<p><strong>ಚಿಕ್ಕಮಗಳೂರು:</strong> 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಘೋಷಿಸಿದ ₹200 ಕೋಟಿಯನ್ನು ತಕ್ಷಣ ಮೀಸಲಿಡಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿಯ ಹೋರಾಟಗಾರ ಮೇಘ ಮಲ್ನಾಡ್ ಒತ್ತಾಯಿಸಿದರು.</p>.<p>ಅಧಿಕಾರಕ್ಕೆ ಬರುವ ಮೊದಲು ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಾರ್ಷಿಕ ₹200 ಕೋಟಿಯನ್ನು ಮೀಸಲಿಡುವುದಾಗಿ ಘೋಷಿಸಿತ್ತು. ವಾಗ್ದಾನ ಮಾಡಿದ ಸರ್ಕಾರ, ಈಗ ತನ್ನ ಮಾತು ಉಳಿಸಿಕೊಳ್ಳುವ ಹೊಣೆಗಾರಿಕೆಯಿಂದ ಹಿಂದೆ ಸರಿಯಬಾರದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘2026ರ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ನಮ್ಮ ಸಮುದಾಯಕ್ಕಾಗಿ ಪ್ರತ್ಯೇಕವಾಗಿ ಮತ್ತು ಕಡ್ಡಾಯವಾಗಿ ಅನುದಾನ ಘೋಷಿಸಲೇಬೇಕು’ ಎಂದು ಒತ್ತಾಯಿಸಿದರು.</p>.<p>‘ನಮ್ಮ ಪ್ರಮುಖ ಹಕ್ಕೊತ್ತಾಯಗಳೆಂದರೆ ಕರ್ನಾಟಕ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು ತಕ್ಷಣ ಸ್ಥಾಪಿಸಬೇಕು. ಸರ್ವತೋಮುಖ ಅಭಿವೃದ್ಧಿಗಾಗಿ ಕನಿಷ್ಠ ₹250 ಕೋಟಿಗಳ ಪ್ರತ್ಯೇಕ ಬಜೆಟ್ ನೀಡಬೇಕು’ ಎಂದರು.</p>.<p>ವಸತಿ, ಹಾಸ್ಟೆಲ್ ಮತ್ತು ಶಾರ್ಟ್ ಸ್ಟೇ ಹೋಮ್ಗಳನ್ನು ತಕ್ಷಣ ಒದಗಿಸಬೇಕು. ಪ್ರತಿವರ್ಷ ಕನಿಷ್ಠ 500 ಮನೆಗಳನ್ನು ಹಂಚಿಕೆ ಮಾಡಬೇಕು. ಕೃಷಿಯಲ್ಲಿ ಆಸಕ್ತಿ ಹೊಂದಿರುವ ಪ್ರತಿ ವ್ಯಕ್ತಿಗೆ 2 ಎಕರೆ ಕೃಷಿಯೋಗ್ಯ ಭೂಮಿ ನೀಡಬೇಕು ಎಂದು ಆಗ್ರಹಿಸಿದರು.</p>.<p>ಉದ್ಯಮಶೀಲತೆಗೆ ಬ್ಯಾಂಕ್-ಲಿಂಕ್ ಆಧಾರಿತ ಯೋಜನೆ ಜಾರಿಗೆ ತಂದು ಪ್ರತಿ ವ್ಯಕ್ತಿಗೆ ₹2 ಲಕ್ಷ ಸಬ್ಸಿಡಿ ನೀಡಬೇಕು. ಸ್ವಸಹಾಯ ಗುಂಪುಗಳನ್ನು ರಚಿಸಲು ಮತ್ತು ಬಲಪಡಿಸಲು ಸಮುದಾಯ, ಸರ್ಕಾರೇತರ ಸಂಸ್ಥೆಗಳಿಗೆ ಅನುದಾನ ನೀಡಬೇಕು. ಬಡ್ಡಿ ರಹಿತ ಸಾಲಗಳನ್ನು ಒದಗಿಸಬೇಕು. ಮೈತ್ರಿ ಪಿಂಚಣಿಯನ್ನು ತಿಂಗಳಿಗೆ ₹2,000ಕ್ಕೆ ಹೆಚ್ಚಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ತಿಂಗಳಿಗೆ ₹5,000 ವೃದ್ಧಾಪ್ಯ ಪಿಂಚಣಿ ನೀಡಬೇಕು. ಶೇ 1ರಷ್ಟು ಮೀಸಲಾತಿ ಕೇವಲ ಘೋಷಣೆಯಾಗಿ ಉಳಿಸದೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.</p>.<p>ಲಿಂಗತ್ವ ದೃಢೀಕರಣ ಶಸ್ತ್ರಚಿಕಿತ್ಸೆಗಳನ್ನು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಜಾರಿಗೊಳಿಸಬೇಕು. ಶಸ್ತ್ರಚಿಕಿತ್ಸೆಯ ನಂತರ ಕನಿಷ್ಠ 6 ತಿಂಗಳು ಪ್ರತಿ ತಿಂಗಳು ₹5,000 ಪುನರ್ವಸತಿ ನೆರವು ನೀಡಬೇಕು. ಪ್ರತಿಯೊಂದು ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಕನಿಷ್ಠ 1 ವಿಶೇಷ ಆರೋಗ್ಯ ಕೇಂದ್ರ ತೆರೆಯಬೇಕು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ಸದಸ್ಯರಾದ ಫಾತಿಮತ್, ಕಮಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಘೋಷಿಸಿದ ₹200 ಕೋಟಿಯನ್ನು ತಕ್ಷಣ ಮೀಸಲಿಡಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿಯ ಹೋರಾಟಗಾರ ಮೇಘ ಮಲ್ನಾಡ್ ಒತ್ತಾಯಿಸಿದರು.