<p><strong>ಚಿಕ್ಕಮಗಳೂರು:</strong> ‘ಸಮಸಮಾಜ ನಿರ್ಮಾಣ ಆಗಬೇಕೆಂದರೆ ಅಂಬೇಡ್ಕರ್ ಆಶಯದಂತೆ ಎಲ್ಲಾ ಶೋಷಿತರಿಗೂ ಶಿಕ್ಷಣ ದೊರಕಬೇಕು. ದೀಕ್ಷಾಭೂಮಿ ಯಾತ್ರಿಕರು ಪ್ರವಾಸಕ್ಕೆ ಸೀಮಿತವಾಗದೆ ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಇತರರಿಗೂ ಅರಿವು ಮೂಡಿಸಬೇಕು’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥೆ ಮಾಡಿರುವ ಬಸ್ಗಳಲ್ಲಿ ನಾಗಪುರದ ದೀಕ್ಷಾಭೂಮಿಗೆ ಯಾತ್ರೆ ಹೊರಟ 222 ಅಂಬೇಡ್ಕರ್ ಅನುಯಾಯಿಗಳನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೀಳ್ಕೊಟ್ಟು ಅವರು ಮಾತನಾಡಿದರು.</p>.<p>ವಿಶ್ವ ಮೆಚ್ಚುವ ಸಂವಿಧಾನ ರಚಿಸಿರುವ ಅಂಬೇಡ್ಕರ್ ಅವರ ಪಂಚಧಾಮಗಳಲ್ಲಿ ಒಂದಾಗಿರುವ ನಾಗಪುರ ದೀಕ್ಷಾ ಭೂಮಿಯಲ್ಲಿರುವ ಅವರ ವಿಚಾರಧಾರೆಗಳನ್ನು ಯಾತ್ರಿಕರು ಅರಿತುಕೊಳ್ಳಬೇಕು. ವಾಪಸ್ ಬಂದ ಬಳಿಕ ಕನಿಷ್ಠ ತಲಾ 10 ಜನರಿಗೆ ತಲುಪಿಸಿದರೆ 2,200 ಜನರಿಗೆ ತಲುಪುತ್ತದೆ ಎಂದು ಹೇಳಿದರು.</p>.<p>ಸಾಕ್ಷರತೆಯಲ್ಲಿ ಕೇರಳ ರಾಜ್ಯ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕೆಂಬ ಅಂಬೇಡ್ಕರ್ ಅವರ ಆಶಯದಂತೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಈ ಯೋಜನೆ ರೂಪಿಸಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಮನೆ –ಮನೆಗೆ ಮುಟ್ಟಿಸುವ ಕೆಲಸವನ್ನು ದೀಕ್ಷಾಭೂಮಿ ಯಾತ್ರಾರ್ಥಿಗಳು ಮಾಡಬೇಕು ಎಂದು ತಿಳಿಸಿದರು.</p>.<p>‘ಸರ್ಕಾರ ಬಂದ ಮೂರು ವರ್ಷದಿಂದಲೂ ಈ ಯಾತ್ರೆಗೆ ವಾಹನ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಸರ್ಕಾರ ಬಡವರು, ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಎಲ್ಲಾ ಸಮುದಾಯದ ಬಡವರ ಪರ ಇರುವ ಹಲವು ಯೋಜನೆ ಜಾರಿಗೊಳಿಸಿದೆ. ಅದರಲ್ಲಿ ಈ ಯೋಜನೆಯೂ ಒಂದು. ಯಾತ್ರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿ, ‘ಐದು ದಿನದ ಪ್ರವಾಸದಲ್ಲಿ ನಾಗಪುರ ದೀಕ್ಷಾಭೂಮಿ ಯಾತ್ರೆಯ ಅನುಭವ ಜೀವನ ಪರ್ಯಂತ ಸ್ಮರಣೆಯಲ್ಲಿ ಉಳಿಯಲಿದೆ. ಅಲ್ಲಿ ನಡೆಯುವ ದೀಕ್ಷಾ ಬೋಧನೆ ಬಗ್ಗೆ ಅರಿತು ಹೆಚ್ಚು ಪ್ರಚಾರ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಉಪಾಧ್ಯಕ್ಷ ಲಲಿತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರೇವಣ್ಣ, ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ್, ಮುಖಂಡರಾದ ಹುಣಸೆಮುಕ್ಕಿ ಲಕ್ಷ್ಮಣ, ಹೊನ್ನೇಶ್, ಹರೀಶ್ ಮಿತ್ರ, ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಸಮಸಮಾಜ ನಿರ್ಮಾಣ ಆಗಬೇಕೆಂದರೆ ಅಂಬೇಡ್ಕರ್ ಆಶಯದಂತೆ ಎಲ್ಲಾ ಶೋಷಿತರಿಗೂ ಶಿಕ್ಷಣ ದೊರಕಬೇಕು. ದೀಕ್ಷಾಭೂಮಿ ಯಾತ್ರಿಕರು ಪ್ರವಾಸಕ್ಕೆ ಸೀಮಿತವಾಗದೆ ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಇತರರಿಗೂ ಅರಿವು ಮೂಡಿಸಬೇಕು’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥೆ ಮಾಡಿರುವ ಬಸ್ಗಳಲ್ಲಿ ನಾಗಪುರದ ದೀಕ್ಷಾಭೂಮಿಗೆ ಯಾತ್ರೆ ಹೊರಟ 222 ಅಂಬೇಡ್ಕರ್ ಅನುಯಾಯಿಗಳನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೀಳ್ಕೊಟ್ಟು ಅವರು ಮಾತನಾಡಿದರು.</p>.<p>ವಿಶ್ವ ಮೆಚ್ಚುವ ಸಂವಿಧಾನ ರಚಿಸಿರುವ ಅಂಬೇಡ್ಕರ್ ಅವರ ಪಂಚಧಾಮಗಳಲ್ಲಿ ಒಂದಾಗಿರುವ ನಾಗಪುರ ದೀಕ್ಷಾ ಭೂಮಿಯಲ್ಲಿರುವ ಅವರ ವಿಚಾರಧಾರೆಗಳನ್ನು ಯಾತ್ರಿಕರು ಅರಿತುಕೊಳ್ಳಬೇಕು. ವಾಪಸ್ ಬಂದ ಬಳಿಕ ಕನಿಷ್ಠ ತಲಾ 10 ಜನರಿಗೆ ತಲುಪಿಸಿದರೆ 2,200 ಜನರಿಗೆ ತಲುಪುತ್ತದೆ ಎಂದು ಹೇಳಿದರು.</p>.<p>ಸಾಕ್ಷರತೆಯಲ್ಲಿ ಕೇರಳ ರಾಜ್ಯ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕೆಂಬ ಅಂಬೇಡ್ಕರ್ ಅವರ ಆಶಯದಂತೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಈ ಯೋಜನೆ ರೂಪಿಸಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಮನೆ –ಮನೆಗೆ ಮುಟ್ಟಿಸುವ ಕೆಲಸವನ್ನು ದೀಕ್ಷಾಭೂಮಿ ಯಾತ್ರಾರ್ಥಿಗಳು ಮಾಡಬೇಕು ಎಂದು ತಿಳಿಸಿದರು.</p>.<p>‘ಸರ್ಕಾರ ಬಂದ ಮೂರು ವರ್ಷದಿಂದಲೂ ಈ ಯಾತ್ರೆಗೆ ವಾಹನ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಸರ್ಕಾರ ಬಡವರು, ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಎಲ್ಲಾ ಸಮುದಾಯದ ಬಡವರ ಪರ ಇರುವ ಹಲವು ಯೋಜನೆ ಜಾರಿಗೊಳಿಸಿದೆ. ಅದರಲ್ಲಿ ಈ ಯೋಜನೆಯೂ ಒಂದು. ಯಾತ್ರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿ, ‘ಐದು ದಿನದ ಪ್ರವಾಸದಲ್ಲಿ ನಾಗಪುರ ದೀಕ್ಷಾಭೂಮಿ ಯಾತ್ರೆಯ ಅನುಭವ ಜೀವನ ಪರ್ಯಂತ ಸ್ಮರಣೆಯಲ್ಲಿ ಉಳಿಯಲಿದೆ. ಅಲ್ಲಿ ನಡೆಯುವ ದೀಕ್ಷಾ ಬೋಧನೆ ಬಗ್ಗೆ ಅರಿತು ಹೆಚ್ಚು ಪ್ರಚಾರ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಉಪಾಧ್ಯಕ್ಷ ಲಲಿತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರೇವಣ್ಣ, ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ್, ಮುಖಂಡರಾದ ಹುಣಸೆಮುಕ್ಕಿ ಲಕ್ಷ್ಮಣ, ಹೊನ್ನೇಶ್, ಹರೀಶ್ ಮಿತ್ರ, ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>