<p><strong>ಚಿಕ್ಕಮಗಳೂರು:</strong> ನಗರದ ರತ್ನಗಿರಿ ರಸ್ತೆಯ ಕಾಮಧೇನು ಗಣಪತಿ ದೇಗುಲದಲ್ಲಿ ಬುಧವಾರ ದತ್ತಭಕ್ತರು ಮಾಲೆ ಧಾರಣೆ ಮೂಡುವ ಮೂಲಕ ದತ್ತಮಾಲಾ ಅಭಿಯಾನ ವಿಧ್ಯುಕ್ತವಾಗಿ ಶುರುವಾಯಿತು.</p>.<p>ದೇಗುಲ ಆವರಣದಲ್ಲಿ ಬೆಳಿಗ್ಗೆ 11 ಗಂಟೆ ಹೊತ್ತಿಗೆ ಮಾಲೆ ಧಾರಣೆ ಕೈಂಕರ್ಯ ನಡೆಯಿತು. 70ಕ್ಕೂ ಹೆಚ್ಚು ಭಕ್ತರು ಮಾಲೆ ಧರಿಸಿದರು.</p>.<p>ಅರ್ಚಕ ರಘು ಅವಧಾನಿ ಅವರು ಪೂಜಾ ಕೈಂಕರ್ಯ ನೆರವೇರಿಸಿದರು. ಭಕ್ತರು ಭಜನೆ ಮಾಡಿ ಗುರುದತ್ತಾತ್ರೇಯ ನಾಮಸ್ಮರಣೆ ಮಾಡಿದರು. ವಿಶ್ವಹಿಂದು ಪರಿಷತ್, ಬಜರಂಗದಳದ ಮುಖಂಡರು, ಕಾರ್ಯಕರ್ತರು ಇದ್ದರು.</p>.<p>ವಿಶ್ವ ಹಿಂದು ಪರಿಷತ್ ಬಿ.ಎ.ಶಿವಶಂಕರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ದತ್ತ ಜಯಂತಿಗೆ ಪೂರ್ವಭಾವಿಯಾಗಿ ದತ್ತಭಕ್ತರು ಮಾಲೆ ಧಾರಣೆ ಮಾಡಿದ್ದಾರೆ. ಮಾಲಾಧಾರಿಗಳು ವ್ರತಾಚರಣೆ ಮಾಡಿ, ದತ್ತಜಯಂತಿಯಂದು (22ರಂದು) ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಮಾಡುವರು’ ಎಂದು ತಿಳಿಸಿದರು.</p>.<p>‘ಮಾಲೆ ಧಾರಣೆಯಂದೇ ಸುಧರ್ಮ ರಥಯಾತ್ರೆಗೆ ಚಾಲನೆ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಜಿಲ್ಲಾಡಳಿತವು 16ರಂದು ಚಾಲನೆ ನೀಡಲು ಅನುಮತಿ ನೀಡಿದೆ. ಹೀಗಾಗಿ, ಈಗಾಗಲೇ ನಿಗದಿಪಡಿಸಿದ್ದ ರಥಯಾತ್ರೆ ಸಂಚಾರ ವೇಳಾಪಟ್ಟಿಯಲ್ಲಿ ವ್ಯತ್ಯಯಗಳಾಗಲಿದೆ. ಈ ನಿಟ್ಟಿನಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.</p>.<p>‘ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸಬೇಕು, ಗೋರಿಗಳನ್ನು ಸ್ಥಳಾಂತರಿಸಬೇಕು ಎಂಬುದು ಸಹಿತ ಹಲವು ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ. ದತ್ತಪೀಠ ಮುಕ್ತಿಗಾಗಿ ಹೋರಾಟ ಮಾಡುತ್ತೇವೆ’ ಎಂದರು.</p>.