<p><strong>ಚಿಕ್ಕಮಗಳೂರು:</strong> ‘ಜಿಲ್ಲೆಯಲ್ಲಿ ಮಾದಕ ವಸ್ತುಗಳ ವ್ಯಾಪಾರ-ವ್ಯವಹಾರ ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.</p>.<p>ನಗರದ ಟಿ.ಎಂ.ಎಸ್ ರೋಟರಿ ಹಾಲ್ನಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ವ್ಯಸನ ಮುಕ್ತ ದಿನಾಚರಣೆ ಹಾಗೂ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ದೇಶದ ದಿಕ್ಕನ್ನೇ ಬದಲಿಸುವ ಶಕ್ತಿ ಇರುವ ಯುವಜನ ವ್ಯಸನಗಳಿಗೆ ಬಲಿಯಾದರೆ ಅವರ ಕುಟುಂಬ, ಸಮಾಜ ಅಷ್ಟೇ ಅಲ್ಲ ಇಡೀ ದೇಶವೇ ದಿಕ್ಕು ತಪ್ಪುತ್ತದೆ ಎಂದು ಹೇಳಿದರು.</p>.<p>‘ಮಾದಕ ವ್ಯಸನಿಗಳಾದಲ್ಲಿ ಅವರ ವ್ಯಕ್ತಿಗತ ಜೀವನ ಮಾತ್ರವಲ್ಲ ಸಾಮಾಜಿಕ ಜೀವನದ ಮೇಲೂ ದುಷ್ಪರಿಣಾಮ ಬೀರುತ್ತದೆ. ಈ ಚಟಕ್ಕೆ ಬಿದ್ದವರು ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜಕ್ಕೆ ಮಾರಕವಾಗುತ್ತಾರೆ. ಸಂಸ್ಕಾರವಂತ ದೇಶದಲ್ಲಿ ಜನಿಸಿರುವ ನಾವು ಕ್ಷಣಿಕ ಸಂತೋಷಕ್ಕಾಗಿ ಚಟಕ್ಕೆ ದಾಸರಾಗದೆ ಇವುಗಳಿಂದ ದೂರ ಉಳಿಯಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ‘ಎಲ್ಲರ ಬದುಕಿನಲ್ಲಿ ಯೋಗ್ಯತೆ ಇರುತ್ತದೆ. ಯೋಗ ಕೂಡಿ ಬಂದಲ್ಲಿ ಮಾತ್ರ ಅವಕಾಶ ಪಡೆದುಕೊಳ್ಳಬಹುದು’ ಎಂದರು.</p>.<p>ವಿದ್ಯಾರ್ಥಿಗಳು ಓದಿನ ಕಡೆಗೆ ಮತ್ತು ಉತ್ತಮ ಉದ್ಯೋಗ ಪಡೆಯುವ ಬಗ್ಗೆ ಆಸಕ್ತಿ ವಹಿಸಬೇಕು. ಕೆಟ್ಟ ವಿಷಯದ ಕಡೆಗೆ ಗಮನ ಹರಿಸಬಾರದು. ಅದರಲ್ಲೂ ಮಾದಕ ವಸ್ತುಗಳ ವ್ಯಾಮೋಹಕ್ಕೆ ಒಳಗಾಗಬಾರದು. ಇವು ಕೆಟ್ಟದ್ದು ಎಂದು ಹೇಳುವ ಧೈರ್ಯವನ್ನೂ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. </p>.<p>ಮಾನಸಿಕ ಆರೋಗ್ಯ ತಜ್ಞ ಡಾ.