ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿಯ ಪರಿಹಾರ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡಬಾರದು. ಕಾಂಗ್ರೆಸ್ನವರು 60 ವರ್ಷ ದೇಶದಲ್ಲಿ ಆಡಳಿತ ಮಾಡಿದ್ದಾರೆ. ಆ ಕಾಲದಲ್ಲೂ ಬಹಳಷ್ಟು ಜನ ಜೈಲಿಗೆ ಹೋಗಿಬಂದಿದ್ದಾರೆ. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ನನ್ನನ್ನು, ಯಡಿಯೂರಪ್ಪ, ಅನಂತಕುಮಾರ್, ಸುರೇಶಕುಮಾರ್ ಅವರನ್ನು ಜೈಲಿಗೆ ಹಾಕಿದ್ದರು’ ಎಂದು ಉತ್ತರಿಸಿದರು.