<p><strong>ಉಜಿರೆ</strong>: ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ನೆಲೆಯಲ್ಲಿ ಬೇಧ - ಭಾವ ಮರೆತು ಸಮಾನತೆ, ಸಾಮರಸ್ಯ ಮತ್ತು ಸಹಬಾಳ್ವೆಯ ನೆಲೆಯಲ್ಲಿ ಧರ್ಮಸ್ಥಳದ ಎಲ್ಲ ಸೇವಾ ಕಾರ್ಯಗಳನ್ನು ಮಾಡಲಾಗುತ್ತದೆ. ದೇವಸ್ಥಾನದಲ್ಲಿ ಹಾಗೂ ಅನ್ನದಾನ, ವಿದ್ಯಾದಾನ, ಔಷಧಿ ದಾನ ಮತ್ತು ಅಭಯ ದಾನ ಹಾಗೂ ಎಲ್ಲ ಸೇವಾ ಕಾರ್ಯಗಳನ್ನು ಮಾಡುವಾಗ ಜಾತಿ-ಮತ-ಬೇಧವಿಲ್ಲದೆ ಎಲ್ಲ ಭಕ್ತರನ್ನು ಸಮಾನವಾಗಿ ಗೌರವಿಸಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಉಜಿರೆಯಿಂದ ಧರ್ಮಸ್ಥಳಕ್ಕೆ 25 ಸಾವಿರಕ್ಕೂ ಹೆಚ್ಚು ಭಕ್ತರು ಹಾಗೂ ಸಾರ್ವಜನಿಕರು ಶಿವ ಪಂಚಾಕ್ಷರಿ ಪಠಣ ಮತ್ತು ಭಜನೆಗಳನ್ನು ಮಾಡುತ್ತಾ ಪಾದಯಾತ್ರೆಯಲ್ಲಿ ಬಂದು, ಅಮೃತವರ್ಷಿಣಿ ಸಭಾಭವನದಲ್ಲಿ ಹಮ್ಮಿಕೊಂಡ ಅಭಿನಂದನೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.</p>.<p>ರಾಜ್ಯ ಸಭಾ ಸದಸ್ಯರಾಗಿ ನಾಮನಿರ್ದೇಶನ, ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಹಾಗೂ ಬಹುಮುಖಿ ಸಮಾಜ ಸೇವೆಯನ್ನು ಗೌರವಿಸಿ ಅಭಿನಂದಿಸಲಾಯಿತು.</p>.<p>ಉದ್ದೇಶ ಸ್ಷಷ್ಟವಾಗಿದ್ದಾಗ ಎಲ್ಲ ಜನಪರ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಪ್ರಧಾನಿಯವರು ತನ್ನನ್ನು ರಾಜ್ಯಸಭಾ ಸದಸ್ಯನಾಗಿ ನಾಮನಿರ್ದೇಶನ ಮಾಡಿದ್ದಾರೆ. ರಾಷ್ಟಮಟ್ಟದಲ್ಲಿ ಸೇವೆ ಮಾಡಲು ದೊರತೆ ಅವಕಾಶ ಎಂದು ಸ್ವೀಕರಿಸಿದ್ದೇನೆ. ಇದು ನನಗೆ ಹಾಗೂ ಧರ್ಮಸ್ಥಳಕ್ಕೆ ಸಂದ ಗೌರವ ಎಂದರು.</p>.<p>ಭೇದ ಭಾವ ಮರೆತು ಎಲ್ಲರೂ ಪ್ರೀತಿ-ವಿಶ್ವಾಸದಿಂದ, ಸಮಾನತೆ ಮತ್ತು ಸಾಮರಸ್ಯದ ಜೀವನ ನಡೆಸಿ ಎಂದು ಅವರು ಸಲಹೆ ನೀಡಿದರು.</p>.<p>ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ ಶ್ರದ್ಧಾ-ಭಕ್ತಿಯಿಂದ ಮಾಡಿದ ಪಾದಯಾತ್ರೆಯಲ್ಲಿ ಆಯಾಸ ಮತ್ತು ಸಮಯ ತಿಳಿಯಲೇ ಇಲ್ಲ. ಎಲ್ಲರಲ್ಲಿಯೂ ಉತ್ಸಾಹ, ಸಂತೋಷ ಮತ್ತು ನೆಮ್ಮದಿ ಮೂಡಿಬಂದಿದೆ ಎಂದರು.</p>.<p>ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಕಲಿಯುಗದಲ್ಲಿ ಸಾತ್ವಿಕ ಶಕ್ತಿಯ ಸಂಘಟನೆಯೇ ಬಲವಾಗಿದೆ ಎಂದರು.<br />ಹೇಮಾವತಿ ಹೆಗ್ಗಡೆ, ಉಜಿರೆಯ ಶರತ್ಕೃಷ್ಣ ಪಡ್ವೆಟ್ನಾಯ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಮಾನ್ಯ, ಸೋನಿಯಾ ವರ್ಮ ಮತ್ತು ಪೂರಣ್ ವರ್ಮ ಇದ್ದರು.</p>.<p>ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಸಿ.ಒ.ಒ. ಅನಿಲ್ ಕುಮಾರ್ ಧನ್ಯವಾದ<br />ವಿತ್ತರು. ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.</p>.