ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಕೃಷಿ ಪರಿಕರ ವಿತರಣೆ

Last Updated 17 ಮೇ 2020, 13:11 IST
ಅಕ್ಷರ ಗಾತ್ರ

ಶೃಂಗೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ₹ 50,000 ಮೊತ್ತದ ಕೃಷಿ ಪರಿಕರಗಳನ್ನು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಫಲಾನುಭವಿಗಳಾದ ಹೊನ್ನವಳ್ಳಿ ಶ್ರೀನಿವಾಸ್‍ ನಾಯ್ಕ್ ಮತ್ತು ಕೆಸರಕೂಡಿಗೆ ಚಂದ್ರ ನಾಯ್ಕ್ ಅವರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಶಿವಶಂಕರ್ ವಿತರಿಸಿದರು.

ನಂತರ ಅವರು ಮಾತನಾಡಿ, ‘ಕೊರೊನಾ ವೈರಸ್‌ ಸೋಂಕಿನ ಭೀತಿಯ ನಡುವೆ ಸರ್ಕಾರವು ರೈತರ ಪರವಾಗಿದ್ದು, ಕೃಷಿ ಚಟುವಟಿಕೆಗೆ ಪೂರಕವಾದ ಪರಿಕರಗಳನ್ನು ನೀಡುತ್ತಿವೆ. ಕೃಷಿಕರ ಅರ್ಥಿಕ ಸಬಲತೆಗೆ ಪ್ರೋತ್ಸಾಹವನ್ನು ನಿರಂತರ ನೀಡುತ್ತಾ ಬಂದಿದೆ. ಪಡೆದ ಸವಲತ್ತುಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ನಿಗಮದ ಜಿಲ್ಲಾ ವ್ಯವಸ್ಥಾಪಕ ಅಚ್ಚಪ್ಪ ಹಾಗೂ ಅಧಿಕಾರಿ ಆನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT