<p><strong>ಕೊಪ್ಪ</strong>: ‘ಶಿಕ್ಷಣ ಲಾಭದಾಯಕ ಕ್ಷೇತ್ರವಾಗದೆ ಸೇವಾ ಕ್ಷೇತ್ರವಾಗಬೇಕು. ಆ ಮೂಲಕ ಎಲ್ಲರಿಗೂ ಶಿಕ್ಷಣ ತಲುಪುವಂತಾಗಬೇಕು’ ಎಂದು ನಿವೃತ್ತ ಶಿಕ್ಷಕ ವೆಂಕಟೇಶಯ್ಯ ಹೇಳಿದರು.</p>.<p>ತಾಲ್ಲೂಕಿನ ಭಂಡಿಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1981-83 ಸಾಲಿನಲ್ಲಿ 7ನೇ ತರಗತಿ ವ್ಯಾಸಂಗ ಮಾಡಿದ್ದ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಬಳಗದಿಂದ ಶನಿವಾರ ಆಯೋಜಿಸಿದ್ದ ಶಿಕ್ಷಕರಿಗೆ ಗುರು ನಮನ ಕಾರ್ಯಕ್ರಮದಲ್ಲಿ ಅವರು ಗೌರವ ಸ್ವೀಕರಿಸಿ ಮಾತನಾಡಿದರು.</p>.<p>‘ಗುರು ಶಿಷ್ಯರ ಬಾಂಧವ್ಯ ಸಡಿಲಗೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ 40 ವರ್ಷದ ಹಿಂದೆ ಶಿಕ್ಷಣ ಪಡೆದ ನಮ್ಮ ಶಿಷ್ಯ ಬಳಗ ಗುರುನಮನ ಸಲ್ಲಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ. ಈ ಶಾಲೆಯಲ್ಲಿ ಕಲಿತ ಮಕ್ಕಳು ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡಿದ್ದಾರೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು. ಅಲ್ಲಿ ಮಕ್ಕಳು ಶಿಕ್ಷಣದ ಜೊತೆ ಜೀವನ ಪಾಠವನ್ನೂ ಕಲಿಯುತ್ತಾರೆ’ ಎಂದು ಅವರು ಹೇಳಿದರು.</p>.<p>ಭಾರತಿ ಪ್ರತಿಷ್ಠಾನದ ಜಗದೀಶ ಕಾರಂತ, ವಿದ್ಯಾಧರ ದೇಸಾಯಿ, ಸ್ನೇಹ ಸಮ್ಮಿಲನ ಬಳಗದ ಸಂಚಾಲಕಿ ರೂಪಕಲಾ ಮಾತನಾಡಿದರು. ನಿವೃತ್ತ ಶಿಕ್ಷಕರಾದ ವೆಂಕಟೇಶಯ್ಯ, ಸುಬ್ಬೇನಾಯ್ಕ್, ಗುರುಮೂರ್ತಿ, ಚಂದ್ರಶೇಖರ್, ಅಬ್ದುಲ್ ಹಮೀದ್ ಅವರನ್ನು ಸ್ನೇಹ ಮಿಲನ ಬಳಗದಿಂದ ಗೌರವಿಸಲಾಯಿತು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರೇಮ್ ಕುಮಾರ್, ಮುಖ್ಯ ಶಿಕ್ಷಕ ಶ್ರೀನಿವಾಸ್, ಸ್ನೇಹ ಸಮ್ಮಿಲನ ಬಳಗದ ಎ.ಈ.ಅಶೋಕ್, ಭಾಗ್ಯಲಕ್ಷ್ಮಿ, ಸುರೇಶ್, ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ</strong>: ‘ಶಿಕ್ಷಣ ಲಾಭದಾಯಕ ಕ್ಷೇತ್ರವಾಗದೆ ಸೇವಾ ಕ್ಷೇತ್ರವಾಗಬೇಕು. ಆ ಮೂಲಕ ಎಲ್ಲರಿಗೂ ಶಿಕ್ಷಣ ತಲುಪುವಂತಾಗಬೇಕು’ ಎಂದು ನಿವೃತ್ತ ಶಿಕ್ಷಕ ವೆಂಕಟೇಶಯ್ಯ ಹೇಳಿದರು.</p>.<p>ತಾಲ್ಲೂಕಿನ ಭಂಡಿಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1981-83 ಸಾಲಿನಲ್ಲಿ 7ನೇ ತರಗತಿ ವ್ಯಾಸಂಗ ಮಾಡಿದ್ದ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಬಳಗದಿಂದ ಶನಿವಾರ ಆಯೋಜಿಸಿದ್ದ ಶಿಕ್ಷಕರಿಗೆ ಗುರು ನಮನ ಕಾರ್ಯಕ್ರಮದಲ್ಲಿ ಅವರು ಗೌರವ ಸ್ವೀಕರಿಸಿ ಮಾತನಾಡಿದರು.</p>.<p>‘ಗುರು ಶಿಷ್ಯರ ಬಾಂಧವ್ಯ ಸಡಿಲಗೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ 40 ವರ್ಷದ ಹಿಂದೆ ಶಿಕ್ಷಣ ಪಡೆದ ನಮ್ಮ ಶಿಷ್ಯ ಬಳಗ ಗುರುನಮನ ಸಲ್ಲಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ. ಈ ಶಾಲೆಯಲ್ಲಿ ಕಲಿತ ಮಕ್ಕಳು ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡಿದ್ದಾರೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು. ಅಲ್ಲಿ ಮಕ್ಕಳು ಶಿಕ್ಷಣದ ಜೊತೆ ಜೀವನ ಪಾಠವನ್ನೂ ಕಲಿಯುತ್ತಾರೆ’ ಎಂದು ಅವರು ಹೇಳಿದರು.</p>.<p>ಭಾರತಿ ಪ್ರತಿಷ್ಠಾನದ ಜಗದೀಶ ಕಾರಂತ, ವಿದ್ಯಾಧರ ದೇಸಾಯಿ, ಸ್ನೇಹ ಸಮ್ಮಿಲನ ಬಳಗದ ಸಂಚಾಲಕಿ ರೂಪಕಲಾ ಮಾತನಾಡಿದರು. ನಿವೃತ್ತ ಶಿಕ್ಷಕರಾದ ವೆಂಕಟೇಶಯ್ಯ, ಸುಬ್ಬೇನಾಯ್ಕ್, ಗುರುಮೂರ್ತಿ, ಚಂದ್ರಶೇಖರ್, ಅಬ್ದುಲ್ ಹಮೀದ್ ಅವರನ್ನು ಸ್ನೇಹ ಮಿಲನ ಬಳಗದಿಂದ ಗೌರವಿಸಲಾಯಿತು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರೇಮ್ ಕುಮಾರ್, ಮುಖ್ಯ ಶಿಕ್ಷಕ ಶ್ರೀನಿವಾಸ್, ಸ್ನೇಹ ಸಮ್ಮಿಲನ ಬಳಗದ ಎ.ಈ.ಅಶೋಕ್, ಭಾಗ್ಯಲಕ್ಷ್ಮಿ, ಸುರೇಶ್, ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>