ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರಹಳ್ಳಿ ಕೆರೆ; ಬಾಲಕ ನೀರುಪಾಲು

Last Updated 14 ಅಕ್ಟೋಬರ್ 2019, 21:19 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನ ಚಿಕ್ಕಗೌಜದ ಬಳಿಯ ದೇವರಹಳ್ಳಿ ಕೆರೆಯಲ್ಲಿ ಸೋಮವಾರ ಸಾದರಹಳ್ಳಿಯ ವರುಣ (16) ನೀರು ಪಾಲಾಗಿದ್ದಾನೆ.

ವರುಣ ನಗರದ ಎಂಇಎಸ್‌ ಶಾಲೆಯ 10ನೇ ತರಗತಿ ವಿದ್ಯಾರ್ಥಿ. ಸಾದರಹಳ್ಳಿಯ ಮೊಗಣ್ಣಗೌಡ ಅವರು ಪುತ್ರ.

ವರುಣ ಮತ್ತು ಸ್ನೇಹಿತ ಮಧ್ಯಾಹ್ನ ಕೆರೆ ಬಳಿಗೆ ತೆರೆಳಿದ್ದರು. ಕಾಲು ಜಾರಿ ಬಿದ್ದು ವರುಣ ನೀರು ಪಾಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಏಳು ಮಂದಿ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಕಾಯಾಚರಣೆ ನಡೆಸಿ ಶವವನ್ನು ಹೊರತೆಗೆದಿದ್ದಾರೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT