ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದತ್ತ ಜಯಂತಿ: ವಿಜೃಂಭಣೆಯ ಶೋಭಾಯಾತ್ರೆ

Published 25 ಡಿಸೆಂಬರ್ 2023, 23:48 IST
Last Updated 25 ಡಿಸೆಂಬರ್ 2023, 23:48 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ನೇತೃತ್ವದಲ್ಲಿ ಶೋಭಾಯಾತ್ರೆ ನಗರದಲ್ಲಿ ಸೋಮವಾರ ವಿಜೃಂಭಣೆಯಿಂದ ನಡೆಯಿತು.

ನಗರದ ರತ್ನಗಿರಿ ರಸ್ತೆಯ ಕಾಮಧೇನು ಮಹಾಶಕ್ತಿ ಗಣಪತಿ ದೇವಾಲಯ ಆವರಣದಿಂದ ಸಂಜೆ ಮೆರವಣಿಗೆ ಹೊರಟಿತು. ಅಲಂಕೃತ ವಾಹನದಲ್ಲಿ ಗುರುದತ್ತಾತ್ರೇಯರ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ನಾಡಿನ ವಿವಿಧೆಡೆಯ  ದತ್ತಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. 

ಶ್ರೀರಾಮ ಸೇರಿ ಹಲವು ಸ್ತಬ್ಧಚಿತ್ರಗಳು ಮೆರವಣಿಗೆಯ ಆಕರ್ಷಣೆಯಾಗಿದ್ದವು. ಪಟಾಕಿ ಸದ್ದು, ಸಾಂಸ್ಕೃತಿಕ ಕಲಾ ತಂಡಗಳ ಮೆರುಗಿನಲ್ಲಿ ಶೋಭಾಯಾತ್ರೆ ಸಾಗಿತು. ಮೆರವಣಿಗೆಯುದ್ದಕ್ಕೂ ಭಗವಾಧ್ವಜಗಳ ಹಾರಾಟ ಜೋರಾಗಿತ್ತು. ಡಿ.ಜೆ ಅಬ್ಬರ, ಹಾಡು, ಸಂಗೀತಕ್ಕೆ ಯುವಕ –ಯುವತಿಯುರು ಕುಣಿದು ಕುಪ್ಪಳಿಸಿದರು.

‌ಮಾರ್ಗದುದ್ದಕ್ಕೂ ಇಕ್ಕೆಲಗಳಲ್ಲಿ ಕಟ್ಟಡಗಳ ಮಹಡಿಗಳಲ್ಲಿ ನಿಂತಿದ್ದ ಜನರು ಶೋಭಾ ಯಾತ್ರೆ ವೀಕ್ಷಿಸಿದರು. 

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ಡಿ.ಎನ್. ಜೀವರಾಜ್, ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಧೀರಜ್ ಮುನಿರಾಜು, ಶಾಸಕರಾದ ವಿ.ಸುನೀಲ್‌ಕುಮಾರ್, ಎಚ್‌.ಕೆ.ಸುರೇಶ್ ಭಾಗವಹಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT