<p><strong>ಚಿಕ್ಕಮಗಳೂರು</strong>: ‘ನನ್ನ ಆರೋಗ್ಯ ಸರಿ ಇಲ್ಲ ಎಂಬ ಸುಳ್ಳು ಸುದ್ದಿ ಹಬ್ಬಿಸಿ ದಾರಿ ತಪ್ಪಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ’ ಎಂದು ಮಾಜಿ ಸಂಸದೆ ಡಿ.ಕೆ.ತಾರಾದೇವಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ನಾನೇ ಅಭ್ಯರ್ಥಿಯಾಗಬೇಕು ಎಂದು ಬಯಸಿದ್ದಾರೆ. ಪಕ್ಷದ ಹೈಕಮಾಂಡ್ಗೂ ಮನವರಿಕೆ ಮಾಡಿಕೊಡುತ್ತಿದ್ದಾರೆ. ಈ ಸಂದರ್ಭದಲ್ಲಿ ನನಗೆ ಅನಾರೋಗ್ಯ ಇದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ನಾನು ಆರೋಗ್ಯವಾಗಿದ್ದೇನೆ’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಸ್ಪಷ್ಟಪಡಿಸಿದರು.</p>.<p>‘ನಾನು ಅಭ್ಯರ್ಥಿಯಾದರೆ ಬಿಜೆಪಿಗೆ ಪ್ರಬಲ ಪೈಪೋಟಿ ಒಡ್ಡಲು ಸಾಧ್ಯವಿದೆ ಎಂಬುದು ಕಾರ್ಯಕರ್ತರ ಅಭಿಪ್ರಾಯ. ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧಳಿದ್ದೇನೆ’ ಎಂದರು.</p>.<p>‘ಪತಿಯ ಮರಣಾನಂತರ ಕೆಲಕಾಲ ಸಾರ್ವಜನಿಕ ಜೀವನದಿಂದ ಹೊರಗಿದ್ದೆ. ಈಗ ಚೇತರಿಸಿಕೊಂಡು ಪಕ್ಷದ ಕಾರ್ಯಕ್ರಮ, ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ’ ಎಂದು ತಿಳಿಸಿದರು.</p>.<p>ಸಂಸ್ಥೆಯೊಂದನ್ನು ಹುಟ್ಟುಹಾಕಿ ಯುವಕರು ಮತ್ತು ಮಹಿಳಾ ಸಬಲೀಕರಣಕ್ಕೆ ದುಡಿಯುವ ಇಚ್ಛೆ ಇದೆ. ಈ ಸಂಬಂಧ ರೂಪರೇಷೆ ಸಿದ್ಧವಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ನನ್ನ ಆರೋಗ್ಯ ಸರಿ ಇಲ್ಲ ಎಂಬ ಸುಳ್ಳು ಸುದ್ದಿ ಹಬ್ಬಿಸಿ ದಾರಿ ತಪ್ಪಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ’ ಎಂದು ಮಾಜಿ ಸಂಸದೆ ಡಿ.ಕೆ.ತಾರಾದೇವಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ನಾನೇ ಅಭ್ಯರ್ಥಿಯಾಗಬೇಕು ಎಂದು ಬಯಸಿದ್ದಾರೆ. ಪಕ್ಷದ ಹೈಕಮಾಂಡ್ಗೂ ಮನವರಿಕೆ ಮಾಡಿಕೊಡುತ್ತಿದ್ದಾರೆ. ಈ ಸಂದರ್ಭದಲ್ಲಿ ನನಗೆ ಅನಾರೋಗ್ಯ ಇದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ನಾನು ಆರೋಗ್ಯವಾಗಿದ್ದೇನೆ’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಸ್ಪಷ್ಟಪಡಿಸಿದರು.</p>.<p>‘ನಾನು ಅಭ್ಯರ್ಥಿಯಾದರೆ ಬಿಜೆಪಿಗೆ ಪ್ರಬಲ ಪೈಪೋಟಿ ಒಡ್ಡಲು ಸಾಧ್ಯವಿದೆ ಎಂಬುದು ಕಾರ್ಯಕರ್ತರ ಅಭಿಪ್ರಾಯ. ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧಳಿದ್ದೇನೆ’ ಎಂದರು.</p>.<p>‘ಪತಿಯ ಮರಣಾನಂತರ ಕೆಲಕಾಲ ಸಾರ್ವಜನಿಕ ಜೀವನದಿಂದ ಹೊರಗಿದ್ದೆ. ಈಗ ಚೇತರಿಸಿಕೊಂಡು ಪಕ್ಷದ ಕಾರ್ಯಕ್ರಮ, ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ’ ಎಂದು ತಿಳಿಸಿದರು.</p>.<p>ಸಂಸ್ಥೆಯೊಂದನ್ನು ಹುಟ್ಟುಹಾಕಿ ಯುವಕರು ಮತ್ತು ಮಹಿಳಾ ಸಬಲೀಕರಣಕ್ಕೆ ದುಡಿಯುವ ಇಚ್ಛೆ ಇದೆ. ಈ ಸಂಬಂಧ ರೂಪರೇಷೆ ಸಿದ್ಧವಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>