ಚಿಕ್ಕಮಗಳೂರು: ದತ್ತ ಜಯಂತ್ಯುತ್ಸವ ನಿಮಿತ್ತ ಡಿ.16ರಿಂದ 20ರವರೆಗೆ ಗಿರಿಶ್ರೇಣಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಡಿ.17ರಿಂದ 19ರವರೆಗೆ ದತ್ತ ಜಯಂತಿ ಜರುಗಲಿದೆ. ಈ ನಿಮಿತ್ತ ಡಿ.16ರಂದು ಬೆಳಿಗ್ಗೆ 6 ಗಂಟೆಯಿಂದ 20ರಂದು ಬೆಳಿಗ್ಗೆ 6 ಗಂಟೆವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಗಿರಿ, ಮಾಣಿಕ್ಯಧಾರಾ, ಹೊನ್ನಮ್ಮನಹಳ್ಳ, ಐಡಿ ಪೀಡ ಭಾಗದ ತಾಣಗಳಿಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ.