<p>ನರಸಿಂಹರಾಜಪುರ: ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ಭೂಮಿ ಹಕ್ಕಿಗಾಗಿ ಒತ್ತಾಯಿಸಿ ಹಮ್ಮಿಕೊಂಡಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿತು. </p>.<p>ಪ್ರತಿಭಟನೆಯಲ್ಲಿ ಮಾತನಾಡಿದ ಕದಸಂಸ ರಾಜ್ಯ ಸಂಚಾಲಕ ತರೀಕೆರೆ ಎನ್.ವೆಂಕಟೇಶ್, ರಾಜ್ಯದಲ್ಲಿ ಬಡವರ ಹಸಿವು ನೀಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನ್ನಭಾಗ್ಯ ಯೋಜನೆ ಜಾರಿಗೆ ತಂದಂತೆ ದಲಿತರಿಗೆ ಭೂಮಿಯ ಹಕ್ಕು ಯೋಜನೆ ಜಾರಿಗೆ ತರಲಿ ಎಂದು ಆಗ್ರಹಿಸಿದರು.</p>.<p>ರಾಜ್ಯ ಸಂಘಟನಾ ಸಂಚಾಲಕ ಮೈಸೂರಿನ ಕೆ.ನಂಜಪ್ಪ ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪ ಅವರು ಭೂಮಿ ಹೋರಾಟ ಮಾಡಿದ ಫಲವಾಗಿ ಭೂ ಪರಬಾರೆ ಕಾಯಿದೆ ಜಾರಿಗೆ ಬಂದಿತು. ಆದ್ದರಿಂದ ನಮಗೆ ಭೂಮಿ ಕೊಡುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಹೇಳಿದರು.</p>.<p>ರಾಜ್ಯ ಸಂಘಟನಾ ಸಂಚಾಲಕರಾದ ವಿಜಯನಗರದ ಪಿ.ದುರ್ಗಾದಾಸ್ ಮಾತನಾಡಿ, ಭೂಮಿ ಸಿಗುವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ. ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.</p>.<p>ತುಮಕೂರು ಜಿಲ್ಲಾ ಸಂಚಾಲಕರಾದ ಓಂಕಾರ ಮೂರ್ತಿ ಮಾತನಾಡಿದರು.</p>.<p>ಮನವಿ ಸ್ವೀಕರಿಸಿದ ತಹಶೀಲ್ದಾರ್ ನೂರುಲ್ ಹುದಾ, ಮಾತನಾಡಿ, ಪ್ರತಿಭಟನೆ ಮಾಡುತ್ತಿರುವವರು ತಮ್ಮ ಆರೋಗ್ಯದ ಕಡೆಯೂ ಗಮನ ಕೊಡಬೇಕು. ಮನವಿ ಪತ್ರವನ್ನು ಮೇಲಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು.</p>.<p>ರಾಜ್ಯ ಸಮಿತಿ ಸದಸ್ಯರಾದ ಎಸ್. ರಾಜೇಶ್, ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಎಂ.ವಿ.ಭವಾನಿ, ತಾಲ್ಲೂಕು ಸಂಚಾಲಕದ ಎಂ.ಜೆ ಸಿಜು,ಸಂಘಟನಾ ಸಂಚಾಲಕ ಮೃತ್ಯುಂಜಯ, ಎಸ್.ರಾಜು, ಜಯರಾಮ್, ಖದೀರ್, ರವಿ,ಕುಮಾರ ತಿಮ್ಮಯ್ಯ, ವಾಸಂತಿ, ವೆನಿಲಾ, ರೇಣುಕಾ,ಶೋಭಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ಭೂಮಿ ಹಕ್ಕಿಗಾಗಿ ಒತ್ತಾಯಿಸಿ ಹಮ್ಮಿಕೊಂಡಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿತು. </p>.<p>ಪ್ರತಿಭಟನೆಯಲ್ಲಿ ಮಾತನಾಡಿದ ಕದಸಂಸ ರಾಜ್ಯ ಸಂಚಾಲಕ ತರೀಕೆರೆ ಎನ್.ವೆಂಕಟೇಶ್, ರಾಜ್ಯದಲ್ಲಿ ಬಡವರ ಹಸಿವು ನೀಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನ್ನಭಾಗ್ಯ ಯೋಜನೆ ಜಾರಿಗೆ ತಂದಂತೆ ದಲಿತರಿಗೆ ಭೂಮಿಯ ಹಕ್ಕು ಯೋಜನೆ ಜಾರಿಗೆ ತರಲಿ ಎಂದು ಆಗ್ರಹಿಸಿದರು.</p>.<p>ರಾಜ್ಯ ಸಂಘಟನಾ ಸಂಚಾಲಕ ಮೈಸೂರಿನ ಕೆ.ನಂಜಪ್ಪ ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪ ಅವರು ಭೂಮಿ ಹೋರಾಟ ಮಾಡಿದ ಫಲವಾಗಿ ಭೂ ಪರಬಾರೆ ಕಾಯಿದೆ ಜಾರಿಗೆ ಬಂದಿತು. ಆದ್ದರಿಂದ ನಮಗೆ ಭೂಮಿ ಕೊಡುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಹೇಳಿದರು.</p>.<p>ರಾಜ್ಯ ಸಂಘಟನಾ ಸಂಚಾಲಕರಾದ ವಿಜಯನಗರದ ಪಿ.ದುರ್ಗಾದಾಸ್ ಮಾತನಾಡಿ, ಭೂಮಿ ಸಿಗುವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ. ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.</p>.<p>ತುಮಕೂರು ಜಿಲ್ಲಾ ಸಂಚಾಲಕರಾದ ಓಂಕಾರ ಮೂರ್ತಿ ಮಾತನಾಡಿದರು.</p>.<p>ಮನವಿ ಸ್ವೀಕರಿಸಿದ ತಹಶೀಲ್ದಾರ್ ನೂರುಲ್ ಹುದಾ, ಮಾತನಾಡಿ, ಪ್ರತಿಭಟನೆ ಮಾಡುತ್ತಿರುವವರು ತಮ್ಮ ಆರೋಗ್ಯದ ಕಡೆಯೂ ಗಮನ ಕೊಡಬೇಕು. ಮನವಿ ಪತ್ರವನ್ನು ಮೇಲಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು.</p>.<p>ರಾಜ್ಯ ಸಮಿತಿ ಸದಸ್ಯರಾದ ಎಸ್. ರಾಜೇಶ್, ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಎಂ.ವಿ.ಭವಾನಿ, ತಾಲ್ಲೂಕು ಸಂಚಾಲಕದ ಎಂ.ಜೆ ಸಿಜು,ಸಂಘಟನಾ ಸಂಚಾಲಕ ಮೃತ್ಯುಂಜಯ, ಎಸ್.ರಾಜು, ಜಯರಾಮ್, ಖದೀರ್, ರವಿ,ಕುಮಾರ ತಿಮ್ಮಯ್ಯ, ವಾಸಂತಿ, ವೆನಿಲಾ, ರೇಣುಕಾ,ಶೋಭಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>