’ಮಲೆನಾಡಿನಲ್ಲಿ ಡೀಮ್ಡ್ ಫಾರೆಸ್ಟ್, ಸೊಪ್ಪಿನಬೆಟ್ಟ ಹೀಗೆ ಸಾಕಷ್ಟು ಗೊಂದಲಗಳಿವೆ. ಈಗಾಗಲೇ 94ಸಿಯಲ್ಲಿ ವಸತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರು ಈ ಕುರಿತು ಕೂಡಲೇ ಗಮನ ನೀಡಿ ಬಡವರಿಗೆ ವಸತಿ ಸೌಕರ್ಯ ನೀಡಬೇಕು ಎಂದಿದ್ದಾರೆ. ಆದರೆ, ಶಾಸಕ ಟಿ.ಡಿ ರಾಜೇಗೌಡರು ಈ ಹಿಂದೆ ನಡೆದ ಸಭೆಯಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆದು ರೈತರು ಸಲ್ಲಿಸಿದ ಅರ್ಜಿಯನ್ನು ಪರಿಷ್ಕರಿಸಬೇಕು ಎಂದು ನಿರ್ಣಯ ಮಾಡಿದ್ದಾರೆ. ಇದರಿಂದ ಗೊಂದಲವಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ 8 ಹೋಬಳಿಯಲ್ಲಿ ನಡೆಯುವ ಅಕ್ರಮ-ಸಮಿತಿ ಸಭೆಯಲ್ಲಿ ರೈತರು ಸಲ್ಲಿಸಿದ ಅರ್ಜಿಯ ಕುರಿತು ಹೆಚ್ಚಿನ ಗಮನವನ್ನು ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ನೀಡಬೇಕು’ ಎಂದರು.