಜ್ಯದಲ್ಲಿರುವುದು ಹಗಲು ದರೋಡೆ ಸರ್ಕಾರ: ಸಿ.ಟಿ. ರವಿ.<p>‘ಮಳೆಗಾಲ ಹತ್ತಿರವಾಗುತ್ತಿದ್ದರೂ ಕಾಮಗಾರಿ ಆರಂಭಿಸಲು ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಊರಿನ ಕಡೆಯಿಂದ ಕಾಮಗಾರಿ ಆರಂಭಿಸದೆ, ಕಾಡಿನ ಕಡೆಯಿಂದ ಕಾಮಗಾರಿ ಆರಂಭಿಸಲಾಗಿತ್ತು. ಸಿ.ಟಿ.ರವಿ ಅವರ ಸಂಬಂಧಿಯೇ ಗುತ್ತಿಗೆದಾರರಾಗಿದ್ದು, ಶಾಸಕ ಎಚ್.ಡಿ.ತಮ್ಮಯ್ಯ ಅವರಿಗೆ ಕೆಟ್ಟ ಹೆಸರು ತರುವುದು ಅವರ ಉದ್ದೇಶ. ಮಳೆ ಆರಂಭವಾಗಿ ಕಾಮಗಾರಿ ಸ್ಥಗಿತವಾದರೆ ಜನ ಶಾಸಕರನ್ನು ಶಪಿಸಲಿ ಎಂದು ಹೀಗೆ ಮಾಡಿದ್ದಾರೆ’ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಆರೋಪ.</p><p>ನಾಲ್ಕು ದಿನಗಳ ಹಿಂದೆ ಇದೇ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಎಚ್.ಡಿ.ತಮ್ಮಯ್ಯ ಊರಿನ ಕಡೆಯಿಂದಲೇ ಕಾಮಗಾರಿ ಆರಂಭಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳಿಗೆ ತಾಕೀತು ಮಾಡಿದ್ದರು.</p>.ಅಹಿಂದ ವರ್ಗಕ್ಕೆ ಸಾಮಾಜಿಕ ಅನ್ಯಾಯ: ಸಿ.ಟಿ. ರವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>