<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಚನ್ನಕೇಶವಮೂರ್ತಿ ಶನಿವಾರ ರಾತ್ರಿ ಪಾನಮತ್ತರಾಗಿ ಕೊಠಡಿಯಲ್ಲಿ ನಗ್ನವಾಗಿ ಬಿದ್ದಿದ್ದು, ಈ ವೇಳೆ ಆಸ್ಪತ್ರೆಗೆ ಕರೆತರಲಾಗಿದ್ದ ಹೆಬ್ಬೂರಿನ ಪುಟ್ಟಮ್ಮ (70) ಎಂಬುವವರು ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ.</p>.<p>‘ಆಸ್ಪತ್ರೆಯಲ್ಲಿ ವೈದ್ಯರು ಅಸಭ್ಯ ವರ್ತನೆ ತೋರಿದ್ದಾರೆ ಮತ್ತು ಚಿಕಿತ್ಸೆ ನೀಡದೆ ಕರ್ತವ್ಯ ಪಾಲಿಸಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಮೃತರ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p>‘ರಜೆ ಮೇಲೆ ತೆರಳುವಂತೆಡಾ.ಚನ್ನಕೇಶವಮೂರ್ತಿ ಅವರಿಗೆ ಸೂಚಿಸಿದ್ದೇನೆ. ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ಸಿಬ್ಬಂದಿ, ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುತ್ತೇನೆ. ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಕಠಿಣ ಕ್ರಮಕ್ಕೆ ಶಿಫಾರಸು ಮಾಡುತ್ತೇನೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಚನ್ನಕೇಶವಮೂರ್ತಿ ಶನಿವಾರ ರಾತ್ರಿ ಪಾನಮತ್ತರಾಗಿ ಕೊಠಡಿಯಲ್ಲಿ ನಗ್ನವಾಗಿ ಬಿದ್ದಿದ್ದು, ಈ ವೇಳೆ ಆಸ್ಪತ್ರೆಗೆ ಕರೆತರಲಾಗಿದ್ದ ಹೆಬ್ಬೂರಿನ ಪುಟ್ಟಮ್ಮ (70) ಎಂಬುವವರು ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ.</p>.<p>‘ಆಸ್ಪತ್ರೆಯಲ್ಲಿ ವೈದ್ಯರು ಅಸಭ್ಯ ವರ್ತನೆ ತೋರಿದ್ದಾರೆ ಮತ್ತು ಚಿಕಿತ್ಸೆ ನೀಡದೆ ಕರ್ತವ್ಯ ಪಾಲಿಸಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಮೃತರ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p>‘ರಜೆ ಮೇಲೆ ತೆರಳುವಂತೆಡಾ.ಚನ್ನಕೇಶವಮೂರ್ತಿ ಅವರಿಗೆ ಸೂಚಿಸಿದ್ದೇನೆ. ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ಸಿಬ್ಬಂದಿ, ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುತ್ತೇನೆ. ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಕಠಿಣ ಕ್ರಮಕ್ಕೆ ಶಿಫಾರಸು ಮಾಡುತ್ತೇನೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>