ಕಂದಾಯ ನಿರೀಕ್ಷಕ ವೆಂಕಟೇಶ್ ಮಾತನಾಡಿ, ‘ರೈತರಿಗಾಗಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ್ದು, ಅದರ ಮೂಲಕ ರೈತರು ತಾವೇ ಬೆಳೆಯನ್ನು ಸಮೀಕ್ಷೆ ಮಾಡಬಹುದು. ಬೆಳೆ ಸಮೀಕ್ಷೆ ಚಟುವಟಿಕೆಗಳಿಂದ ಸಂಗ್ರಹಿಸಲಾದ ದತ್ತಾಂಶಗಳನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆ, ಸಹಾಯಧನ ಪಾವತಿ, ಬೆಳೆ ಪ್ರದೇಶದ ಅಂದಾಜು, ಕೃಷಿ ಮತ್ತು ಇತರೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಬಳಸಿಕೊಳ್ಳಲು ಸಹಕಾರಿಯಾಗುವುದು’ ಎಂದರು.