ವಿನಯ್ ಮಾತನಾಡಿ, ‘ಯುವಜನತೆ ಮೊದಲಿಗೆ ಆಸೆ, ಕುತೂಹಲ ಹಾಗೂ ಒತ್ತಡಗಳಿಗೆ ಬಿದ್ದು ಮಾದಕ ವಸ್ತುಗಳ ಮೋಹಕ್ಕೆ ಒಳಗಾಗುತ್ತಿದ್ದಾರೆ. ಮುಂದೆ ಅದು ಖುಷಿಗೂ, ಬೇಸರಕ್ಕೂ ಬಳಸುವ ಮೂಲಕ ವ್ಯಸನಿಗಳಾಗುತ್ತಾರೆ. ಕ್ಷಣಿಕವಾಗಿ ಮಿದುಳನ್ನು ಉದ್ದೀಪನಗೊಳಿಸುವ ಈ ಚಟಗಳಿಗೆ ದಾಸರಾದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇಡೀ ಜೀವನವನ್ನು ಹಾಳು ಮಾಡಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಮದ್ಯ, ತಂಬಾಕು ವಸ್ತುಗಳು, ಗಾಂಜಾ, ಕೊಕೇನ್, ಹೆರಾಯಿನ್ ಇವು ಮಾದಕ ವಸ್ತುಗಳಾಗಿದ್ದು, ಮಿದುಳು ಚುರುಕಾಗುತ್ತದೆ ಎನ್ನುವ ಕಾರಣಕ್ಕೆ ಯುವಜನರು ಬೇಗ ಅವುಗಳ ದಾಸರಾಗಿಬಿಡುತ್ತಾರೆ ಎಂದರು.</p>.<p>ಉದ್ದೀಪನಗೊಳಿಸುವ ಈ ಚಟಗಳಿಗೆ ದಾಸರಾದರೆ ಮತ್ತೆ ಅವುಗಳಿಂದ ಹೊರ ಬರುವುದು ಕಷ್ಟ. ಚಟಕ್ಕೆ ಒಳಗಾದವರು ಆರೋಗ್ಯ ಇಲಾಖೆಯ ಸಹಾಯವಾಣಿ ಮೂಲಕ ನೆರವು ಪಡೆಯಬಹುದು. ಅಂಥವರು ಒಮ್ಮೆ ಆಸ್ಪತ್ರೆಗೆ ಭೇಟಿ ನೀಡಿ ಈ ಸಂಬಂಧಿತ ರೋಗಿಗಳ ಸ್ಥಿತಿಯನ್ನು ಅವಲೋಕಿಸಬೇಕು ಎಂದು ತಿಳಿಸಿದರು.</p>.<p>ಟೌನ್ ಮಹಿಳಾ ಸಮಾಜದ ಅಧ್ಯಕ್ಷೆ ನೇತ್ರಾ ವೆಂಕಟೇಶ್ ಮಾತನಾಡಿ, ‘ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಮಾತ್ರವಲ್ಲ, ಸಂಸ್ಕಾರವನ್ನು ಬೆಳೆಸಿಕೊಳ್ಳುವುದು ಅಗತ್ಯ. ಅದರಿಂದ ಮಾತ್ರ ದೇಶಕ್ಕೆ ವಿದ್ಯಾರ್ಥಿಗಳು ಕೊಡುಗೆ ನೀಡಲು ಸಾಧ್ಯ’ ಎಂದರು.</p>.<p>ಅಂಬಳೆಯ ರೇಣುಕಾಮಾತೆ ತೊಗಲುಗೊಂಬೆ ಕಲಾ ಸಂಘದ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ತೊಗಲು-ಗೊಂಬೆಯಾಟ ಪ್ರದರ್ಶಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಟೌನ್ ಮಹಿಳಾ ಸಮಾಜದ ಕಾರ್ಯದರ್ಶಿ ಶುಭದಾ, ಜಿಲ್ಲಾ ಕೇಂದ್ರ ಗ್ರಂಥಾಲಯಾಧಿಕಾರಿ ಉಮೇಶ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ ಉಪಸ್ಥಿತರಿದ್ದರು.</p>.<p><strong>‘ವ್ಯಸನಮುಕ್ತ ದೇಶ ಕಟ್ಟಲು ಶ್ರಮಿಸಿದವರು ಮಹಾಂತ ಶಿವಯೋಗಿ’ </strong></p><p>‘ತ್ರಿವಿಧ ದಾಸೋಹಕ್ಕೆ ಅನಾದಿ ಕಾಲದಿಂದಲೂ ಶ್ರಮಿಸುತ್ತಿರುವ ಅನೇಕ ವಿರಕ್ತ ಮಠಗಳು ಕರ್ನಾಟಕದಲ್ಲಿ ಇವೆ. ಅದೇ ಸಾಲಿನಲ್ಲಿ ಚಿತ್ತರಗಿಯ ಮಹಾಂತ ಶಿವಯೋಗಿಗಳ ಮಠವೂ ಒಂದು. ಬಸವಾದಿ ಶರಣರ ಆಶಯಗಳನ್ನು ಪಾಲಿಸಲು ಸಂಕಲ್ಪ ಮತ್ತು ದೀಕ್ಷೆ ಪಡೆದು ಕಾರ್ಯೋನ್ಮುಖರಾದರು’ ಎಂದು ನಿವೃತ್ತ ಉಪನ್ಯಾಸಕ ಬಿ.