ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ಸರ್ಕಾರದಿಂದ ಆಚರಿಸಲು ಮುಖ್ಯಮಂತ್ರಿ ಸೂಚಿಸಿದರೂ ಸಿ.ಟಿ. ರವಿ ಒಪ್ಪಿಲ್ಲ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ ಹೇಳಿಕೆಗೆ ಸಂಬಂಧಿಸಿದಂತೆ ‘ಪ್ರಜಾವಾಣಿ’ಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ‘ಜಕಣಾಚಾರಿ ಅವರು ದೇಶ ಕಂಡ ಶ್ರೇಷ್ಠ ಶಿಲ್ಪಿ, ಬೇಲೂರು, ಹಳೇಬೀಡು ಸಹಿತ ಅನೇಕ ದೇಗುಲಗಳು ಅವರ ಕಲಾವೈಭವಕ್ಕೆ ಸಾಕ್ಷಿಯಾಗಿವೆ. ಶಿಲ್ಪಕಲಾ ಕ್ಷೇತ್ರದಲ್ಲಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಸರ್ಕಾರದ ವತಿಯಿಂದ ವಿಶ್ವಕರ್ಮ ಜಯಂತಿ ಈಗಾಗಲೇ ಆಚರಿಸಲಾಗುತ್ತಿದೆ’ ಎಂದು ಉತ್ತರಿಸಿದರು.