ಅ.5ರಂದು ಬೆಳಿಗ್ಗೆ 7 ಗಂಟೆಯಿಂದ ಗಜವಾಹಿನಿ, ಗಜಲಕ್ಷ್ಮೀ ಪೂಜಾ ಪಾರಾಯಣ, ದುರ್ಗಾಹೋಮ ನಡೆಯಲಿದೆ. ಬೆಳಿಗ್ಗೆ 9.30ರಿಂದ ಹಿನ್ನೆಲೆ ಗಾಯಕರಾದ ಸುಮಂತ್ ವಸಿಷ್ಠ, ಅಂಕಿತಾ ಕುಂಡು, ಅರ್ಜುನ್ ಇಟಗಿ ನೇತೃತ್ವದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ನಡೆಯುವ ಅನ್ನ ಸಂತರ್ಪಣೆಯಲ್ಲಿ 10 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಮಧ್ಯಾಹ್ನ 2 ಗಂಟೆಗೆ ದುರ್ಗಾದೇವಿಯ ವಿಗ್ರಹದ ಶೋಭಾಯಾತ್ರೆಯು ಮಾರ್ಕಾಂಡೇಶ್ವರ ದೇವಸ್ಥಾನದಿಂದ ಆರಂಭಗೊಳ್ಳಲಿದೆ.