ತಾಲ್ಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಐತಿಹಾಸಿಕ ಹಿನ್ನಲೆ ಇದೆ. ಈ ಜಾಗದಲ್ಲಿ ಋಷಿಗಳು ತಪಸ್ಸು ಮಾಡಿದರು ಎನ್ನುವ ನಂಬಿಕೆ ಇದೆ. ಇಂತಹ ಧಾರ್ಮಿಕ ಸ್ಥಳದಲ್ಲಿ ಮಾಂಸಹಾರ ಸೇವೆನೆ, ಮದ್ಯ ಪಾನ, ಧೂಮಪಾನ, ಪ್ರವಾಸಿಗರ ಅಸಭ್ಯ ವರ್ತನೆಗಳು ಹೆಚ್ಚಾಗುತ್ತಿವೆ. ಗಿರಿಶ್ರೇಣಿಗೆ ಸಾಗುವ ರಸ್ತೆಯಲ್ಲಿನ ವಾಹನ ತಪಾಸಣಾ ಚೌಕಿಗಳು ನಿಷ್ಕ್ರಿಯವಾಗಿವೆ. ಈ ಬಗ್ಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.