<p><strong>ಮೂಡಿಗೆರೆ</strong>: ವಾರದಿಂದ ಆರಂಭವಾಗಿದ್ದ ದತ್ತ ಜಯಂತಿ ತಾಲ್ಲೂಕಿನಾದ್ಯಂತ ಗುರುವಾರ ದತ್ತ ಪಾದುಕೆ ದರ್ಶನದೊಂದಿಗೆ ಮುಕ್ತಾಯ ಕಂಡಿತು.</p>.<p>ಮುನ್ನಚ್ಚರಿಕೆ ಕ್ರಮವಾಗಿ ಹೆದ್ದಾರಿ ಇಕ್ಕೆಲದ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳನ್ನು ಬಂದ್ ಮಾಡಿಸಿದ್ದರಿಂದ ತಾಲ್ಲೂಕಿನ ಕೊಟ್ಟಿಗೆಹಾರದಿಂದ ಭೂತನಕಾಡಿನವರೆಗೂ ಹೆದ್ದಾರಿ ಇಕ್ಕೆಲ ಸಂಪೂರ್ಣವಾಗಿ ಬಂದ್ ಆಗಿತ್ತು.</p>.<p>ನಸುಕಿನಿಂದಲೇ ದತ್ತಮಾಲಾಧಾರಿಗಳು ದತ್ತಪೀಠದತ್ತ ವಾಹನಗಳಲ್ಲಿ ತೆರಳುತ್ತಿದ್ದರು. ಈ ಬಾರಿ ಕರಾವಳಿ ಭಾಗದಿಂದ 137 ವಾಹನಗಳಲ್ಲಿ ದತ್ತ ಭಕ್ತರು ಬಂದಿದ್ದು, ಹೆದ್ದಾರಿ ಬದಿಯ ಅಂಗಡಿ ಮುಂಗಟ್ಟು ಬಂದ್ ಆಗಿದ್ದರಿಂದ ಊಟ, ತಿಂಡಿಗಾಗಿ ಪರದಾಡುವಂತಾಗಿತ್ತು. ತಾಲ್ಲೂಕಿನಾದ್ಯಂತ ಧಾರ್ಮಿಕ ಕೇಂದ್ರಗಳಿಗೆ ಪೊಲೀಸ್ ಕಾವಲು ಹಾಕಲಾಗಿತ್ತು. ಪಟ್ಟಣದ ಕೆ.ಎಂ. ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ದತ್ತ ಭಕ್ತರಿಗೆ ಬೆಳಗಿನ ಉಪಹಾರ, ಮಧ್ಯಾಹ್ನದ ಅನ್ನ ಸಂತರ್ಪಣೆ ನಡೆಸಲಾಯಿತು. ರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ದತ್ತ ಪೀಠದಿಂದ ಮನೆಗೆ ತೆರಳುತ್ತಿದ್ದ ತೆರೆದ ವಾಹನದಲ್ಲಿದ್ದ ದತ್ತ ಭಕ್ತರು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ವಾರದಿಂದ ಆರಂಭವಾಗಿದ್ದ ದತ್ತ ಜಯಂತಿ ತಾಲ್ಲೂಕಿನಾದ್ಯಂತ ಗುರುವಾರ ದತ್ತ ಪಾದುಕೆ ದರ್ಶನದೊಂದಿಗೆ ಮುಕ್ತಾಯ ಕಂಡಿತು.</p>.<p>ಮುನ್ನಚ್ಚರಿಕೆ ಕ್ರಮವಾಗಿ ಹೆದ್ದಾರಿ ಇಕ್ಕೆಲದ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳನ್ನು ಬಂದ್ ಮಾಡಿಸಿದ್ದರಿಂದ ತಾಲ್ಲೂಕಿನ ಕೊಟ್ಟಿಗೆಹಾರದಿಂದ ಭೂತನಕಾಡಿನವರೆಗೂ ಹೆದ್ದಾರಿ ಇಕ್ಕೆಲ ಸಂಪೂರ್ಣವಾಗಿ ಬಂದ್ ಆಗಿತ್ತು.</p>.<p>ನಸುಕಿನಿಂದಲೇ ದತ್ತಮಾಲಾಧಾರಿಗಳು ದತ್ತಪೀಠದತ್ತ ವಾಹನಗಳಲ್ಲಿ ತೆರಳುತ್ತಿದ್ದರು. ಈ ಬಾರಿ ಕರಾವಳಿ ಭಾಗದಿಂದ 137 ವಾಹನಗಳಲ್ಲಿ ದತ್ತ ಭಕ್ತರು ಬಂದಿದ್ದು, ಹೆದ್ದಾರಿ ಬದಿಯ ಅಂಗಡಿ ಮುಂಗಟ್ಟು ಬಂದ್ ಆಗಿದ್ದರಿಂದ ಊಟ, ತಿಂಡಿಗಾಗಿ ಪರದಾಡುವಂತಾಗಿತ್ತು. ತಾಲ್ಲೂಕಿನಾದ್ಯಂತ ಧಾರ್ಮಿಕ ಕೇಂದ್ರಗಳಿಗೆ ಪೊಲೀಸ್ ಕಾವಲು ಹಾಕಲಾಗಿತ್ತು. ಪಟ್ಟಣದ ಕೆ.ಎಂ. ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ದತ್ತ ಭಕ್ತರಿಗೆ ಬೆಳಗಿನ ಉಪಹಾರ, ಮಧ್ಯಾಹ್ನದ ಅನ್ನ ಸಂತರ್ಪಣೆ ನಡೆಸಲಾಯಿತು. ರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ದತ್ತ ಪೀಠದಿಂದ ಮನೆಗೆ ತೆರಳುತ್ತಿದ್ದ ತೆರೆದ ವಾಹನದಲ್ಲಿದ್ದ ದತ್ತ ಭಕ್ತರು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>