ಚಿಕ್ಕಮಗಳೂರು: ‘ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಅವರು ಚರ್ಚ್ನಲ್ಲಿ ಹೆಸರು ನೋಂದಣಿಯಾಗಿರುವುದು ಗೊತ್ತಿದ್ದೂ, ತಾನು ದತ್ತಾತ್ರೇಯ ಬ್ರಾಹ್ಮಣ ಎಂದು ಹೇಳಿಕೊಂಡಿದ್ದಾರೆ. ಚುನಾವಣೆಗಾಗಿ ಸುಳ್ಳು ಹೇಳಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಬುಧವಾರ ಇಲ್ಲಿ ಟೀಕಿಸಿದರು.
‘ನಾವು ಅಪ್ಪನ ಜಾತಿ ಆಧರಿಸಿ ಜಾತಿ ಪ್ರಮಾಣಪತ್ರ ಪಡೆಯುತ್ತೇವೆ. ಅಂತರಧರ್ಮೀಯ, ಅಂತರ್ಜಾತಿ ವಿವಾಹವಾಗಿದ್ದರೂ ಜಾತಿ ಪ್ರಮಾಣಪತ್ರಕ್ಕೆ ಅಪ್ಪನ ಜಾತಿಯೇ ಮಾನದಂಡ. ರಾಹುಲ್ಗಾಂಧಿ ಅವರಿಗೆ ಬ್ರಾಹ್ಮಣ ಜಾತಿ ಪ್ರಮಾಣಪತ್ರ ಸಿಕ್ಕಿದ್ದು ಯಾವಾಗ’ ಎಂದು ಪ್ರತಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.