<p><strong>ಚಿಕ್ಕಮಗಳೂರು</strong>: ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷರಾಗಿ ಡಿ.ಎಸ್.ಸುರೇಶ್ ಮತ್ತು ಉಪಾಧ್ಯಕ್ಷರಾಗಿ ಟಿ.ಎಲ್.ರಮೇಶ್ ಅವಿರೋಧವಾಗಿ ಸೋಮವಾರ ಆಯ್ಕೆಯಾದರು.</p>.<p>ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಪ್ರಕ್ರಿಯೆ ನಡೆಯಿತು. ಎರಡೂ ಸ್ಥಾನಕ್ಕೂ ಒಬ್ಬೊಬ್ಬರು ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿ ರೇಣುಕಾ ಪ್ರಸಾದ್ ಅವರು ಅವಿರೋಧ ಆಯ್ಕೆ ಘೋಷಿಸಿದರು.</p>.<p>ನೂತನ ಅಧ್ಯಕ್ಷ ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿಸಿಸಿ ಬ್ಯಾಂಕ್ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಬೆಂಬಲಿತರ ತೆಕ್ಕೆಗೆ ಪಡೆಯುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ. ಎಲ್ಲರ ಸಹಕಾರದೊಂದಿಗೆ ಉತ್ತಮವಾಗಿ ಆಡಳಿತ ನಿರ್ವಹಿಸುವ ಗುರಿ ಇಟ್ಟುಕೊಂಡಿದ್ದೇನೆ. ಜಿಲ್ಲೆಯ ಎಲ್ಲ ರೈತರಿಗೂ ಸವಲತ್ತುಗಳನ್ನು ವಿತರಿಸಲು ಉದ್ದೇಶಿಸಿದ್ದೇವೆ’ ಎಂದು ಹೇಳಿದರು.</p>.<p>‘ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಇದೆ. ಈ ಅವಕಾಶ ಬಳಸಿಕೊಂಡು ಸಹಕಾರ ಬ್ಯಾಂಕ್, ಸಂಘಗಳ ಮೂಲಕ ರೈತರಿಗೆ ಹೆಚ್ಚಿನ ಸಾಲ ಸಾಲಭ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ’ ಎಂದು ಹೇಳಿದರು.</p>.<p>‘ಹಿಂದಿನ ಆಡಳಿತ ಮಂಡಳಿ ‘ತಾರತಮ್ಯ ನೀತಿ’ ಅನುಸರಿಸುತ್ತಿತ್ತು. ಅವರಿಗೆ ಬೇಕಾದ ಸಹಕಾರ ಸಂಘಗಳಿಗೆ ಮಾತ್ರ ಸಾಲ ವಿತರಿಸುತ್ತಿದ್ದರು. ಇದು ನಮಗೂ ಸ್ವತಃ ಅನುಭವವಾಗಿದೆ’ ಎಂದು ದೂಷಿಸಿದರು.</p>.<p>‘ಹಿಂದಿನ ‘ತಾರತಮ್ಯ ನೀತಿ’ ನಿವಾರಿಸುತ್ತೇನೆ. ಬಹಳಷ್ಟು ಸವಾಲುಗಳು ನಮ್ಮ ಮುಂದಿವೆ. ಅವುಗಳನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಸಾಲ ಸೌಲಭ್ಯ ಪಡೆದ ರೈತರೇ ಮತ್ತೆಮತ್ತೆ ಪಡೆದುಕೊಂಡಿದ್ದಾರೆ. ಹೊಸಬರು ಸಾಲ ಪಡೆದುಕೊಳ್ಳುವಂತೆ ವ್ಯವಸ್ಥೆ ಮಾಡುತ್ತೇನೆ’ ಎಂದು ಉತ್ತರಿಸಿದರು.</p>.<p>ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಬೆಳ್ಳಿ ಪ್ರಕಾಶ್ ನಮ್ಮ ಜತೆಗಿದ್ದರು. ಕಾರ್ಯಕ್ರಮ ನಿಮಿತ್ತ ಬೇಗ ತೆರಳಿದರು ಎಂದು ಪ್ರತಿಕ್ರಿಯಿಸಿದರು.</p>.<p><strong>‘ಎಲ್ಲ ರೈತ ಕುಟುಂಬ ತಲುಪಲು ಪ್ರಯತ್ನ’</strong></p>.<p>ಜಿಲ್ಲೆಯ ರೈತ ಕುಟುಂಬಗಳ ಪೈಕಿ ಈವರೆಗೆ ಶೇ 30ರೈತರನ್ನು ಡಿಸಿಸಿ ಬ್ಯಾಂಕ್ ತಲುಪಿದೆ. ಜನಸ್ನೇಹಿ ಆಡಳಿತ ನೀಡುತ್ತೇವೆ. ಆ ಮೂಲಕ ಜಿಲ್ಲೆಯ ಎಲ್ಲ ರೈತ ಕುಟುಂಬಗಳನ್ನು ತಲುಪಲು ಪ್ರಯತ್ನಿಸುತ್ತೇವೆ ಎಂದು ನೂತನ ಉಪಾಧ್ಯಕ್ಷ ರಮೇಶ್ ಹೇಳಿದರು.</p>.<p>ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಒದಗಿಸಿರುವ ₹ 70 ಕೋಟಿ ಅನುದಾನದಲ್ಲಿ ₹ 55 ಕೋಟಿ ವಿತರಣೆಯಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪ್ಯಾಕ್ಸ್) ಮೂಲಕ ಹೊಸಬರಿಗೆ ಸಾಲ ವಿತರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ. ಹೊಸ ಸದಸ್ಯರನ್ನು ವಿತರಿಸಲು ಕ್ರಮ ವಹಿಸುತ್ತೇವೆ ಎಂದು ತಿಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷರಾಗಿ ಡಿ.