<p><strong>ಚಿಕ್ಕಮಗಳೂರು:</strong> ಶಿವರಾತ್ರಿ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯಲು ಧರ್ಮಸ್ಥಳಕ್ಕೆ ಹಲವು ಜಿಲ್ಲೆಗಳಿಂದ ಭಕ್ತರು ಪಾದಯಾತ್ರೆಯಲ್ಲಿ ತೆರಳುತ್ತಿದ್ದಾರೆ.</p>.<p>ಬೆಂಗಳೂರು, ಹಾಸನ, ಮಂಡ್ಯ, ಚಿತ್ರದುರ್ಗ ಸೇರಿ ರಾಜ್ಯದ ಹಲವೆಡೆಯ ಭಕ್ತರು ಧರ್ಮಸ್ಥಳದತ್ತ ಹೆಜ್ಜೆ ಹಾಕುತ್ತಿದ್ದಾರೆ. ಎಲ್ಲಾ ರಸ್ತೆಗಳು ಮೂಡಿಗೆರೆ ಬಳಿ ಕೂಡುತ್ತಿದ್ದು, ಅಲ್ಲಿಂದ ಮುಂದಕ್ಕೆ ಘಾಟಿ ಇಳಿದು ಭಕ್ತರು ಸಾಗುತ್ತಿದ್ದಾರೆ. ಭಕ್ತರು ಸಾಗುವ ದಾರಿಯುದ್ದಕ್ಕೂ ದಾನಿಗಳು ಊಟ, ಹಣ್ಣು, ನೀರು, ಮಜ್ಜಿಗೆ ವಿತರಿಸುತ್ತಿದ್ದಾರೆ.</p>.<p>ಯುವಕರು, ವೃದ್ಧರು, ಮಹಿಳೆಯರು, ಅಂಗವಿಕಲರೂ ಧರ್ಮಸ್ಥಳದತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೆಲವರು ಮಕ್ಕಳನ್ನು ಹೊತ್ತು ಸಾಗುತ್ತಿದ್ದರೆ, ಬಹುತೇಕರು ಬ್ಯಾಗ್ಗಳನ್ನು ತಲೆಯ ಮೇಲೆ ಹೊತ್ತು ತೆರಳುತ್ತಿದ್ದಾರೆ.</p>.<p>ರಸ್ತೆಯುದ್ದಕ್ಕೂ ಪ್ಲಾಸ್ಟಿಕ್ ತ್ಯಾಜ್ಯ ಬಿದ್ದಿರುವುದು ಸಾಮಾನ್ಯವಾಗಿದೆ. ಬೇರುಭೂಮಿ ಹೆಸರಿನ ತಂಡ ಅಲ್ಲಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಇರಿಸಿ ಸ್ವಚ್ಛತೆ ಕಾಪಾಡಲು ಮನವಿ ಮಾಡಿದೆ. </p>.<p>ಚಾರ್ಮಾಡಿ ಘಾಟಿ ಸೇರಿದಂತೆ ರಸ್ತೆಯುದ್ದಕ್ಕೂ ಬಯಲೇ ಶೌಚಾಲಯವಾಗಿದೆ. ಅಲ್ಲಲ್ಲೇ ತಾತ್ಕಾಲಿಕ ಶೌಚಾಲಯ ಇರಿಸಿದರೆ ಮಹಿಳೆಯರಿಗೆ ಅನುಕೂಲವಾಗಲಿದೆ. ಆದರೆ, ಜಿಲ್ಲಾಡಳಿತ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಭಕ್ತರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಶಿವರಾತ್ರಿ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯಲು ಧರ್ಮಸ್ಥಳಕ್ಕೆ ಹಲವು ಜಿಲ್ಲೆಗಳಿಂದ ಭಕ್ತರು ಪಾದಯಾತ್ರೆಯಲ್ಲಿ ತೆರಳುತ್ತಿದ್ದಾರೆ.</p>.<p>ಬೆಂಗಳೂರು, ಹಾಸನ, ಮಂಡ್ಯ, ಚಿತ್ರದುರ್ಗ ಸೇರಿ ರಾಜ್ಯದ ಹಲವೆಡೆಯ ಭಕ್ತರು ಧರ್ಮಸ್ಥಳದತ್ತ ಹೆಜ್ಜೆ ಹಾಕುತ್ತಿದ್ದಾರೆ. ಎಲ್ಲಾ ರಸ್ತೆಗಳು ಮೂಡಿಗೆರೆ ಬಳಿ ಕೂಡುತ್ತಿದ್ದು, ಅಲ್ಲಿಂದ ಮುಂದಕ್ಕೆ ಘಾಟಿ ಇಳಿದು ಭಕ್ತರು ಸಾಗುತ್ತಿದ್ದಾರೆ. ಭಕ್ತರು ಸಾಗುವ ದಾರಿಯುದ್ದಕ್ಕೂ ದಾನಿಗಳು ಊಟ, ಹಣ್ಣು, ನೀರು, ಮಜ್ಜಿಗೆ ವಿತರಿಸುತ್ತಿದ್ದಾರೆ.</p>.<p>ಯುವಕರು, ವೃದ್ಧರು, ಮಹಿಳೆಯರು, ಅಂಗವಿಕಲರೂ ಧರ್ಮಸ್ಥಳದತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೆಲವರು ಮಕ್ಕಳನ್ನು ಹೊತ್ತು ಸಾಗುತ್ತಿದ್ದರೆ, ಬಹುತೇಕರು ಬ್ಯಾಗ್ಗಳನ್ನು ತಲೆಯ ಮೇಲೆ ಹೊತ್ತು ತೆರಳುತ್ತಿದ್ದಾರೆ.</p>.<p>ರಸ್ತೆಯುದ್ದಕ್ಕೂ ಪ್ಲಾಸ್ಟಿಕ್ ತ್ಯಾಜ್ಯ ಬಿದ್ದಿರುವುದು ಸಾಮಾನ್ಯವಾಗಿದೆ. ಬೇರುಭೂಮಿ ಹೆಸರಿನ ತಂಡ ಅಲ್ಲಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಇರಿಸಿ ಸ್ವಚ್ಛತೆ ಕಾಪಾಡಲು ಮನವಿ ಮಾಡಿದೆ. </p>.<p>ಚಾರ್ಮಾಡಿ ಘಾಟಿ ಸೇರಿದಂತೆ ರಸ್ತೆಯುದ್ದಕ್ಕೂ ಬಯಲೇ ಶೌಚಾಲಯವಾಗಿದೆ. ಅಲ್ಲಲ್ಲೇ ತಾತ್ಕಾಲಿಕ ಶೌಚಾಲಯ ಇರಿಸಿದರೆ ಮಹಿಳೆಯರಿಗೆ ಅನುಕೂಲವಾಗಲಿದೆ. ಆದರೆ, ಜಿಲ್ಲಾಡಳಿತ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಭಕ್ತರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>