<p><strong>ಚಿಕ್ಕಮಗಳೂರು:</strong> ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಶನಿವಾರ ಬಸವನಹಳ್ಳಿ ಬಾಲಿಕಾ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಣಿತ ಪಾಠ ಮಾಡಿದರು.</p>.<p>ದ್ವಿತೀಯ ಪಿಯು ತರಗತಿಯಲ್ಲಿ ಬೋಧನೆ ಮಾಡಿದರು. ಗಣಿತದಲ್ಲಿನ ‘ಇಂಟಿಗ್ರೆಷನ್’ ಮತ್ತು ‘ಡಿಫರೆನ್ಸಿಯೆಷನ್’ ಕುರಿತು ಪಾಠ ಮಾಡಿದರು.</p>.<p>ಪರಿಕಲ್ಪನೆಗಳನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಬೇಕು. ಲೆಕ್ಕಗಳನ್ನು ಬಿಡಿಸಬೇಕು. ವಿಷಯಗಳನ್ನು ಮನದಟ್ಟು ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಮಾಡಿದರು.</p>.<p>‘ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು. ‘ಸ್ಮಾರ್ಟ್ ವರ್ಕ್’ ಯೋಜನೆ ರೂಪಿಸಿಕೊಳ್ಳಬೇಕು. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮೆರೆದು ಶಾಲೆ, ಪೋಷಕರಿಗೆ ಕೀರ್ತಿ ತರಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ತರಗತಿಯಲ್ಲಿ ಕಲಿತ ಪಾಠವನ್ನು ಚೆನ್ನಾಗಿ ಮನನ ಮಾಡಬೇಕು. ಪ್ರತಿಯೊಬ್ಬರು ಯಶಸ್ಸು ಸಾಧಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸಾಧನೆ ಮೆರೆಯಲು ಬಹಳಷ್ಟು ಅವಕಾಶಗಳಿವೆ. ಅಂದಿನ ಪಾಠವವನ್ನು ಅಂದೇ ಓದಬೇಕು. ದಿನದ ನಿರ್ದಿಷ್ಟ ಸಮಯವನ್ನು ಓದಿಗಾಗಿ ಮೀಸಲಿಡಬೇಕು. ಸಮಯ ವ್ಯರ್ಥ ಮಾಡಬಾರದು. ಚೆನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆಯಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಸ್.ಪೂವಿತಾ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಪ್ಪ, ಪ್ರಾಂಶುಪಾಲರಾದ ಎಸ್.ಜೆ.ಸಾವಿತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಶನಿವಾರ ಬಸವನಹಳ್ಳಿ ಬಾಲಿಕಾ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಣಿತ ಪಾಠ ಮಾಡಿದರು.</p>.<p>ದ್ವಿತೀಯ ಪಿಯು ತರಗತಿಯಲ್ಲಿ ಬೋಧನೆ ಮಾಡಿದರು. ಗಣಿತದಲ್ಲಿನ ‘ಇಂಟಿಗ್ರೆಷನ್’ ಮತ್ತು ‘ಡಿಫರೆನ್ಸಿಯೆಷನ್’ ಕುರಿತು ಪಾಠ ಮಾಡಿದರು.</p>.<p>ಪರಿಕಲ್ಪನೆಗಳನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಬೇಕು. ಲೆಕ್ಕಗಳನ್ನು ಬಿಡಿಸಬೇಕು. ವಿಷಯಗಳನ್ನು ಮನದಟ್ಟು ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಮಾಡಿದರು.</p>.<p>‘ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು. ‘ಸ್ಮಾರ್ಟ್ ವರ್ಕ್’ ಯೋಜನೆ ರೂಪಿಸಿಕೊಳ್ಳಬೇಕು. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮೆರೆದು ಶಾಲೆ, ಪೋಷಕರಿಗೆ ಕೀರ್ತಿ ತರಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ತರಗತಿಯಲ್ಲಿ ಕಲಿತ ಪಾಠವನ್ನು ಚೆನ್ನಾಗಿ ಮನನ ಮಾಡಬೇಕು. ಪ್ರತಿಯೊಬ್ಬರು ಯಶಸ್ಸು ಸಾಧಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸಾಧನೆ ಮೆರೆಯಲು ಬಹಳಷ್ಟು ಅವಕಾಶಗಳಿವೆ. ಅಂದಿನ ಪಾಠವವನ್ನು ಅಂದೇ ಓದಬೇಕು. ದಿನದ ನಿರ್ದಿಷ್ಟ ಸಮಯವನ್ನು ಓದಿಗಾಗಿ ಮೀಸಲಿಡಬೇಕು. ಸಮಯ ವ್ಯರ್ಥ ಮಾಡಬಾರದು. ಚೆನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆಯಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಸ್.ಪೂವಿತಾ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಪ್ಪ, ಪ್ರಾಂಶುಪಾಲರಾದ ಎಸ್.ಜೆ.ಸಾವಿತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>