</p>.<p>ಅಧಿಕಾರಕ್ಕೆ ಬರುವ ಮೊದಲು ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಾರ್ಷಿಕ ₹200 ಕೋಟಿಯನ್ನು ಮೀಸಲಿಡುವುದಾಗಿ ಘೋಷಿಸಿತ್ತು. ವಾಗ್ದಾನ ಮಾಡಿದ ಸರ್ಕಾರ, ಈಗ ತನ್ನ ಮಾತು ಉಳಿಸಿಕೊಳ್ಳುವ ಹೊಣೆಗಾರಿಕೆಯಿಂದ ಹಿಂದೆ ಸರಿಯಬಾರದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘2026ರ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ನಮ್ಮ ಸಮುದಾಯಕ್ಕಾಗಿ ಪ್ರತ್ಯೇಕವಾಗಿ ಮತ್ತು ಕಡ್ಡಾಯವಾಗಿ ಅನುದಾನ ಘೋಷಿಸಲೇಬೇಕು’ ಎಂದು ಒತ್ತಾಯಿಸಿದರು.</p>.<p>‘ನಮ್ಮ ಪ್ರಮುಖ ಹಕ್ಕೊತ್ತಾಯಗಳೆಂದರೆ ಕರ್ನಾಟಕ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು ತಕ್ಷಣ ಸ್ಥಾಪಿಸಬೇಕು. ಸರ್ವತೋಮುಖ ಅಭಿವೃದ್ಧಿಗಾಗಿ ಕನಿಷ್ಠ ₹250 ಕೋಟಿಗಳ ಪ್ರತ್ಯೇಕ ಬಜೆಟ್ ನೀಡಬೇಕು’ ಎಂದರು.</p>.<p>ವಸತಿ, ಹಾಸ್ಟೆಲ್ ಮತ್ತು ಶಾರ್ಟ್ ಸ್ಟೇ ಹೋಮ್ಗಳನ್ನು ತಕ್ಷಣ ಒದಗಿಸಬೇಕು. ಪ್ರತಿವರ್ಷ ಕನಿಷ್ಠ 500 ಮನೆಗಳನ್ನು ಹಂಚಿಕೆ ಮಾಡಬೇಕು. ಕೃಷಿಯಲ್ಲಿ ಆಸಕ್ತಿ ಹೊಂದಿರುವ ಪ್ರತಿ ವ್ಯಕ್ತಿಗೆ 2 ಎಕರೆ ಕೃಷಿಯೋಗ್ಯ ಭೂಮಿ ನೀಡಬೇಕು ಎಂದು ಆಗ್ರಹಿಸಿದರು.</p>.<p>ಉದ್ಯಮಶೀಲತೆಗೆ ಬ್ಯಾಂಕ್-ಲಿಂಕ್ ಆಧಾರಿತ ಯೋಜನೆ ಜಾರಿಗೆ ತಂದು ಪ್ರತಿ ವ್ಯಕ್ತಿಗೆ ₹2 ಲಕ್ಷ ಸಬ್ಸಿಡಿ ನೀಡಬೇಕು. ಸ್ವಸಹಾಯ ಗುಂಪುಗಳನ್ನು ರಚಿಸಲು ಮತ್ತು ಬಲಪಡಿಸಲು ಸಮುದಾಯ, ಸರ್ಕಾರೇತರ ಸಂಸ್ಥೆಗಳಿಗೆ ಅನುದಾನ ನೀಡಬೇಕು. ಬಡ್ಡಿ ರಹಿತ ಸಾಲಗಳನ್ನು ಒದಗಿಸಬೇಕು. ಮೈತ್ರಿ ಪಿಂಚಣಿಯನ್ನು ತಿಂಗಳಿಗೆ ₹2,000ಕ್ಕೆ ಹೆಚ್ಚಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ತಿಂಗಳಿಗೆ ₹5,000 ವೃದ್ಧಾಪ್ಯ ಪಿಂಚಣಿ ನೀಡಬೇಕು. ಶೇ 1ರಷ್ಟು ಮೀಸಲಾತಿ ಕೇವಲ ಘೋಷಣೆಯಾಗಿ ಉಳಿಸದೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.</p>.<p>ಲಿಂಗತ್ವ ದೃಢೀಕರಣ ಶಸ್ತ್ರಚಿಕಿತ್ಸೆಗಳನ್ನು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಜಾರಿಗೊಳಿಸಬೇಕು. ಶಸ್ತ್ರಚಿಕಿತ್ಸೆಯ ನಂತರ ಕನಿಷ್ಠ 6 ತಿಂಗಳು ಪ್ರತಿ ತಿಂಗಳು ₹5,000 ಪುನರ್ವಸತಿ ನೆರವು ನೀಡಬೇಕು. ಪ್ರತಿಯೊಂದು ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಕನಿಷ್ಠ 1 ವಿಶೇಷ ಆರೋಗ್ಯ ಕೇಂದ್ರ ತೆರೆಯಬೇಕು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ಸದಸ್ಯರಾದ ಫಾತಿಮತ್, ಕಮಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>