ಎಸ್.ಸುರೇಶ್ ಮತ್ತು ಉಪಾಧ್ಯಕ್ಷರಾಗಿ ಟಿ.ಎಲ್.ರಮೇಶ್ ಅವಿರೋಧವಾಗಿ ಸೋಮವಾರ ಆಯ್ಕೆಯಾದರು.</p>.<p>ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಪ್ರಕ್ರಿಯೆ ನಡೆಯಿತು. ಎರಡೂ ಸ್ಥಾನಕ್ಕೂ ಒಬ್ಬೊಬ್ಬರು ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿ ರೇಣುಕಾ ಪ್ರಸಾದ್ ಅವರು ಅವಿರೋಧ ಆಯ್ಕೆ ಘೋಷಿಸಿದರು.</p>.<p>ನೂತನ ಅಧ್ಯಕ್ಷ ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿಸಿಸಿ ಬ್ಯಾಂಕ್ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಬೆಂಬಲಿತರ ತೆಕ್ಕೆಗೆ ಪಡೆಯುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ. ಎಲ್ಲರ ಸಹಕಾರದೊಂದಿಗೆ ಉತ್ತಮವಾಗಿ ಆಡಳಿತ ನಿರ್ವಹಿಸುವ ಗುರಿ ಇಟ್ಟುಕೊಂಡಿದ್ದೇನೆ. ಜಿಲ್ಲೆಯ ಎಲ್ಲ ರೈತರಿಗೂ ಸವಲತ್ತುಗಳನ್ನು ವಿತರಿಸಲು ಉದ್ದೇಶಿಸಿದ್ದೇವೆ’ ಎಂದು ಹೇಳಿದರು.</p>.<p>‘ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಇದೆ. ಈ ಅವಕಾಶ ಬಳಸಿಕೊಂಡು ಸಹಕಾರ ಬ್ಯಾಂಕ್, ಸಂಘಗಳ ಮೂಲಕ ರೈತರಿಗೆ ಹೆಚ್ಚಿನ ಸಾಲ ಸಾಲಭ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ’ ಎಂದು ಹೇಳಿದರು.</p>.<p>‘ಹಿಂದಿನ ಆಡಳಿತ ಮಂಡಳಿ ‘ತಾರತಮ್ಯ ನೀತಿ’ ಅನುಸರಿಸುತ್ತಿತ್ತು. ಅವರಿಗೆ ಬೇಕಾದ ಸಹಕಾರ ಸಂಘಗಳಿಗೆ ಮಾತ್ರ ಸಾಲ ವಿತರಿಸುತ್ತಿದ್ದರು. ಇದು ನಮಗೂ ಸ್ವತಃ ಅನುಭವವಾಗಿದೆ’ ಎಂದು ದೂಷಿಸಿದರು.</p>.<p>‘ಹಿಂದಿನ ‘ತಾರತಮ್ಯ ನೀತಿ’ ನಿವಾರಿಸುತ್ತೇನೆ. ಬಹಳಷ್ಟು ಸವಾಲುಗಳು ನಮ್ಮ ಮುಂದಿವೆ. ಅವುಗಳನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಸಾಲ ಸೌಲಭ್ಯ ಪಡೆದ ರೈತರೇ ಮತ್ತೆಮತ್ತೆ ಪಡೆದುಕೊಂಡಿದ್ದಾರೆ. ಹೊಸಬರು ಸಾಲ ಪಡೆದುಕೊಳ್ಳುವಂತೆ ವ್ಯವಸ್ಥೆ ಮಾಡುತ್ತೇನೆ’ ಎಂದು ಉತ್ತರಿಸಿದರು.</p>.<p>ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಬೆಳ್ಳಿ ಪ್ರಕಾಶ್ ನಮ್ಮ ಜತೆಗಿದ್ದರು. ಕಾರ್ಯಕ್ರಮ ನಿಮಿತ್ತ ಬೇಗ ತೆರಳಿದರು ಎಂದು ಪ್ರತಿಕ್ರಿಯಿಸಿದರು.</p>.<p><strong>‘ಎಲ್ಲ ರೈತ ಕುಟುಂಬ ತಲುಪಲು ಪ್ರಯತ್ನ’</strong></p>.<p>ಜಿಲ್ಲೆಯ ರೈತ ಕುಟುಂಬಗಳ ಪೈಕಿ ಈವರೆಗೆ ಶೇ 30ರೈತರನ್ನು ಡಿಸಿಸಿ ಬ್ಯಾಂಕ್ ತಲುಪಿದೆ. ಜನಸ್ನೇಹಿ ಆಡಳಿತ ನೀಡುತ್ತೇವೆ. ಆ ಮೂಲಕ ಜಿಲ್ಲೆಯ ಎಲ್ಲ ರೈತ ಕುಟುಂಬಗಳನ್ನು ತಲುಪಲು ಪ್ರಯತ್ನಿಸುತ್ತೇವೆ ಎಂದು ನೂತನ ಉಪಾಧ್ಯಕ್ಷ ರಮೇಶ್ ಹೇಳಿದರು.</p>.<p>ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಒದಗಿಸಿರುವ ₹ 70 ಕೋಟಿ ಅನುದಾನದಲ್ಲಿ ₹ 55 ಕೋಟಿ ವಿತರಣೆಯಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪ್ಯಾಕ್ಸ್) ಮೂಲಕ ಹೊಸಬರಿಗೆ ಸಾಲ ವಿತರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ. ಹೊಸ ಸದಸ್ಯರನ್ನು ವಿತರಿಸಲು ಕ್ರಮ ವಹಿಸುತ್ತೇವೆ ಎಂದು ತಿಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>