ತಿಪ್ಪೇರುದ್ರಪ್ಪ ಮಹಾಂತ ಶಿವಯೋಗಿ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದ ಅವರು ‘ಮಹಾಂತ ಶಿವಯೋಗಿಗಳು ತಮ್ಮ ಸಮಾಜಮುಖಿ ಕಾರ್ಯಗಳಿಂದ ಮಹಾತ್ಮರಾದವರು. ವ್ಯಸನ ಮುಕ್ತ ಸಮಾಜ ಹಾಗೂ ವ್ಯಸನ ಮುಕ್ತ ದೇಶ ಕಟ್ಟುವ ಕಾಯಕದಲ್ಲಿ ಅವರು ಮುಂಚೂಣಿಯಲ್ಲಿದ್ದರು. ಅವರ ಜಯಂತಿ ಆಚರಣೆ ಮಾಡಲು ಸರ್ಕಾರವೇ ಆದೇಶ ನೀಡಿರುವುದು ಇದೇ ಕಾರಣಕ್ಕೆ’ ಎಂದು ಬಣ್ಣಿಸಿದರು. ಕಾಶಿಯಲ್ಲಿ ಸಕಲ ವಿದ್ಯಾ ಪಾರಂಗತರಾಗಿದ್ದರು. ಉತ್ತರ ಕರ್ನಾಟಕದಲ್ಲಿ ಬರಗಾಲ ಬಂದಾಗ ಗೋಶಾಲೆಗಳು ಗಂಜಿ ಕೇಂದ್ರಗಳು ಮೇವಿನ ಕೇಂದ್ರಗಳನ್ನು ತೆರೆಯುವ ಮೂಲಕ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿದ್ದರು. ಅವರು ಧರ್ಮ ಜಾತಿ ಭಾಷೆ ಪಂಥ ದೇಶ ಎಲ್ಲವನ್ನೂ ಮೀರಿದ ಶಿವಯೋಗಿಗಳು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಜಿಲ್ಲೆಯಲ್ಲಿ ಮಾದಕ ವಸ್ತುಗಳ ವ್ಯಾಪಾರ-ವ್ಯವಹಾರ ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.</p>.<p>ನಗರದ ಟಿ.ಎಂ.ಎಸ್ ರೋಟರಿ ಹಾಲ್ನಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ವ್ಯಸನ ಮುಕ್ತ ದಿನಾಚರಣೆ ಹಾಗೂ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ದೇಶದ ದಿಕ್ಕನ್ನೇ ಬದಲಿಸುವ ಶಕ್ತಿ ಇರುವ ಯುವಜನ ವ್ಯಸನಗಳಿಗೆ ಬಲಿಯಾದರೆ ಅವರ ಕುಟುಂಬ, ಸಮಾಜ ಅಷ್ಟೇ ಅಲ್ಲ ಇಡೀ ದೇಶವೇ ದಿಕ್ಕು ತಪ್ಪುತ್ತದೆ ಎಂದು ಹೇಳಿದರು.</p>.<p>‘ಮಾದಕ ವ್ಯಸನಿಗಳಾದಲ್ಲಿ ಅವರ ವ್ಯಕ್ತಿಗತ ಜೀವನ ಮಾತ್ರವಲ್ಲ ಸಾಮಾಜಿಕ ಜೀವನದ ಮೇಲೂ ದುಷ್ಪರಿಣಾಮ ಬೀರುತ್ತದೆ. ಈ ಚಟಕ್ಕೆ ಬಿದ್ದವರು ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜಕ್ಕೆ ಮಾರಕವಾಗುತ್ತಾರೆ. ಸಂಸ್ಕಾರವಂತ ದೇಶದಲ್ಲಿ ಜನಿಸಿರುವ ನಾವು ಕ್ಷಣಿಕ ಸಂತೋಷಕ್ಕಾಗಿ ಚಟಕ್ಕೆ ದಾಸರಾಗದೆ ಇವುಗಳಿಂದ ದೂರ ಉಳಿಯಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ‘ಎಲ್ಲರ ಬದುಕಿನಲ್ಲಿ ಯೋಗ್ಯತೆ ಇರುತ್ತದೆ. ಯೋಗ ಕೂಡಿ ಬಂದಲ್ಲಿ ಮಾತ್ರ ಅವಕಾಶ ಪಡೆದುಕೊಳ್ಳಬಹುದು’ ಎಂದರು.