ಮೃತದೇಹಗಳನ್ನು ಗುಹೆಯಿಂದ ಹೊರಕ್ಕೆ ತೆಗೆದು, ಚಿಕ್ಕಮಗಳೂರಿನ ಶವಾಗಾರಕ್ಕೆ ಸಾಗಿಸಲಾಗಿದೆ. ‘ಗುಹೆ ಭಾಗದಲ್ಲಿ
ಜೇನುಕಟ್ಟಿದೆ ಎಂದು ಕಾರ್ಮಿಕರು ಬೆಂಕಿ ಹಾಕಿ ಒಳಗೆ ಹೋಗಿ ಸಿಲುಕಿಕೊಂಡು ಹೊರಗೆ ಬರಲಾಗದೆ ಉಸಿರುಗಟ್ಟಿ ಮೃತಪಟ್ಟಿರಬಹುದು. ಸೋಮವಾರ ಬೆಳಿಗ್ಗೆ ಘಟನೆ ನಡೆದಿದೆ’ ಎಂದು ಬಾಳೂರು ಠಾಣೆ ಪೊಲೀಸರು ತಿಳಿಸಿದ್ದಾರೆ.