<p>ಉಜಿರೆಯಲ್ಲಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಶರತ್ಕೃಷ್ಣ ಪಡ್ವೆಟ್ನಾಯ ಹಾಗೂ ಶಾಸಕ ಹರೀಶ್ ಪೂಂಜ ಪಾದಾಯಾತ್ರೆಗೆ ಚಾಲನೆ ನೀಡಿದರು. ಧರ್ಮಸ್ಥಳದಲ್ಲಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ</strong>: ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ನೆಲೆಯಲ್ಲಿ ಬೇಧ - ಭಾವ ಮರೆತು ಸಮಾನತೆ, ಸಾಮರಸ್ಯ ಮತ್ತು ಸಹಬಾಳ್ವೆಯ ನೆಲೆಯಲ್ಲಿ ಧರ್ಮಸ್ಥಳದ ಎಲ್ಲ ಸೇವಾ ಕಾರ್ಯಗಳನ್ನು ಮಾಡಲಾಗುತ್ತದೆ. ದೇವಸ್ಥಾನದಲ್ಲಿ ಹಾಗೂ ಅನ್ನದಾನ, ವಿದ್ಯಾದಾನ, ಔಷಧಿ ದಾನ ಮತ್ತು ಅಭಯ ದಾನ ಹಾಗೂ ಎಲ್ಲ ಸೇವಾ ಕಾರ್ಯಗಳನ್ನು ಮಾಡುವಾಗ ಜಾತಿ-ಮತ-ಬೇಧವಿಲ್ಲದೆ ಎಲ್ಲ ಭಕ್ತರನ್ನು ಸಮಾನವಾಗಿ ಗೌರವಿಸಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಉಜಿರೆಯಿಂದ ಧರ್ಮಸ್ಥಳಕ್ಕೆ 25 ಸಾವಿರಕ್ಕೂ ಹೆಚ್ಚು ಭಕ್ತರು ಹಾಗೂ ಸಾರ್ವಜನಿಕರು ಶಿವ ಪಂಚಾಕ್ಷರಿ ಪಠಣ ಮತ್ತು ಭಜನೆಗಳನ್ನು ಮಾಡುತ್ತಾ ಪಾದಯಾತ್ರೆಯಲ್ಲಿ ಬಂದು, ಅಮೃತವರ್ಷಿಣಿ ಸಭಾಭವನದಲ್ಲಿ ಹಮ್ಮಿಕೊಂಡ ಅಭಿನಂದನೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.</p>.<p>ರಾಜ್ಯ ಸಭಾ ಸದಸ್ಯರಾಗಿ ನಾಮನಿರ್ದೇಶನ, ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಹಾಗೂ ಬಹುಮುಖಿ ಸಮಾಜ ಸೇವೆಯನ್ನು ಗೌರವಿಸಿ ಅಭಿನಂದಿಸಲಾಯಿತು.</p>.<p>ಉದ್ದೇಶ ಸ್ಷಷ್ಟವಾಗಿದ್ದಾಗ ಎಲ್ಲ ಜನಪರ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಪ್ರಧಾನಿಯವರು ತನ್ನನ್ನು ರಾಜ್ಯಸಭಾ ಸದಸ್ಯನಾಗಿ ನಾಮನಿರ್ದೇಶನ ಮಾಡಿದ್ದಾರೆ. ರಾಷ್ಟಮಟ್ಟದಲ್ಲಿ ಸೇವೆ ಮಾಡಲು ದೊರತೆ ಅವಕಾಶ ಎಂದು ಸ್ವೀಕರಿಸಿದ್ದೇನೆ. ಇದು ನನಗೆ ಹಾಗೂ ಧರ್ಮಸ್ಥಳಕ್ಕೆ ಸಂದ ಗೌರವ ಎಂದರು.</p>.<p>ಭೇದ ಭಾವ ಮರೆತು ಎಲ್ಲರೂ ಪ್ರೀತಿ-ವಿಶ್ವಾಸದಿಂದ, ಸಮಾನತೆ ಮತ್ತು ಸಾಮರಸ್ಯದ ಜೀವನ ನಡೆಸಿ ಎಂದು ಅವರು ಸಲಹೆ ನೀಡಿದರು.</p>.<p>ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ ಶ್ರದ್ಧಾ-ಭಕ್ತಿಯಿಂದ ಮಾಡಿದ ಪಾದಯಾತ್ರೆಯಲ್ಲಿ ಆಯಾಸ ಮತ್ತು ಸಮಯ ತಿಳಿಯಲೇ ಇಲ್ಲ. ಎಲ್ಲರಲ್ಲಿಯೂ ಉತ್ಸಾಹ, ಸಂತೋಷ ಮತ್ತು ನೆಮ್ಮದಿ ಮೂಡಿಬಂದಿದೆ ಎಂದರು.</p>.<p>ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಕಲಿಯುಗದಲ್ಲಿ ಸಾತ್ವಿಕ ಶಕ್ತಿಯ ಸಂಘಟನೆಯೇ ಬಲವಾಗಿದೆ ಎಂದರು.<br />ಹೇಮಾವತಿ ಹೆಗ್ಗಡೆ, ಉಜಿರೆಯ ಶರತ್ಕೃಷ್ಣ ಪಡ್ವೆಟ್ನಾಯ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಮಾನ್ಯ, ಸೋನಿಯಾ ವರ್ಮ ಮತ್ತು ಪೂರಣ್ ವರ್ಮ ಇದ್ದರು.</p>.<p>ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಸಿ.ಒ.ಒ. ಅನಿಲ್ ಕುಮಾರ್ ಧನ್ಯವಾದ<br />ವಿತ್ತರು. ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.</p>.<p>ಉಜಿರೆಯಲ್ಲಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಶರತ್ಕೃಷ್ಣ ಪಡ್ವೆಟ್ನಾಯ ಹಾಗೂ ಶಾಸಕ ಹರೀಶ್ ಪೂಂಜ ಪಾದಾಯಾತ್ರೆಗೆ ಚಾಲನೆ ನೀಡಿದರು. ಧರ್ಮಸ್ಥಳದಲ್ಲಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>