ಮಲೆನಾಡಿನಲ್ಲಿ ಅಂತರ್ಜಲ ಕುಸಿತದಿಂದ ಕೊಳವೆ ಬಾವಿಗಳಲ್ಲಿ ಜಲಮಟ್ಟ 600 ಅಡಿಗೂ ಕೆಳಕ್ಕೆ ಕುಸಿದಿದೆ. ಅಡಿಕೆ, ತೆಂಗು, ಕಾಫಿ, ಕಾಳುಮೆಣಸು, ಬಾಳೆ ಮತ್ತಿತರ ವಾಣಿಜ್ಯ ಬೆಳೆಗೆ ನೀರು ಹಾಯಿಸಲು ಆಗುತ್ತಿಲ್ಲ. ಆದ್ದರಿಂದ ಗಿಡಗಳು ಒಣಗುತ್ತಿವೆ. ಮಳೆ ಸುರಿಯುವ ನಿರೀಕ್ಷೆ ಇದ್ದು ಮಳೆ ಆಗದಿದ್ದರೆ ಬರ ಖಚಿತ ಎನ್ನುತ್ತಾರೆ ಬಣಕಲ್ ಗ್ರಾಮ ಪಂಚಾಯಿತಿ ಸದಸ್ಯ ಮೊಹಮ್ಮದ್ ಇರ್ಫಾನ್.