<p><strong>ಶೃಂಗೇರಿ:</strong> ನವರಾತ್ರಿಯ ಪ್ರಯುಕ್ತ ಶಾರದಾ ಮಠದಲ್ಲಿ ಶನಿವಾರ ಶೃಂಗೇರಿ ಶಾರದೆ ರಾಜರಾಜೇಶ್ವರಿ ಅಲಂಕಾರದಲ್ಲಿ ಕಂಗೊಳಿಸಿದಳು.</p>.<p>ಕೈಯಲ್ಲಿ ಪಾಶ, ಅಂಕುಶ, ಪುಷ್ಪಬಾಣ ಮತ್ತು ಬಿಲ್ಲುಗಳನ್ನು ಧರಿಸಿ ಕರುಣಪೂರಿತ ದೃಷ್ಟಿಯುಳ್ಳವಳಾಗಿ, ಸರ್ವಾಲಂಕಾರ ಭೂಷಿತಳಾಗಿ, ಕಾಮೇಶ್ವರನ ಪ್ರಾಣಕಾಂತೆಯಾಗಿ ಭಕ್ತರಿಗೆ ಕಾಣಿಸಿದಳು.</p>.<p>ಶಾರದೆಯ ಸನ್ನಿಧಿಯಲ್ಲಿ ಕಿರಿಯ ಗುರುಗಳಾದ ವಿಧುಶೇಖರಭಾರತೀ ಸ್ವಾಮೀಜಿ ಅವರಿಂದ ಶಾರದಾಂಬೆಗೆ ವಿಶೇಷಪೂಜೆ, ಪಾರಾಯಣಗಳು, ಜಪಗಳು, ಕುಮಾರೀಪೂಜೆ, ಸುವಾಸಿನೀ ಪೂಜೆ ಮುಂತಾದ ಧಾರ್ಮಿಕ ಪ್ರಕ್ರಿಯೆಗಳು ನೆರವೇರಿದವು. ರಾತ್ರಿ ಸರಳವಾಗಿ ದರ್ಬಾರು ನಡೆಸಿದರು.</p>.<p>ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್ಗಳಿಗೆ ರಜಾವಿದ್ದ ಕಾರಣ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಪ್ರವಾಸಿಗರು ಶಾರದೆಯ ದರ್ಶನ ಪಡೆದು ಭೋಜನ ಸ್ವೀಕರಿಸಿದರು. ಕೆರೆಕಟ್ಟೆ ಹಾಗೂ ಆಗುಂಬೆ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿತ್ತು.</p>.<p class="Briefhead"><strong>ಕಿರಾಳಮ್ಮ ದೇವಾಲಯ: ದುರ್ಗಾಷ್ಟಮಿ ಪೂಜೆ</strong></p>.<p>ಅಜ್ಜಂಪುರ: ನವರಾತ್ರಿ ಹಿನ್ನೆಲೆಯಲ್ಲಿ ಶನಿವಾರ ಗ್ರಾಮ ದೇವತೆ ಕಿರಾಳಮ್ಮ ದೇಗುಲದಲ್ಲಿ ವಿಶೇಷ ಪೂಜೆ ನಡೆಯಿತು.</p>.<p>ಅರ್ಚಕ ಪ್ರಭಾಕರ ಭಟ್ ಅವರ ನೇತೃತ್ವದಲ್ಲಿ ತಾಯಿ ಕಿರಾಳಮ್ಮ ದೇವಿಗೆ ಪಂಚಾಮೃತ ಅಭಿಷೇಕ ನಡೆಯಿತು. ದೇವಿಯನ್ನು ದುರ್ಗಾಸ್ವರೂಪಿಯಾಗಿ ಅಲಂಕರಿಸಲಾಯಿತು.</p>.<p>ಬಳಿಕ ಸಹಸ್ರ ನಾಮಾರ್ಚನೆ, ವಿಶೇಷ ಪೂಜೆ ಸಲ್ಲಿಸಲಾಯಿತು. ಇದಕ್ಕೂ ಮುನ್ನ ಪುಣ್ಯಾಹ, ದುರ್ಗಾ ಹೋಮದಂತಹ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ:</strong> ನವರಾತ್ರಿಯ ಪ್ರಯುಕ್ತ ಶಾರದಾ ಮಠದಲ್ಲಿ ಶನಿವಾರ ಶೃಂಗೇರಿ ಶಾರದೆ ರಾಜರಾಜೇಶ್ವರಿ ಅಲಂಕಾರದಲ್ಲಿ ಕಂಗೊಳಿಸಿದಳು.