</p>.<p>ವಿದ್ಯಾರ್ಥಿಗಳು ಓದಿನ ಕಡೆಗೆ ಮತ್ತು ಉತ್ತಮ ಉದ್ಯೋಗ ಪಡೆಯುವ ಬಗ್ಗೆ ಆಸಕ್ತಿ ವಹಿಸಬೇಕು. ಕೆಟ್ಟ ವಿಷಯದ ಕಡೆಗೆ ಗಮನ ಹರಿಸಬಾರದು. ಅದರಲ್ಲೂ ಮಾದಕ ವಸ್ತುಗಳ ವ್ಯಾಮೋಹಕ್ಕೆ ಒಳಗಾಗಬಾರದು. ಇವು ಕೆಟ್ಟದ್ದು ಎಂದು ಹೇಳುವ ಧೈರ್ಯವನ್ನೂ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. </p>.<p>ಮಾನಸಿಕ ಆರೋಗ್ಯ ತಜ್ಞ ಡಾ.ವಿನಯ್ ಮಾತನಾಡಿ, ‘ಯುವಜನತೆ ಮೊದಲಿಗೆ ಆಸೆ, ಕುತೂಹಲ ಹಾಗೂ ಒತ್ತಡಗಳಿಗೆ ಬಿದ್ದು ಮಾದಕ ವಸ್ತುಗಳ ಮೋಹಕ್ಕೆ ಒಳಗಾಗುತ್ತಿದ್ದಾರೆ. ಮುಂದೆ ಅದು ಖುಷಿಗೂ, ಬೇಸರಕ್ಕೂ ಬಳಸುವ ಮೂಲಕ ವ್ಯಸನಿಗಳಾಗುತ್ತಾರೆ. ಕ್ಷಣಿಕವಾಗಿ ಮಿದುಳನ್ನು ಉದ್ದೀಪನಗೊಳಿಸುವ ಈ ಚಟಗಳಿಗೆ ದಾಸರಾದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇಡೀ ಜೀವನವನ್ನು ಹಾಳು ಮಾಡಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಮದ್ಯ, ತಂಬಾಕು ವಸ್ತುಗಳು, ಗಾಂಜಾ, ಕೊಕೇನ್, ಹೆರಾಯಿನ್ ಇವು ಮಾದಕ ವಸ್ತುಗಳಾಗಿದ್ದು, ಮಿದುಳು ಚುರುಕಾಗುತ್ತದೆ ಎನ್ನುವ ಕಾರಣಕ್ಕೆ ಯುವಜನರು ಬೇಗ ಅವುಗಳ ದಾಸರಾಗಿಬಿಡುತ್ತಾರೆ ಎಂದರು.</p>.<p>ಉದ್ದೀಪನಗೊಳಿಸುವ ಈ ಚಟಗಳಿಗೆ ದಾಸರಾದರೆ ಮತ್ತೆ ಅವುಗಳಿಂದ ಹೊರ ಬರುವುದು ಕಷ್ಟ. ಚಟಕ್ಕೆ ಒಳಗಾದವರು ಆರೋಗ್ಯ ಇಲಾಖೆಯ ಸಹಾಯವಾಣಿ ಮೂಲಕ ನೆರವು ಪಡೆಯಬಹುದು. ಅಂಥವರು ಒಮ್ಮೆ ಆಸ್ಪತ್ರೆಗೆ ಭೇಟಿ ನೀಡಿ ಈ ಸಂಬಂಧಿತ ರೋಗಿಗಳ ಸ್ಥಿತಿಯನ್ನು ಅವಲೋಕಿಸಬೇಕು ಎಂದು ತಿಳಿಸಿದರು.</p>.<p>ಟೌನ್ ಮಹಿಳಾ ಸಮಾಜದ ಅಧ್ಯಕ್ಷೆ ನೇತ್ರಾ ವೆಂಕಟೇಶ್ ಮಾತನಾಡಿ, ‘ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಮಾತ್ರವಲ್ಲ, ಸಂಸ್ಕಾರವನ್ನು ಬೆಳೆಸಿಕೊಳ್ಳುವುದು ಅಗತ್ಯ. ಅದರಿಂದ ಮಾತ್ರ ದೇಶಕ್ಕೆ ವಿದ್ಯಾರ್ಥಿಗಳು ಕೊಡುಗೆ ನೀಡಲು ಸಾಧ್ಯ’ ಎಂದರು.</p>.<p>ಅಂಬಳೆಯ ರೇಣುಕಾಮಾತೆ ತೊಗಲುಗೊಂಬೆ ಕಲಾ ಸಂಘದ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ತೊಗಲು-ಗೊಂಬೆಯಾಟ ಪ್ರದರ್ಶಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಟೌನ್ ಮಹಿಳಾ ಸಮಾಜದ ಕಾರ್ಯದರ್ಶಿ ಶುಭದಾ, ಜಿಲ್ಲಾ ಕೇಂದ್ರ ಗ್ರಂಥಾಲಯಾಧಿಕಾರಿ ಉಮೇಶ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ ಉಪಸ್ಥಿತರಿದ್ದರು.</p>.<p><strong>‘ವ್ಯಸನಮುಕ್ತ ದೇಶ ಕಟ್ಟಲು ಶ್ರಮಿಸಿದವರು ಮಹಾಂತ ಶಿವಯೋಗಿ’ </strong></p><p>‘ತ್ರಿವಿಧ ದಾಸೋಹಕ್ಕೆ ಅನಾದಿ ಕಾಲದಿಂದಲೂ ಶ್ರಮಿಸುತ್ತಿರುವ ಅನೇಕ ವಿರಕ್ತ ಮಠಗಳು ಕರ್ನಾಟಕದಲ್ಲಿ ಇವೆ. ಅದೇ ಸಾಲಿನಲ್ಲಿ ಚಿತ್ತರಗಿಯ ಮಹಾಂತ ಶಿವಯೋಗಿಗಳ ಮಠವೂ ಒಂದು. ಬಸವಾದಿ ಶರಣರ ಆಶಯಗಳನ್ನು ಪಾಲಿಸಲು ಸಂಕಲ್ಪ ಮತ್ತು ದೀಕ್ಷೆ ಪಡೆದು ಕಾರ್ಯೋನ್ಮುಖರಾದರು’ ಎಂದು ನಿವೃತ್ತ ಉಪನ್ಯಾಸಕ ಬಿ.ತಿಪ್ಪೇರುದ್ರಪ್ಪ ಮಹಾಂತ ಶಿವಯೋಗಿ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದ ಅವರು ‘ಮಹಾಂತ ಶಿವಯೋಗಿಗಳು ತಮ್ಮ ಸಮಾಜಮುಖಿ ಕಾರ್ಯಗಳಿಂದ ಮಹಾತ್ಮರಾದವರು. ವ್ಯಸನ ಮುಕ್ತ ಸಮಾಜ ಹಾಗೂ ವ್ಯಸನ ಮುಕ್ತ ದೇಶ ಕಟ್ಟುವ ಕಾಯಕದಲ್ಲಿ ಅವರು ಮುಂಚೂಣಿಯಲ್ಲಿದ್ದರು. ಅವರ ಜಯಂತಿ ಆಚರಣೆ ಮಾಡಲು ಸರ್ಕಾರವೇ ಆದೇಶ ನೀಡಿರುವುದು ಇದೇ ಕಾರಣಕ್ಕೆ’ ಎಂದು ಬಣ್ಣಿಸಿದರು. ಕಾಶಿಯಲ್ಲಿ ಸಕಲ ವಿದ್ಯಾ ಪಾರಂಗತರಾಗಿದ್ದರು. ಉತ್ತರ ಕರ್ನಾಟಕದಲ್ಲಿ ಬರಗಾಲ ಬಂದಾಗ ಗೋಶಾಲೆಗಳು ಗಂಜಿ ಕೇಂದ್ರಗಳು ಮೇವಿನ ಕೇಂದ್ರಗಳನ್ನು ತೆರೆಯುವ ಮೂಲಕ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿದ್ದರು. ಅವರು ಧರ್ಮ ಜಾತಿ ಭಾಷೆ ಪಂಥ ದೇಶ ಎಲ್ಲವನ್ನೂ ಮೀರಿದ ಶಿವಯೋಗಿಗಳು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>