<p><strong>ಬಾಳೆಹೊನ್ನೂರು (ಚಿಕ್ಕಮಗಳೂರು):</strong> ‘ಅಮೆರಿಕ– ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲಿಸುವಂತೆ ಅಮೆರಿಕಕ್ಕೆ ಭಾರತ ಸಂದೇಶ ನೀಡಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಬಾಳೆಹೊನ್ನೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ‘ಯುದ್ಧದಿಂದ ಭಾರತಕ್ಕೂ ದೊಡ್ಡ ಗಂಡಾಂತರ ಬಂದಿದೆ. ಭಾರತೀಯರು ಎಲ್ಲರೂ ಸೇರಿ ಒಟ್ಟಾಗಿ ಸಂದೇಶ ಕೊಡಬೇಕಾದ ಅಗತ್ಯವಿದೆ. ಅಮೆರಿಕ ಯುದ್ಧ ನಿಲ್ಲಿಸಬೇಕು, ಶಾಂತಿ ಮಾತುಕತೆ ನಡೆಸಬೇಕು’ ಎಂದು ಆಗ್ರಹಿಸಿದರು.</p><p>‘ಭಾರತದ ಪ್ರಜೆಗಳ ದುಡಿಮೆಯಿಂದ ಸೌದಿ ಅರೇಬಿಯ ಬದುಕುತ್ತಿದೆ. ದೇಶದ ಜನ ಅದರಲ್ಲೂ ದಕ್ಷಿಣ ಭಾರತದವರು ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದುಡಿ ಯುತ್ತಿದ್ದಾರೆ. ಆ ದೇಶಕ್ಕೂ ಆದಾಯ ತಂದು ಕೊಡುತ್ತಿದ್ದಾರೆ. ಅವರನ್ನು ಉಳಿಸಿಕೊಳ್ಳುವ ಅಗತ್ಯ ಇಂದು ಇದೆ’ ಎಂದರು. </p><p>‘ನಾವೆಲ್ಲರೂ ಶಾಂತಿ ಬಯಸಬೇಕು. ಆ ಮೂಲಕವೇ ಜನರನ್ನು ಉಳಿಸಿಕೊಳ್ಳಬೇಕು. ಈ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೂ ಒತ್ತಾಯ ಮಾಡುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು (ಚಿಕ್ಕಮಗಳೂರು):</strong> ‘ಅಮೆರಿಕ– ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲಿಸುವಂತೆ ಅಮೆರಿಕಕ್ಕೆ ಭಾರತ ಸಂದೇಶ ನೀಡಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಬಾಳೆಹೊನ್ನೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ‘ಯುದ್ಧದಿಂದ ಭಾರತಕ್ಕೂ ದೊಡ್ಡ ಗಂಡಾಂತರ ಬಂದಿದೆ. ಭಾರತೀಯರು ಎಲ್ಲರೂ ಸೇರಿ ಒಟ್ಟಾಗಿ ಸಂದೇಶ ಕೊಡಬೇಕಾದ ಅಗತ್ಯವಿದೆ. ಅಮೆರಿಕ ಯುದ್ಧ ನಿಲ್ಲಿಸಬೇಕು, ಶಾಂತಿ ಮಾತುಕತೆ ನಡೆಸಬೇಕು’ ಎಂದು ಆಗ್ರಹಿಸಿದರು.</p><p>‘ಭಾರತದ ಪ್ರಜೆಗಳ ದುಡಿಮೆಯಿಂದ ಸೌದಿ ಅರೇಬಿಯ ಬದುಕುತ್ತಿದೆ. ದೇಶದ ಜನ ಅದರಲ್ಲೂ ದಕ್ಷಿಣ ಭಾರತದವರು ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದುಡಿ ಯುತ್ತಿದ್ದಾರೆ. ಆ ದೇಶಕ್ಕೂ ಆದಾಯ ತಂದು ಕೊಡುತ್ತಿದ್ದಾರೆ. ಅವರನ್ನು ಉಳಿಸಿಕೊಳ್ಳುವ ಅಗತ್ಯ ಇಂದು ಇದೆ’ ಎಂದರು. </p><p>‘ನಾವೆಲ್ಲರೂ ಶಾಂತಿ ಬಯಸಬೇಕು. ಆ ಮೂಲಕವೇ ಜನರನ್ನು ಉಳಿಸಿಕೊಳ್ಳಬೇಕು. ಈ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೂ ಒತ್ತಾಯ ಮಾಡುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>