</p>.<p>ಕೈಯಲ್ಲಿ ಪಾಶ, ಅಂಕುಶ, ಪುಷ್ಪಬಾಣ ಮತ್ತು ಬಿಲ್ಲುಗಳನ್ನು ಧರಿಸಿ ಕರುಣಪೂರಿತ ದೃಷ್ಟಿಯುಳ್ಳವಳಾಗಿ, ಸರ್ವಾಲಂಕಾರ ಭೂಷಿತಳಾಗಿ, ಕಾಮೇಶ್ವರನ ಪ್ರಾಣಕಾಂತೆಯಾಗಿ ಭಕ್ತರಿಗೆ ಕಾಣಿಸಿದಳು.</p>.<p>ಶಾರದೆಯ ಸನ್ನಿಧಿಯಲ್ಲಿ ಕಿರಿಯ ಗುರುಗಳಾದ ವಿಧುಶೇಖರಭಾರತೀ ಸ್ವಾಮೀಜಿ ಅವರಿಂದ ಶಾರದಾಂಬೆಗೆ ವಿಶೇಷಪೂಜೆ, ಪಾರಾಯಣಗಳು, ಜಪಗಳು, ಕುಮಾರೀಪೂಜೆ, ಸುವಾಸಿನೀ ಪೂಜೆ ಮುಂತಾದ ಧಾರ್ಮಿಕ ಪ್ರಕ್ರಿಯೆಗಳು ನೆರವೇರಿದವು. ರಾತ್ರಿ ಸರಳವಾಗಿ ದರ್ಬಾರು ನಡೆಸಿದರು.</p>.<p>ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್ಗಳಿಗೆ ರಜಾವಿದ್ದ ಕಾರಣ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಪ್ರವಾಸಿಗರು ಶಾರದೆಯ ದರ್ಶನ ಪಡೆದು ಭೋಜನ ಸ್ವೀಕರಿಸಿದರು. ಕೆರೆಕಟ್ಟೆ ಹಾಗೂ ಆಗುಂಬೆ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿತ್ತು.</p>.<p class="Briefhead"><strong>ಕಿರಾಳಮ್ಮ ದೇವಾಲಯ: ದುರ್ಗಾಷ್ಟಮಿ ಪೂಜೆ</strong></p>.<p>ಅಜ್ಜಂಪುರ: ನವರಾತ್ರಿ ಹಿನ್ನೆಲೆಯಲ್ಲಿ ಶನಿವಾರ ಗ್ರಾಮ ದೇವತೆ ಕಿರಾಳಮ್ಮ ದೇಗುಲದಲ್ಲಿ ವಿಶೇಷ ಪೂಜೆ ನಡೆಯಿತು.</p>.<p>ಅರ್ಚಕ ಪ್ರಭಾಕರ ಭಟ್ ಅವರ ನೇತೃತ್ವದಲ್ಲಿ ತಾಯಿ ಕಿರಾಳಮ್ಮ ದೇವಿಗೆ ಪಂಚಾಮೃತ ಅಭಿಷೇಕ ನಡೆಯಿತು. ದೇವಿಯನ್ನು ದುರ್ಗಾಸ್ವರೂಪಿಯಾಗಿ ಅಲಂಕರಿಸಲಾಯಿತು.</p>.<p>ಬಳಿಕ ಸಹಸ್ರ ನಾಮಾರ್ಚನೆ, ವಿಶೇಷ ಪೂಜೆ ಸಲ್ಲಿಸಲಾಯಿತು. ಇದಕ್ಕೂ ಮುನ್ನ ಪುಣ್ಯಾಹ, ದುರ್ಗಾ ಹೋಮದಂತಹ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>