<p><strong>ಚಿಕ್ಕಮಗಳೂರು</strong>: ‘ನಗರದ 25ನೇ ವಾರ್ಡ್ನಲ್ಲಿ ಕುಡಿಯವ ನೀರಿನ ಪೈಪ್ ರಿಪೇರಿಗೆ ರಸ್ತೆ ಅಗೆದ ವಿಚಾರದಲ್ಲಿ ಜಗಳ ನಡೆದಿದೆ.ಜಟಾಪಟಿ ನಡೆಸಿದ ವಾರ್ಡ್ನ ಸದಸ್ಯ ಲಕ್ಷ್ಮಣ ಮತ್ತು ಧನಂಜಯಗೌಡ ಇಬ್ಬರೊಂದಿಗೂ ಮಾತನಾಡಿದ್ದೇನೆ ಎಂದು ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ,‘ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಲ್ಲ. ನಗರಸಭೆ ಎಲ್ಲ ಸದಸ್ಯರನ್ನು ಸಮಾನವಾಗಿ ಕಾಣುತ್ತೇನೆ. ಲಕ್ಷ್ಮಣ ಅವರಿಗೂ ನನ್ನ ಸ್ವಭಾವ ಗೊತ್ತು. ರಾಜಕಾರಣ ಮಾಡಿದ್ದೇನೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರೋಪಿಸಿರುವುದರಲ್ಲಿ ಹುರುಳಿಲ್ಲ’ ಎಂದು ಉತ್ತರಿಸಿದರು.</p>.<p>‘ಈ ಹಿಂದೆ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯದಂತೆ ಉಳಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಾಧ್ಯವಾಗಿಲ್ಲ, ಇನ್ನು ಬೇರೆ ಪಕ್ಷದವರನ್ನು ಸೆಳೆಯುತ್ತಾರೆಯೇ’ ಎಂದು ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ಶಾಸಕರು ಯಾಕೆ ಪಕ್ಷ ತೊರೆದರು ಎಂಬ ಬಗ್ಗೆ ಅವರು ಸಂಶೋಧನೆ ನಡೆಸಲಿ. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಅವರನ್ನು ಘೋಷಿಸಿದರೆ ಡಿಕೆಶಿ ಅವರೇ ಪಕ್ಷ ತೊರೆಯುತ್ತಾರೆ. ಡಿಕೆಶಿ ಅವರನ್ನು ಘೋಷಿಸಿದರೆ ಸಿದ್ದರಾಮಯ್ಯ ಪಕ್ಷ ತೊರೆಯುತ್ತಾರೆ’ ಎಂದು ಉತ್ತರಿಸಿದರು.</p>.<p>ಡಿಕೆಶಿ ಅವರನ್ನು ಬಿಜೆಪಿ ಶಾಸಕರು ಭೇಟಿಯಾಗಿದ್ದರೋ ಅಥವಾ ಡಿಕೆಶಿ ಅವರೇ ಆ ಶಾಸಕರನ್ನು ಭೇಟಿಯಾಗಿದ್ದರೋ ಗೊತ್ತಿಲ್ಲ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲು ಯಾರು ತಯಾರಾಗಿದ್ದಾರೆ ಎಂದು ಡಿಕೆಶಿ ಬಹಿರಂಗಪಡಿಸಲಿ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ನಗರದ 25ನೇ ವಾರ್ಡ್ನಲ್ಲಿ ಕುಡಿಯವ ನೀರಿನ ಪೈಪ್ ರಿಪೇರಿಗೆ ರಸ್ತೆ ಅಗೆದ ವಿಚಾರದಲ್ಲಿ ಜಗಳ ನಡೆದಿದೆ.ಜಟಾಪಟಿ ನಡೆಸಿದ ವಾರ್ಡ್ನ ಸದಸ್ಯ ಲಕ್ಷ್ಮಣ ಮತ್ತು ಧನಂಜಯಗೌಡ ಇಬ್ಬರೊಂದಿಗೂ ಮಾತನಾಡಿದ್ದೇನೆ ಎಂದು ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ,‘ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಲ್ಲ. ನಗರಸಭೆ ಎಲ್ಲ ಸದಸ್ಯರನ್ನು ಸಮಾನವಾಗಿ ಕಾಣುತ್ತೇನೆ. ಲಕ್ಷ್ಮಣ ಅವರಿಗೂ ನನ್ನ ಸ್ವಭಾವ ಗೊತ್ತು. ರಾಜಕಾರಣ ಮಾಡಿದ್ದೇನೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರೋಪಿಸಿರುವುದರಲ್ಲಿ ಹುರುಳಿಲ್ಲ’ ಎಂದು ಉತ್ತರಿಸಿದರು.</p>.<p>‘ಈ ಹಿಂದೆ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯದಂತೆ ಉಳಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಾಧ್ಯವಾಗಿಲ್ಲ, ಇನ್ನು ಬೇರೆ ಪಕ್ಷದವರನ್ನು ಸೆಳೆಯುತ್ತಾರೆಯೇ’ ಎಂದು ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ಶಾಸಕರು ಯಾಕೆ ಪಕ್ಷ ತೊರೆದರು ಎಂಬ ಬಗ್ಗೆ ಅವರು ಸಂಶೋಧನೆ ನಡೆಸಲಿ. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಅವರನ್ನು ಘೋಷಿಸಿದರೆ ಡಿಕೆಶಿ ಅವರೇ ಪಕ್ಷ ತೊರೆಯುತ್ತಾರೆ. ಡಿಕೆಶಿ ಅವರನ್ನು ಘೋಷಿಸಿದರೆ ಸಿದ್ದರಾಮಯ್ಯ ಪಕ್ಷ ತೊರೆಯುತ್ತಾರೆ’ ಎಂದು ಉತ್ತರಿಸಿದರು.</p>.<p>ಡಿಕೆಶಿ ಅವರನ್ನು ಬಿಜೆಪಿ ಶಾಸಕರು ಭೇಟಿಯಾಗಿದ್ದರೋ ಅಥವಾ ಡಿಕೆಶಿ ಅವರೇ ಆ ಶಾಸಕರನ್ನು ಭೇಟಿಯಾಗಿದ್ದರೋ ಗೊತ್ತಿಲ್ಲ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲು ಯಾರು ತಯಾರಾಗಿದ್ದಾರೆ ಎಂದು ಡಿಕೆಶಿ ಬಹಿರಂಗಪಡಿಸಲಿ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>