ಡಾ.ಶೃತಿ ವಿಜೇಂದ್ರನ್ ಮಾತನಾಡಿ, ‘ಕಣ್ಣಿನ ಸಮಸ್ಯೆ ಇದ್ದವರು ಪರೀಕ್ಷೆಗೆ ಒಳಪಟ್ಟು ವೈದ್ಯರಿಂದ ಸಲಹೆ ಪಡೆಯಬೇಕು. ಕಣ್ಣು ದೇಹದ ಸೂಕ್ಷ್ಮ ಅಂಗವಾಗಿದ್ದು, ಅಗತ್ಯವಿರುವ ಚಿಕಿತ್ಸೆ ಪಡೆಯಬೇಕು. ವಿದ್ಯಾರ್ಥಿಗಳು ಮೊಬೈಲ್, ಟಿ.ವಿ. ಹೆಚ್ಚು ನೋಡುವುದರಿಂದ ಕಣ್ಣಿಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಆಹಾರದಲ್ಲಿ ಸೊಪ್ಪು, ತರಕಾರಿ ಉಪಯೋಗಿಸುವುದು ಉತ್ತಮ’ ಎಂದರು.ಆಸ್ಪತ್ರೆ ಆಡಳಿತಾಧಿಕಾರಿ ಡಾ.ಅನಂತನಾರಾಯಣ, ಸಂಪರ್ಕಾಧಿಕಾರಿ ಬಿ.ಎನ್ ಕೃಷ್ಣ, ಪತ್ರಕರ್ತರ ಸಂಘದ ಕೆ.ಎಲ್.ಗೋಪಾಲಕೃಷ್ಣ, ಸುಬ್ರಹ್ಮಣ್ಯ ಆಚಾರ್ಯ ಇದ್ದರು.