<p><strong>ಚಿಕ್ಕಮಗಳೂರು</strong>: ವರ್ಷಕ್ಕೊಮ್ಮೆ ದರ್ಶನಕ್ಕೆ ಅವಕಾಶ ಇರುವ ಬೆಟ್ಟದ ತುದಿಯಲ್ಲಿನ ಬಿಂಡಿಗ ದೇವೀರಮ್ಮ ಉತ್ಸವ ಇದೇ 19, 20ರಂದು ನಡೆಯಲಿದೆ.</p>.<p>‘ಇದೇ ಮೊದಲ ಬಾರಿಗೆ ಎರಡು ದಿನ ಅಂದರೆ ಅ.19 ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ತನಕ, 20ರಂದು ಬೆಳಿಗ್ಗೆ 7ರಿಂದ ಪೂಜೆ ಮಧ್ಯಾಹ್ನ 3 ಗಂಟೆ ತನಕ ದೇವಿ ದರ್ಶನಕ್ಕೆ ಅವಕಾಶ ಸಿಗಲಿದೆ’ ಎಂದು ದೇಗುಲ ವ್ಯವಸ್ಥಾಪನಾ ಸಮಿತಿಯ ಕುಲಶೇಖರ್ ತಿಳಿಸಿದರು.</p>.<p>ಬರಿಗಾಲಿನಲ್ಲೇ ಭಕ್ತರು ಬೆಟ್ಟ ಏರಬೇಕಿದೆ. ಮಳೆ ಇರುವುದರಿಂದ 15ರಿಂದ 60 ವರ್ಷದೊಳಗಿನವರಿಗೆ ಮಾತ್ರ ಬೆಟ್ಟ ಏರಲು ಅವಕಾಶ ನೀಡಲಾಗಿದೆ.</p>.<p>ಮುಳ್ಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಗಾಳಿಕೆರೆ ಹಾಗೂ ಮಾಣಿಕ್ಯಧಾರಾ ಜಲಪಾತಕ್ಕೆ ಬರುವ ಇತರೆ ಪ್ರವಾಸಿಗರಿಗೆ ಎರಡೂ ದಿನ (ಅ.19ರ ಬೆಳಿಗ್ಗೆ 6ರಿಂದ 20ರ ಸಂಜೆ 6 ಗಂಟೆ ತನಕ) ಪ್ರವೇಶವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.</p>.<p>ಗಿರಿಭಾಗದಲ್ಲಿ ಇರುವ ಹೋಂಸ್ಟೇ, ರೆಸಾರ್ಟ್ ಮತ್ತು ವಸತಿ ಗೃಹಗಳಿಗೆ ಈಗಾಗಲೇ ಮುಂಗಡವಾಗಿ ಕೊಠಡಿ ಕಾಯ್ದಿರಿಸಿರುವ ಪ್ರವಾಸಿಗರಿಗೆ ಪ್ರವೇಶ ದೊರಯಲಿದೆ. ಆದರೆ, ಅವರಿಗೆ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ಮತ್ತು ಮಾಣಿಕ್ಯಧಾರ ಪ್ರವಾಸಕ್ಕೆ ನಿರ್ಬಂಧ ಇರಲಿದೆ. ಮುಳ್ಳಯ್ಯನಗಿರಿಗೆ ಎರಡೂ ದಿನ ಆನ್ಲೈನ್ ಬುಕ್ಕಿಂಗ್ ಕೂಡ ರದ್ದುಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ವರ್ಷಕ್ಕೊಮ್ಮೆ ದರ್ಶನಕ್ಕೆ ಅವಕಾಶ ಇರುವ ಬೆಟ್ಟದ ತುದಿಯಲ್ಲಿನ ಬಿಂಡಿಗ ದೇವೀರಮ್ಮ ಉತ್ಸವ ಇದೇ 19, 20ರಂದು ನಡೆಯಲಿದೆ.</p>.<p>‘ಇದೇ ಮೊದಲ ಬಾರಿಗೆ ಎರಡು ದಿನ ಅಂದರೆ ಅ.19 ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ತನಕ, 20ರಂದು ಬೆಳಿಗ್ಗೆ 7ರಿಂದ ಪೂಜೆ ಮಧ್ಯಾಹ್ನ 3 ಗಂಟೆ ತನಕ ದೇವಿ ದರ್ಶನಕ್ಕೆ ಅವಕಾಶ ಸಿಗಲಿದೆ’ ಎಂದು ದೇಗುಲ ವ್ಯವಸ್ಥಾಪನಾ ಸಮಿತಿಯ ಕುಲಶೇಖರ್ ತಿಳಿಸಿದರು.</p>.<p>ಬರಿಗಾಲಿನಲ್ಲೇ ಭಕ್ತರು ಬೆಟ್ಟ ಏರಬೇಕಿದೆ. ಮಳೆ ಇರುವುದರಿಂದ 15ರಿಂದ 60 ವರ್ಷದೊಳಗಿನವರಿಗೆ ಮಾತ್ರ ಬೆಟ್ಟ ಏರಲು ಅವಕಾಶ ನೀಡಲಾಗಿದೆ.</p>.<p>ಮುಳ್ಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಗಾಳಿಕೆರೆ ಹಾಗೂ ಮಾಣಿಕ್ಯಧಾರಾ ಜಲಪಾತಕ್ಕೆ ಬರುವ ಇತರೆ ಪ್ರವಾಸಿಗರಿಗೆ ಎರಡೂ ದಿನ (ಅ.19ರ ಬೆಳಿಗ್ಗೆ 6ರಿಂದ 20ರ ಸಂಜೆ 6 ಗಂಟೆ ತನಕ) ಪ್ರವೇಶವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.</p>.<p>ಗಿರಿಭಾಗದಲ್ಲಿ ಇರುವ ಹೋಂಸ್ಟೇ, ರೆಸಾರ್ಟ್ ಮತ್ತು ವಸತಿ ಗೃಹಗಳಿಗೆ ಈಗಾಗಲೇ ಮುಂಗಡವಾಗಿ ಕೊಠಡಿ ಕಾಯ್ದಿರಿಸಿರುವ ಪ್ರವಾಸಿಗರಿಗೆ ಪ್ರವೇಶ ದೊರಯಲಿದೆ. ಆದರೆ, ಅವರಿಗೆ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ಮತ್ತು ಮಾಣಿಕ್ಯಧಾರ ಪ್ರವಾಸಕ್ಕೆ ನಿರ್ಬಂಧ ಇರಲಿದೆ. ಮುಳ್ಳಯ್ಯನಗಿರಿಗೆ ಎರಡೂ ದಿನ ಆನ್ಲೈನ್ ಬುಕ್ಕಿಂಗ್ ಕೂಡ ರದ್ದುಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>