<p>ಬಜರಂಗದಳದ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಮಾತನಾಡಿ, ‘ದತ್ತಪೀಠದಲ್ಲಿ ತ್ರಿಕಾಲ ಪೂಜೆಗೆ ಅವಕಾಶ ನೀಡಬೇಕು, ಹಿಂದೂ ಅರ್ಚಕರನ್ನು ನೇಮಿಸಬೇಕು, ಗುರುದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪನೆ ಮಾಡಬೇಕು, ಔದುಂಬರ ವೃಕ್ಷಕ್ಕೆ ಅಳವಡಿಸಿರುವ ಬೇಲಿ ತೆರವುಗೊಳಿಸಬೇಕು, ಗೋರಿಗಳನ್ನು ಸ್ಥಳಾಂತರಿಸಬೇಕು ಎಂಬುದು ನಮ್ಮ ಬೇಡಿಕೆಗಳು’ ಎಂದು ಹೇಳಿದರು.</p>.<p>‘ಸುಧರ್ಮ ರಥಯಾತ್ರೆ ಗೆ ಹಿರೇಮಗಳೂರಿನಲ್ಲಿ ಚಾಲನೆ ನೀಡಲಾಗುವುದು. ಹೋಬಳಿ, ತಾಲ್ಲೂಕು ಕೇಂದ್ರಗಲ್ಲಿ ರಥಯಾತ್ರೆ ಸಂಚರಿಸಲಿದೆ’ ಎಂದರು.</p>.<p>ಬಜರಂಗದಳದ ಕರ್ನಾಟಕ ರಾಜ್ಯ ದಕ್ಷಿಣ ಪ್ರಾಂತ ಸಹಸಂಯೋಜಕ ರಘು ಸಕಲೇಶಪುರ ಮಾತನಾಡಿ, ‘ಕಾರ್ಯಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶದ ಸಂದೇಶ ಹಾಕಿರುವುದಕ್ಕೆ ಕೋಮುಸೌಹಾರ್ದ ವೇದಿಕೆಯವರು ನಮ್ಮ ಮೇಲೆ ದೂರು ನೀಡಿದ್ದಾರೆ. ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>ವಿಶ್ವ ಹಿಂದು ಪರಿಷತ್ ಜಿಲ್ಲಾ ಉಪಾಧ್ಯಕ್ಷ ಪ್ರೇಂಕಿರಣ್, ಮುಖಂಡ ವರಸಿದ್ಧಿ ವೇಣುಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ನಗರದ ರತ್ನಗಿರಿ ರಸ್ತೆಯ ಕಾಮಧೇನು ಗಣಪತಿ ದೇಗುಲದಲ್ಲಿ ಬುಧವಾರ ದತ್ತಭಕ್ತರು ಮಾಲೆ ಧಾರಣೆ ಮೂಡುವ ಮೂಲಕ ದತ್ತಮಾಲಾ ಅಭಿಯಾನ ವಿಧ್ಯುಕ್ತವಾಗಿ ಶುರುವಾಯಿತು.</p>.<p>ದೇಗುಲ ಆವರಣದಲ್ಲಿ ಬೆಳಿಗ್ಗೆ 11 ಗಂಟೆ ಹೊತ್ತಿಗೆ ಮಾಲೆ ಧಾರಣೆ ಕೈಂಕರ್ಯ ನಡೆಯಿತು. 70ಕ್ಕೂ ಹೆಚ್ಚು ಭಕ್ತರು ಮಾಲೆ ಧರಿಸಿದರು.</p>.<p>ಅರ್ಚಕ ರಘು ಅವಧಾನಿ ಅವರು ಪೂಜಾ ಕೈಂಕರ್ಯ ನೆರವೇರಿಸಿದರು. ಭಕ್ತರು ಭಜನೆ ಮಾಡಿ ಗುರುದತ್ತಾತ್ರೇಯ ನಾಮಸ್ಮರಣೆ ಮಾಡಿದರು. ವಿಶ್ವಹಿಂದು ಪರಿಷತ್, ಬಜರಂಗದಳದ ಮುಖಂಡರು, ಕಾರ್ಯಕರ್ತರು ಇದ್ದರು.</p>.<p>ವಿಶ್ವ ಹಿಂದು ಪರಿಷತ್ ಬಿ.ಎ.ಶಿವಶಂಕರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ದತ್ತ ಜಯಂತಿಗೆ ಪೂರ್ವಭಾವಿಯಾಗಿ ದತ್ತಭಕ್ತರು ಮಾಲೆ ಧಾರಣೆ ಮಾಡಿದ್ದಾರೆ. ಮಾಲಾಧಾರಿಗಳು ವ್ರತಾಚರಣೆ ಮಾಡಿ, ದತ್ತಜಯಂತಿಯಂದು (22ರಂದು) ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಮಾಡುವರು’ ಎಂದು ತಿಳಿಸಿದರು.