ಚಿಕ್ಕಮಗಳೂರು: ತಾಲ್ಲೂಕಿನ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಗುಹೆಯೊಳಗೆ ಫೋಟೊ ತೆಗೆಯುವುದಕ್ಕೆ ನಿರ್ಬಂಧ ಇದ್ದರೂ, ಸೋಮವಾರ ದತ್ತ ಪಾದುಕೆ ದರ್ಶನಕ್ಕೆ ತೆರಳಿದ್ದಾಗ ಅಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರ ಫೋಟೊ ಕ್ಲಿಕ್ಕಿಸಿ ನಿಯಮ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಚಿವ ರವಿ ಅವರು ಸೋಮವಾರ ದತ್ತಪೀಠಕ್ಕೆ ತೆರಳಿದ್ದರು. ಆ ವೇಳೆ ಗುಹೆಯೊಳಗೆ ಅವರು ನಮಿಸುತ್ತಿರುವ ಫೋಟೊ ಕ್ಲಿಕ್ಕಿಸಲಾಗಿದೆ. ಫೋಟೊಗಳು ‘ವಾಟ್ಸ್ಆ್ಯಪ್’ ಗುಂಪುಗಳಲ್ಲಿ ಹರಿದಾಡುತ್ತಿದೆ.