<p><strong>ಚಿಕ್ಕಮಗಳೂರು</strong>: 60 ವರ್ಷಕ್ಕೂ ಕಡಿಮೆ ಇರುವವರಿಗೂ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಪ್ರಕರಣಗಳು ಕಡೂರು ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದ್ದು, ಹೆಚ್ಚಿನ ತನಿಖೆಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಸಾಮಾಜಿಕ ಭದ್ರತಾ ವಿಭಾಗದ ಅಧಿಕಾರಿಗಳು ಲಾಗಿನ್ ದುರ್ಬಳಕೆ ಮಾಡಿಕೊಂಡು 35–40 ವಯಸ್ಸಿನವರಿಗೂ ವೇತನ ಮಂಜೂರು ಮಾಡಿದ್ದಾರೆ ಎಂಬ ಆರೋಪಗಳಿವೆ.</p>.<p>ಕಡೂರು ತಾಲ್ಲೂಕಿನವರೇ ಅಲ್ಲದವರಿಗೂ ಇದೇ ತಾಲ್ಲೂಕಿನವರೆಂದು ಲಾಗಿನ್ನಲ್ಲಿ ಸುಳ್ಳು ನಮೂದಿಸಿ ವೃದ್ಧಾಪ್ಯ ವೇತನ ಮಂಜೂರು ಮಾಡಿದ್ದಾರೆ ಎಂಬ ದೂರು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿದೆ. </p>.<p>‘35–40 ವರ್ಷದವರಿಗೂ ವೃದ್ಧಾಪ್ಯ ವೇತನವನ್ನು ಉಪತಹಶೀಲ್ದಾರ್ ಮಂಜೂರು ಮಾಡಿದ್ದಾರೆಂಬ ಒಂದು ದೂರು ಬಂದಿದೆ. ಇದನ್ನು ಆಧರಿಸಿ ತನಿಖೆ ನಡೆಸಲು ತರೀಕೆರೆ ಉಪವಿಭಾಗಾಧಿಕಾರಿಗೆ ಆದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: 60 ವರ್ಷಕ್ಕೂ ಕಡಿಮೆ ಇರುವವರಿಗೂ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಪ್ರಕರಣಗಳು ಕಡೂರು ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದ್ದು, ಹೆಚ್ಚಿನ ತನಿಖೆಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಸಾಮಾಜಿಕ ಭದ್ರತಾ ವಿಭಾಗದ ಅಧಿಕಾರಿಗಳು ಲಾಗಿನ್ ದುರ್ಬಳಕೆ ಮಾಡಿಕೊಂಡು 35–40 ವಯಸ್ಸಿನವರಿಗೂ ವೇತನ ಮಂಜೂರು ಮಾಡಿದ್ದಾರೆ ಎಂಬ ಆರೋಪಗಳಿವೆ.</p>.<p>ಕಡೂರು ತಾಲ್ಲೂಕಿನವರೇ ಅಲ್ಲದವರಿಗೂ ಇದೇ ತಾಲ್ಲೂಕಿನವರೆಂದು ಲಾಗಿನ್ನಲ್ಲಿ ಸುಳ್ಳು ನಮೂದಿಸಿ ವೃದ್ಧಾಪ್ಯ ವೇತನ ಮಂಜೂರು ಮಾಡಿದ್ದಾರೆ ಎಂಬ ದೂರು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿದೆ. </p>.<p>‘35–40 ವರ್ಷದವರಿಗೂ ವೃದ್ಧಾಪ್ಯ ವೇತನವನ್ನು ಉಪತಹಶೀಲ್ದಾರ್ ಮಂಜೂರು ಮಾಡಿದ್ದಾರೆಂಬ ಒಂದು ದೂರು ಬಂದಿದೆ. ಇದನ್ನು ಆಧರಿಸಿ ತನಿಖೆ ನಡೆಸಲು ತರೀಕೆರೆ ಉಪವಿಭಾಗಾಧಿಕಾರಿಗೆ ಆದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>