<p><strong>ನರಸಿಹಂರಾಜಪುರ</strong>: ತಾಲ್ಲೂಕಿನ ಹೊನ್ನೆಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲೂರು ಗ್ರಾಮದ ಭಕ್ತವಾನಿ ಕಿರು ಅರಣ್ಯದಲ್ಲಿ ಸೋಮವಾರ ಬೆಳಿಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆ ನಡೆಸಿ, ಚುಕ್ಕಿ ಜಿಂಕೆ ಮಾಂಸ ವಶಪಡಿಸಿಕೊಂಡಿದ್ದು 8 ಮಂದಿ ಆರೋಪಿಗಳ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಮೂವರನ್ನು ಬಂಧಿಸಿದ್ದಾರೆ.</p>.<p>ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಅರಣ್ಯದಲ್ಲಿ ಹುಡುಕಾಟ ನಡೆಸಿದಾಗ ಜಿಂಕೆ ಮಾಂಸ ಹಾಗೂ ಜಿಂಕೆ ಕೊಂದು ಮಾಂಸ ಮಾಡುತ್ತಿದ್ದ 8 ಆರೋಪಿಗಳು ಕಂಡು ಬಂದಿದ್ದಾರೆ. ಇವರಲ್ಲಿ ಐವರು ಪರಾರಿಯಾಗಿದ್ದಾರೆ. </p>.<p>ಹೊನ್ನೆಕೂಡಿಗೆ ಗ್ರಾಮ ಪಂಚಾಯಿತಿಯ ಬಿಳಾಲುಕೊಪ್ಪ ಗ್ರಾಮದ ಲಕ್ಕುಂದದ ಮಂಜುನಾಥ, ಅಣ್ಣಪ್ಪ ಹಾಗೂ ಬಿಳಾಲುಕೊಪ್ಪ ಗ್ರಾಮದ ಮಂಜುನಾಥ ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸ್ಥಳದಲ್ಲಿದ್ದ ಜಿಂಕೆ ಮಾಂಸ, ನಾಡ ಕೋವಿ, ಕತ್ತಿ, ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಕೊಪ್ಪ ಡಿ.ಎಪ್.ಒ ಎಲ್.ನಂದೀಶ್, ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಎನ್.ಪ್ರವೀಣ ಕುಮಾರ್ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಅರುಣ ಬಾರಂಗಿ, ಅಕ್ಷತಾ, ಶ್ರೀನಿವಾಸ್, ಮಾರುತಿ ಮಾಳಿ, ಗಸ್ತು ಅರಣ್ಯ ಪಾಲಕರಾದ ಎಚ್.ಎಂ.ಪ್ರವೀಣ್, ಮಂಜಯ್ಯ, ಸಂಪ್ರೀತ, ಶ್ರೀಕಾಂತ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಹಂರಾಜಪುರ</strong>: ತಾಲ್ಲೂಕಿನ ಹೊನ್ನೆಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲೂರು ಗ್ರಾಮದ ಭಕ್ತವಾನಿ ಕಿರು ಅರಣ್ಯದಲ್ಲಿ ಸೋಮವಾರ ಬೆಳಿಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆ ನಡೆಸಿ, ಚುಕ್ಕಿ ಜಿಂಕೆ ಮಾಂಸ ವಶಪಡಿಸಿಕೊಂಡಿದ್ದು 8 ಮಂದಿ ಆರೋಪಿಗಳ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಮೂವರನ್ನು ಬಂಧಿಸಿದ್ದಾರೆ.</p>.<p>ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಅರಣ್ಯದಲ್ಲಿ ಹುಡುಕಾಟ ನಡೆಸಿದಾಗ ಜಿಂಕೆ ಮಾಂಸ ಹಾಗೂ ಜಿಂಕೆ ಕೊಂದು ಮಾಂಸ ಮಾಡುತ್ತಿದ್ದ 8 ಆರೋಪಿಗಳು ಕಂಡು ಬಂದಿದ್ದಾರೆ. ಇವರಲ್ಲಿ ಐವರು ಪರಾರಿಯಾಗಿದ್ದಾರೆ. </p>.<p>ಹೊನ್ನೆಕೂಡಿಗೆ ಗ್ರಾಮ ಪಂಚಾಯಿತಿಯ ಬಿಳಾಲುಕೊಪ್ಪ ಗ್ರಾಮದ ಲಕ್ಕುಂದದ ಮಂಜುನಾಥ, ಅಣ್ಣಪ್ಪ ಹಾಗೂ ಬಿಳಾಲುಕೊಪ್ಪ ಗ್ರಾಮದ ಮಂಜುನಾಥ ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸ್ಥಳದಲ್ಲಿದ್ದ ಜಿಂಕೆ ಮಾಂಸ, ನಾಡ ಕೋವಿ, ಕತ್ತಿ, ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಕೊಪ್ಪ ಡಿ.ಎಪ್.ಒ ಎಲ್.ನಂದೀಶ್, ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಎನ್.ಪ್ರವೀಣ ಕುಮಾರ್ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಅರುಣ ಬಾರಂಗಿ, ಅಕ್ಷತಾ, ಶ್ರೀನಿವಾಸ್, ಮಾರುತಿ ಮಾಳಿ, ಗಸ್ತು ಅರಣ್ಯ ಪಾಲಕರಾದ ಎಚ್.ಎಂ.ಪ್ರವೀಣ್, ಮಂಜಯ್ಯ, ಸಂಪ್ರೀತ, ಶ್ರೀಕಾಂತ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>