<p><strong>ಚಿಕ್ಕಮಗಳೂರು</strong>: ‘ಮಾದಕ ದ್ರವ್ಯ ವ್ಯಸನದಿಂದಾಗಿ ಯುವಜನತೆ ದೂರವಿರಬೇಕು. ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಜಾಗೃತಿ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.</p>.<p>ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗುವುದರಿಂದ ಮಾನಸಿಕವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಇವುಗಳನ್ನು ಪ್ರತಿಯೊಬ್ಬರು ತ್ಯಜಿಸಬೇಕು. ಬೇರೆಯವರಿಗೆ ಪ್ರೇರಣೆ ನೀಡಬೇಕು ಎಂದರು.</p>.<p>ಜಿಲ್ಲೆಯಾದ್ಯಂತ ಶಾಲಾ–ಕಾಲೇಜುಗಳಲ್ಲಿ ಈ ಕುರಿತು ಪ್ರತಿಜ್ಞಾವಿಧಿ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಚಿಕ್ಕಮಗಳೂರನ್ನು ಮಾದಕ ದ್ರವ್ಯ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಜಾಗೃತಿ ಜಾಥಾವು ತಾಲ್ಲೂಕು ಕಚೇರಿ ಆವರಣದಿಂದ ಹೊರಟು ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ತಲುಪಿತು. ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಕೈಯಲ್ಲಿ ಫಲಕಗಳನ್ನು ಹಿಡಿದು ಅರಿವು ಮೂಡಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಡಿವೈಎಸ್ಪಿ ಪುರುಷೋತ್ತಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಮಾದಕ ದ್ರವ್ಯ ವ್ಯಸನದಿಂದಾಗಿ ಯುವಜನತೆ ದೂರವಿರಬೇಕು. ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಜಾಗೃತಿ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.</p>.<p>ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗುವುದರಿಂದ ಮಾನಸಿಕವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಇವುಗಳನ್ನು ಪ್ರತಿಯೊಬ್ಬರು ತ್ಯಜಿಸಬೇಕು. ಬೇರೆಯವರಿಗೆ ಪ್ರೇರಣೆ ನೀಡಬೇಕು ಎಂದರು.</p>.<p>ಜಿಲ್ಲೆಯಾದ್ಯಂತ ಶಾಲಾ–ಕಾಲೇಜುಗಳಲ್ಲಿ ಈ ಕುರಿತು ಪ್ರತಿಜ್ಞಾವಿಧಿ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಚಿಕ್ಕಮಗಳೂರನ್ನು ಮಾದಕ ದ್ರವ್ಯ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಜಾಗೃತಿ ಜಾಥಾವು ತಾಲ್ಲೂಕು ಕಚೇರಿ ಆವರಣದಿಂದ ಹೊರಟು ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ತಲುಪಿತು. ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಕೈಯಲ್ಲಿ ಫಲಕಗಳನ್ನು ಹಿಡಿದು ಅರಿವು ಮೂಡಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಡಿವೈಎಸ್ಪಿ ಪುರುಷೋತ್ತಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>