<p><strong>ಚಿಕ್ಕಮಗಳೂರು:</strong> ತಾಲ್ಲೂಕಿನ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಗುಹೆಯೊಳಗೆ ಫೋಟೊ ತೆಗೆಯುವುದಕ್ಕೆ ನಿರ್ಬಂಧ ಇದ್ದರೂ, ಸೋಮವಾರ ದತ್ತ ಪಾದುಕೆ ದರ್ಶನಕ್ಕೆ ತೆರಳಿದ್ದಾಗ ಅಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರ ಫೋಟೊ ಕ್ಲಿಕ್ಕಿಸಿ ನಿಯಮ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.</p>.<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಚಿವ ರವಿ ಅವರು ಸೋಮವಾರ ದತ್ತಪೀಠಕ್ಕೆ ತೆರಳಿದ್ದರು. ಆ ವೇಳೆ ಗುಹೆಯೊಳಗೆ ಅವರು ನಮಿಸುತ್ತಿರುವ ಫೋಟೊ ಕ್ಲಿಕ್ಕಿಸಲಾಗಿದೆ. ಫೋಟೊಗಳು ‘ವಾಟ್ಸ್ಆ್ಯಪ್’ ಗುಂಪುಗಳಲ್ಲಿ ಹರಿದಾಡುತ್ತಿದೆ.</p>.<p>ಗುಹೆಯೊಳಗೆ ವಿಡಿಯೊಗ್ರಫಿ, ಫೋಟೊಗ್ರಫಿ ನಿಷೇಧಿಸಲಾಗಿದೆ. ಫೋಟೊ ತೆಗೆದಿರುವುದು ವಿವಾದಕ್ಕೆ ಎಡೆಮಾಡಿದೆ.</p>.<p>‘ಗುಹೆಯೊಳಗೆ ಸಚಿವರ ಫೋಟೊ ತೆಗೆದಿರುವುದು ಗೊತ್ತಿಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ತಿಳಿಸಿದರು.</p>.<p>‘ಫೋಟೊ ತೆಗೆದಿರುವುದು ಗೊತ್ತಿಲ್ಲ. ಯಾರೋ ಸೆಲ್ಫೋನ್ ಕ್ಯಾಮೆರಾದಲ್ಲಿ ಕ್ಲಿಕ್ಕಿಸಿಬಹುದು’ ಎಂದು ಸಚಿವ ರವಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ತಾಲ್ಲೂಕಿನ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಗುಹೆಯೊಳಗೆ ಫೋಟೊ ತೆಗೆಯುವುದಕ್ಕೆ ನಿರ್ಬಂಧ ಇದ್ದರೂ, ಸೋಮವಾರ ದತ್ತ ಪಾದುಕೆ ದರ್ಶನಕ್ಕೆ ತೆರಳಿದ್ದಾಗ ಅಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರ ಫೋಟೊ ಕ್ಲಿಕ್ಕಿಸಿ ನಿಯಮ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.</p>.<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಚಿವ ರವಿ ಅವರು ಸೋಮವಾರ ದತ್ತಪೀಠಕ್ಕೆ ತೆರಳಿದ್ದರು. ಆ ವೇಳೆ ಗುಹೆಯೊಳಗೆ ಅವರು ನಮಿಸುತ್ತಿರುವ ಫೋಟೊ ಕ್ಲಿಕ್ಕಿಸಲಾಗಿದೆ. ಫೋಟೊಗಳು ‘ವಾಟ್ಸ್ಆ್ಯಪ್’ ಗುಂಪುಗಳಲ್ಲಿ ಹರಿದಾಡುತ್ತಿದೆ.</p>.<p>ಗುಹೆಯೊಳಗೆ ವಿಡಿಯೊಗ್ರಫಿ, ಫೋಟೊಗ್ರಫಿ ನಿಷೇಧಿಸಲಾಗಿದೆ. ಫೋಟೊ ತೆಗೆದಿರುವುದು ವಿವಾದಕ್ಕೆ ಎಡೆಮಾಡಿದೆ.</p>.<p>‘ಗುಹೆಯೊಳಗೆ ಸಚಿವರ ಫೋಟೊ ತೆಗೆದಿರುವುದು ಗೊತ್ತಿಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ತಿಳಿಸಿದರು.</p>.<p>‘ಫೋಟೊ ತೆಗೆದಿರುವುದು ಗೊತ್ತಿಲ್ಲ. ಯಾರೋ ಸೆಲ್ಫೋನ್ ಕ್ಯಾಮೆರಾದಲ್ಲಿ ಕ್ಲಿಕ್ಕಿಸಿಬಹುದು’ ಎಂದು ಸಚಿವ ರವಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>