ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಪಂಚದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಗಳಲ್ಲಿ ಚೀನಾ ಪ್ರಥಮ ಸ್ಥಾನದಲ್ಲಿದೆ. ಭಾರತ ದ್ವಿತೀಯ ಸ್ಥಾನದಲ್ಲಿದೆ. ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಡಿವಾಣ ಹಾಕದಿದ್ದರೆ, ಮುಂದೊಂದು ದಿನ ಭಾರತ ಪ್ರಥಮ ಸ್ಥಾನಕ್ಕೆ ಬರಲಿದೆ. ಜನಸಂಖ್ಯೆ ನಿಯಂತ್ರಣದಲ್ಲಿ ಗಂಡು - ಹೆಣ್ಣಿನ ಪಾತ್ರ ಮಹತ್ವದ್ದಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಬೇಕು ಎಂದರು.
ದೇಶದಲ್ಲಿ ಜನನ ಪ್ರಮಾಣ ಹೆಚ್ಚಾಗಿದೆ. ಮರಣ ಪ್ರಮಾಣ ಕಡಿಮೆ ಇದೆ. ಜನಸಂಖ್ಯೆ ಹೆಚ್ಚಳದಿಂದ ಮೂಲಸೌಕರ್ಯಗಳ ಕೊರತೆ ಉಂಟಾಗುತ್ತದೆ. ಬಡತನ, ನಿರುದ್ಯೋಗ ಸಮಸ್ಯೆ ಹೆಚ್ಚಾಗಲಿದೆ. ಜನಸಂಖ್ಯಾ ನಿಯಂತ್ರಣ ವಿಚಾರ ಕೇವಲ ಸಭೆ, ಜಾಥಾಗಳಿಗೆ ಸೀಮಿತವಾಗಬಾರದು ಎಂದರು.