</p>.<p>‘ಮಾಲೆ ಧಾರಣೆಯಂದೇ ಸುಧರ್ಮ ರಥಯಾತ್ರೆಗೆ ಚಾಲನೆ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಜಿಲ್ಲಾಡಳಿತವು 16ರಂದು ಚಾಲನೆ ನೀಡಲು ಅನುಮತಿ ನೀಡಿದೆ. ಹೀಗಾಗಿ, ಈಗಾಗಲೇ ನಿಗದಿಪಡಿಸಿದ್ದ ರಥಯಾತ್ರೆ ಸಂಚಾರ ವೇಳಾಪಟ್ಟಿಯಲ್ಲಿ ವ್ಯತ್ಯಯಗಳಾಗಲಿದೆ. ಈ ನಿಟ್ಟಿನಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.</p>.<p>‘ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸಬೇಕು, ಗೋರಿಗಳನ್ನು ಸ್ಥಳಾಂತರಿಸಬೇಕು ಎಂಬುದು ಸಹಿತ ಹಲವು ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ. ದತ್ತಪೀಠ ಮುಕ್ತಿಗಾಗಿ ಹೋರಾಟ ಮಾಡುತ್ತೇವೆ’ ಎಂದರು.</p>.<p>ಬಜರಂಗದಳದ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಮಾತನಾಡಿ, ‘ದತ್ತಪೀಠದಲ್ಲಿ ತ್ರಿಕಾಲ ಪೂಜೆಗೆ ಅವಕಾಶ ನೀಡಬೇಕು, ಹಿಂದೂ ಅರ್ಚಕರನ್ನು ನೇಮಿಸಬೇಕು, ಗುರುದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪನೆ ಮಾಡಬೇಕು, ಔದುಂಬರ ವೃಕ್ಷಕ್ಕೆ ಅಳವಡಿಸಿರುವ ಬೇಲಿ ತೆರವುಗೊಳಿಸಬೇಕು, ಗೋರಿಗಳನ್ನು ಸ್ಥಳಾಂತರಿಸಬೇಕು ಎಂಬುದು ನಮ್ಮ ಬೇಡಿಕೆಗಳು’ ಎಂದು ಹೇಳಿದರು.</p>.<p>‘ಸುಧರ್ಮ ರಥಯಾತ್ರೆ ಗೆ ಹಿರೇಮಗಳೂರಿನಲ್ಲಿ ಚಾಲನೆ ನೀಡಲಾಗುವುದು. ಹೋಬಳಿ, ತಾಲ್ಲೂಕು ಕೇಂದ್ರಗಲ್ಲಿ ರಥಯಾತ್ರೆ ಸಂಚರಿಸಲಿದೆ’ ಎಂದರು.</p>.<p>ಬಜರಂಗದಳದ ಕರ್ನಾಟಕ ರಾಜ್ಯ ದಕ್ಷಿಣ ಪ್ರಾಂತ ಸಹಸಂಯೋಜಕ ರಘು ಸಕಲೇಶಪುರ ಮಾತನಾಡಿ, ‘ಕಾರ್ಯಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶದ ಸಂದೇಶ ಹಾಕಿರುವುದಕ್ಕೆ ಕೋಮುಸೌಹಾರ್ದ ವೇದಿಕೆಯವರು ನಮ್ಮ ಮೇಲೆ ದೂರು ನೀಡಿದ್ದಾರೆ. ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>ವಿಶ್ವ ಹಿಂದು ಪರಿಷತ್ ಜಿಲ್ಲಾ ಉಪಾಧ್ಯಕ್ಷ ಪ್ರೇಂಕಿರಣ್, ಮುಖಂಡ ವರಸಿದ್ಧಿ ವೇಣುಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>