<p><strong>ಸೀತೂರು (ನರಸಿಂಹರಾಜಪುರ):</strong> ದೇಶದಲ್ಲಿ ಶೇ 70ರಷ್ಟು ಇದ್ದ ರೈತರ ಪ್ರಮಾಣ ಪ್ರಸ್ತುತ ಶೇ 55ಕ್ಕೆ ಇಳಿಕೆಯಾಗಿದೆ ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ ಬಸವರಾಜಪ್ಪ ಹೇಳಿದರು.</p>.<p>ತಾಲ್ಲೂಕಿನ ಸೀತೂರು ಗ್ರಾಮದಲ್ಲಿ ಆಯೋಜಿಸಿರುವ ಎನ್.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಶಿಬಿರದಲ್ಲಿ ಸೋಮವಾರ ಭಾವೈಕ್ಯತೆಯ ದಿನ ಕಾರ್ಯಕ್ರಮದಲ್ಲಿ ಭಾರತ ದೇಶದ ಕೃಷಿಯ ಬಗ್ಗೆ ಅವರು ಮಾತನಾಡಿದರು.</p>.<p>ಕಳೆದ ವರ್ಷ ಏರಿಕೆ ಕಂಡಿದ್ದ ಕಾಫಿ ಬೆಲೆ ಈ ವರ್ಷ ಕುಸಿದಿದೆ. ವಿದ್ಯಾವಂತರಾದ ಮಕ್ಕಳು ಹಳ್ಳಿಗೆ ಬಂದು ಕೃಷಿ ಮಾಡುತ್ತಿಲ್ಲ. ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿವೆ. ರೈತರು ಬೆಳೆದ ಬೆಳೆಗಳಿಗೆ ಬೆಲೆ ಸಿಗುತ್ತಿಲ್ಲ. ಅಡಿಕೆ ಬೆಳೆಗೆ ರೋಗ ತಗುಲಿದೆ ಎಂದರು.</p>.<p>ಸೀತೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್.ಪಿ.ರಮೇಶ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಎನ್.ಎಸ್.ಎಸ್.ನಂತಹ ಶಿಬಿರಗಳು ಅವಶ್ಯಕವಾಗಿವೆ ಎಂದರು.</p>.<p>ಪತ್ರಕರ್ತ ಯಡಗೆರೆ ಮಂಜುನಾಥ್ ದಿನ ಪತ್ರಿಕೆ ಮಹತ್ವ ಕುರಿತು ಮಾತನಾಡಿ, ವಿದ್ಯಾರ್ಥಿಗಳು ಚಿಕ್ಕಂದಿನಲ್ಲೇ ದಿನಪತ್ರಿಕೆ ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.</p>.<p>ಪತ್ರಕರ್ತ ಪುರುಷೋತ್ತಮ್, ಕಲಾವಿದ ಅಭಿನವ ಗಿರಿರಾಜ್, ಗುತ್ತಿಗೆದಾರ ಶ್ರೀನಿವಾಸ್, ಗುತ್ತಿಗೆದಾರ ಪ್ರವೀಣ್ ಶೆಟ್ಟಿ, ಎಸ್.ಡಿ.ಎಂ.ಸಿ ಸದಸ್ಯ ರವಿ, ಉಪನ್ಯಾಸಕ ಪ್ರಶಾಂತ್ ಕುಮಾರ್, ವಿದ್ಯಾರ್ಥಿಗಳಾದ ಅಕಾಶ್, ನಿಶ್ಮಿತಾ, ಸಂಜಯ್ ಇದ್ದರು. ನಂತರ ಗ್ರಾಮಸ್ಥರು ಹಾಗೂ ಎನ್.ಎಸ್.ಎಸ್.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೀತೂರು (ನರಸಿಂಹರಾಜಪುರ):</strong> ದೇಶದಲ್ಲಿ ಶೇ 70ರಷ್ಟು ಇದ್ದ ರೈತರ ಪ್ರಮಾಣ ಪ್ರಸ್ತುತ ಶೇ 55ಕ್ಕೆ ಇಳಿಕೆಯಾಗಿದೆ ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ ಬಸವರಾಜಪ್ಪ ಹೇಳಿದರು.</p>.<p>ತಾಲ್ಲೂಕಿನ ಸೀತೂರು ಗ್ರಾಮದಲ್ಲಿ ಆಯೋಜಿಸಿರುವ ಎನ್.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಶಿಬಿರದಲ್ಲಿ ಸೋಮವಾರ ಭಾವೈಕ್ಯತೆಯ ದಿನ ಕಾರ್ಯಕ್ರಮದಲ್ಲಿ ಭಾರತ ದೇಶದ ಕೃಷಿಯ ಬಗ್ಗೆ ಅವರು ಮಾತನಾಡಿದರು.</p>.<p>ಕಳೆದ ವರ್ಷ ಏರಿಕೆ ಕಂಡಿದ್ದ ಕಾಫಿ ಬೆಲೆ ಈ ವರ್ಷ ಕುಸಿದಿದೆ. ವಿದ್ಯಾವಂತರಾದ ಮಕ್ಕಳು ಹಳ್ಳಿಗೆ ಬಂದು ಕೃಷಿ ಮಾಡುತ್ತಿಲ್ಲ. ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿವೆ. ರೈತರು ಬೆಳೆದ ಬೆಳೆಗಳಿಗೆ ಬೆಲೆ ಸಿಗುತ್ತಿಲ್ಲ. ಅಡಿಕೆ ಬೆಳೆಗೆ ರೋಗ ತಗುಲಿದೆ ಎಂದರು.</p>.<p>ಸೀತೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್.ಪಿ.ರಮೇಶ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಎನ್.ಎಸ್.ಎಸ್.ನಂತಹ ಶಿಬಿರಗಳು ಅವಶ್ಯಕವಾಗಿವೆ ಎಂದರು.</p>.<p>ಪತ್ರಕರ್ತ ಯಡಗೆರೆ ಮಂಜುನಾಥ್ ದಿನ ಪತ್ರಿಕೆ ಮಹತ್ವ ಕುರಿತು ಮಾತನಾಡಿ, ವಿದ್ಯಾರ್ಥಿಗಳು ಚಿಕ್ಕಂದಿನಲ್ಲೇ ದಿನಪತ್ರಿಕೆ ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.</p>.<p>ಪತ್ರಕರ್ತ ಪುರುಷೋತ್ತಮ್, ಕಲಾವಿದ ಅಭಿನವ ಗಿರಿರಾಜ್, ಗುತ್ತಿಗೆದಾರ ಶ್ರೀನಿವಾಸ್, ಗುತ್ತಿಗೆದಾರ ಪ್ರವೀಣ್ ಶೆಟ್ಟಿ, ಎಸ್.ಡಿ.ಎಂ.ಸಿ ಸದಸ್ಯ ರವಿ, ಉಪನ್ಯಾಸಕ ಪ್ರಶಾಂತ್ ಕುಮಾರ್, ವಿದ್ಯಾರ್ಥಿಗಳಾದ ಅಕಾಶ್, ನಿಶ್ಮಿತಾ, ಸಂಜಯ್ ಇದ್ದರು. ನಂತರ ಗ್ರಾಮಸ್ಥರು ಹಾಗೂ ಎನ್.ಎಸ್.ಎಸ್.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>