ಚಿಕ್ಕಮಗಳೂರು: ‘ಕಾಫಿನಾಡಿಗೆ ಪ್ರವಾಸ ಕಾರ್ಯಕ್ರಮ ರೂಪಿಸಿಕೊಂಡಿರುವ ಪ್ರವಾಸಿಗರು ಸ್ವಯಂಪ್ರೇರಿತವಾಗಿ ರದ್ದು ಪಡಿಸಿಕೊಳ್ಳಬೇಕು. ಕೋವಿಡ್–19 ಹರಡದಂತೆ ತಡೆಗಟ್ಟಲು ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮನವಿ ಮಾಡಿದ್ದಾರೆ.
‘ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ, ಸೀತಾಳಯ್ಯನ ಗಿರಿ, ಇತರ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೊರೊನಾ ತಲ್ಲಣದ ಪರಿಸ್ಥಿತಿ ಹತೋಟಿಗೆ ಬರುವವರೆಗೆ ಪ್ರವಾಸವನ್ನು ಮುಂದೂಡಬೇಕು’ ಎಂದು ಅವರು ತಿಳಿಸಿದ್ದಾರೆ.