‘ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಗೆ ಎಂದು ದಾಖಲಾಗಿದ್ದ ಉಷಾ ಅವರ ಸಾವಿಗೆ ವೈದ್ಯ ಡಾ.ಬಾಲಕೃಷ್ಣ ಹಾಗೂ ರಾತ್ರಿ ಪಾಳಿಯಲ್ಲಿದ್ದ ದಾದಿಯರು ಕಾರಣ. ವೈದ್ಯರು ಗರ್ಭಿಣಿಯನ್ನು ತಪಾಸಣೆ ನಡೆಸದೇ ನಿರ್ಲಕ್ಷ್ಯ ತೋರಿದ್ದರು. ಈ ಹಿಂದೆಯೂ ವೈದ್ಯರ ನಿರ್ಲಕ್ಷ್ಯತನದಿಂದ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಹಲವಾರು ಪ್ರಕರಣಗಳು ನಡೆದಿದ್ದು, ಈ ಬಗ್ಗೆ ಇಲಾಖೆ ವತಿಯಿಂದ ತನಿಖೆಯೂ ನಡೆಯುತ್ತಿದೆ. ಆದ್ದರಿಂದ ಆ ವೈದ್ಯರನ್ನು ಅಮಾನತಿನಲ್ಲಿಟ್ಟು, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.