<p><strong>ಮೂಡಿಗೆರೆ (ಚಿಕ್ಕಮಗಳೂರು ಜಿಲ್ಲೆ):</strong> ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿರುವ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ 8 ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ಪ್ರಾಂಶುಪಾಲರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಅನುಮತಿ ಪಡೆಯದೇ ಶನಿವಾರ ಬೆಳಿಗ್ಗೆ ಕ್ರೀಡಾಂಗಣದಲ್ಲಿ ಆಟವಾಡುತ್ತಿದ್ದರು ಎಂಬ ಕಾರಣಕ್ಕೆ ಪ್ರಾಂಶುಪಾಲ ಸತೀಶ್ ಹಾಗೂ ಸಿಬ್ಬಂದಿ ಬೆಲ್ಟ್, ಪೈಪ್ನಿಂದ ಹಲ್ಲೆ ಮಾಡಿದ್ದಾರೆ ಎಂದು 9ನೇ ತರಗತಿ ವಿದ್ಯಾರ್ಥಿಗಳು ದೂರಿದ್ದಾರೆ.</p>.<p>ಶಾಲೆಯ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಕಿರುಚಾಟ ಕೇಳಿ ಬಣಕಲ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸಬ್ ಇನ್ಸ್ಪೆಕ್ಟರ್ ರೇಣುಕಾ, ಸಿಬ್ಬಂದಿ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಗಾಯಾಗಳನ್ನು ಪಟ್ಟಣದ ಎಂಜಿಎಂ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. </p>.<p>6ನೇ ತರಗತಿಯಿಂದ ಪದವಿಪೂರ್ವ ಕಾಲೇಜಿನವರೆಗೆ ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಘಟನೆಯ ಮಾಹಿತಿ ತಿಳಿದಂತೆ ಸ್ಥಳೀಯರು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಶಾಲೆ ಬಳಿ ಸೇರಿ ಪ್ರಾಂಶುಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಉಪವಿಭಾಗಾಧಿಕಾರಿ ನಟೇಶ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ್ ಭಜಂತ್ರಿ, ತಹಶೀಲ್ದಾರ್ ಅಶ್ವಿನಿ, ಪೊಲೀಸ್ ಸರ್ಕಲ್ ಇನ್ ಸ್ಪೆಕ್ಟರ್ ರಾಜಶೇಖರ್ ಭೇಟಿ ನೀಡಿ ಮಕ್ಕಳಿಂದ ಮಾಹಿತಿ ಪಡೆದರು.</p>.<p>ಸಂಜೆಯ ವೇಳೆಗೆ ವಿವಿಧೆಡೆಯಿಂದ ಪೋಷಕರು ಸಹ ಶಾಲಾ ಆವರಣಕ್ಕೆ ಬಂದಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಪ್ರಾಂಶುಪಾಲರನ್ನು ಅಮಾನತುಗೊಳಿಸಬೇಕು ಎಂದು ಪೋಷಕರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ (ಚಿಕ್ಕಮಗಳೂರು ಜಿಲ್ಲೆ):</strong> ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿರುವ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ 8 ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ಪ್ರಾಂಶುಪಾಲರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಅನುಮತಿ ಪಡೆಯದೇ ಶನಿವಾರ ಬೆಳಿಗ್ಗೆ ಕ್ರೀಡಾಂಗಣದಲ್ಲಿ ಆಟವಾಡುತ್ತಿದ್ದರು ಎಂಬ ಕಾರಣಕ್ಕೆ ಪ್ರಾಂಶುಪಾಲ ಸತೀಶ್ ಹಾಗೂ ಸಿಬ್ಬಂದಿ ಬೆಲ್ಟ್, ಪೈಪ್ನಿಂದ ಹಲ್ಲೆ ಮಾಡಿದ್ದಾರೆ ಎಂದು 9ನೇ ತರಗತಿ ವಿದ್ಯಾರ್ಥಿಗಳು ದೂರಿದ್ದಾರೆ.</p>.<p>ಶಾಲೆಯ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಕಿರುಚಾಟ ಕೇಳಿ ಬಣಕಲ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸಬ್ ಇನ್ಸ್ಪೆಕ್ಟರ್ ರೇಣುಕಾ, ಸಿಬ್ಬಂದಿ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಗಾಯಾಗಳನ್ನು ಪಟ್ಟಣದ ಎಂಜಿಎಂ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. </p>.<p>6ನೇ ತರಗತಿಯಿಂದ ಪದವಿಪೂರ್ವ ಕಾಲೇಜಿನವರೆಗೆ ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಘಟನೆಯ ಮಾಹಿತಿ ತಿಳಿದಂತೆ ಸ್ಥಳೀಯರು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಶಾಲೆ ಬಳಿ ಸೇರಿ ಪ್ರಾಂಶುಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಉಪವಿಭಾಗಾಧಿಕಾರಿ ನಟೇಶ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ್ ಭಜಂತ್ರಿ, ತಹಶೀಲ್ದಾರ್ ಅಶ್ವಿನಿ, ಪೊಲೀಸ್ ಸರ್ಕಲ್ ಇನ್ ಸ್ಪೆಕ್ಟರ್ ರಾಜಶೇಖರ್ ಭೇಟಿ ನೀಡಿ ಮಕ್ಕಳಿಂದ ಮಾಹಿತಿ ಪಡೆದರು.</p>.<p>ಸಂಜೆಯ ವೇಳೆಗೆ ವಿವಿಧೆಡೆಯಿಂದ ಪೋಷಕರು ಸಹ ಶಾಲಾ ಆವರಣಕ್ಕೆ ಬಂದಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಪ್ರಾಂಶುಪಾಲರನ್ನು ಅಮಾನತುಗೊಳಿಸಬೇಕು ಎಂದು ಪೋಷಕರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>