ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದತ್ತಮಾಲಾ ಅಭಿಯಾನ: ಮಾಲಾಧಾರಣೆ

ವಿಶ್ವ ಹಿಂದು ಪರಿಷತ್‌, ಬಜರಂಗದಳ
Last Updated 29 ನವೆಂಬರ್ 2022, 6:05 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ವಿಶ್ವ ಹಿಂದು ಪರಿಷತ್‌, ಬಜರಂಗದಳದಿಂದ ಜರುಗುವ ದತ್ತ ಮಾಲಾ ಅಭಿಯಾನದ ಅಂಗವಾಗಿ ನಗರದ ಕಾಮಧೇನು ಗಣಪತಿ ದೇಗುಲದಲ್ಲಿ ಸೋಮವಾರ ಮಾಲಾಧಾರಣೆ ಕೈಂಕರ್ಯ ನೆರವೇರಿತು.

ಶ್ರೀಗುರುದತ್ತಾತ್ರೇಯ ಸ್ವಾಮಿಗೆ ಪೂಜೆ ನೆರವೇರಿಸಲಾಯಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಜರಂಗದಳ ಪ್ರಾಂತಸಹಸಂಚಾಲಕ ರಘುಸಕಲೇಶಪುರ ಸಹಿತ ಹಲವರು ಮಾಲೆ ಧಾರಣೆ ಮಾಡಿದರು. ಸುರೇಶ ಜ.ಪೈ ಅವರ ‘ಇನಾಂ ಶ್ರೀದತ್ತಪೀಠ – ಚಿಕ್ಕಮಗಳೂರು‘ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.


‘ಅರ್ಚಕರ ನೇಮಕಕ್ಕೆ ವ್ಯವಸ್ಥಾಪನಾ ಸಮಿತಿ ನಿರ್ಣಯಿಸಲಿದೆ’

‘ವ್ಯವಸ್ಥಾಪನಾ ಸಮಿತಿಯು ಸಭೆ ನಡೆಸಿ ದತ್ತ ಪೀಠಕ್ಕೆ ಹಿಂದೂ ಅರ್ಚಕರ ನೇಮಕ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳಲಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.

‘ತಾತ್ಕಾಲಿಕ ಅರ್ಚಕರ ನೇಮಕ ಮಾಡಿ ಪೂಜೆ ಪ್ರಾರಂಭಿಸಲು ಆತಂಕ ಇಲ್ಲ. ಸಮಿತಿ ನೇಮಕ ಮಾಡಬಹುದು’ ಎಂದು ಪ್ರತಿಪಾದಿಸಿದರು.

‘ಈ ಬಾರಿ ದತ್ತ ಜಯಂತಿಯಲ್ಲಿ ಹಿಂದೂ ಅರ್ಚಕ ಪೂಜೆ ನೆರವೇರಿಸಲಿದ್ದಾರೆ. ಬಾಬಾಬುಡನ್‌ ದರ್ಗಾದಲ್ಲಿ ಮುಜಾವರ್‌ ಹಾಗೂ ದತ್ತ ಪೀಠದಲ್ಲಿ ಹಿಂದೂ ಅರ್ಚಕ ಕೈಂಕರ್ಯ ನೆರವೇರಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಸಿದ್ದರಾಮಯ್ಯ ಅವರಿಗೆ ಕುಂಕುಮ, ಕೇಸರಿ ಆಗಲ್ಲ. ಟಿಪ್ಪು, ಟೋಪಿ ಅವರಿಗೆ ಇಷ್ಟ. ಸಿದ್ರಾಮುಲ್ಲಾ ಖಾನ್‌ ಎಂದು ಕರೆದರೆ ಅವರಿಗೆ ಆನಂದ ಸಂಗತಿ. ಅದು ಅಸಂಸದೀಯ ಅಥವಾ ಬೈಗುಳದ ಪದವಲ್ಲ’ ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT