<p><strong>ಚಿಕ್ಕಮಗಳೂರು</strong>: ತಿರುಪತಿಗೆ ಹೊರಟಿದ್ದ ಹೊಸ ರೈಲಿಗೆ ವೃದ್ಧೆಯೊಬ್ಬರು ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಭಕ್ತಭಾವ ಮೆರೆದರು.</p><p>ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮ ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ ಆಯೋಜನೆಗೊಂಡಿತ್ತು. ಅಲಂಕಾರಗೊಂಡಿದ್ದ ರೈಲಿನ ಮುಂದೆ ಹಳಿಗಳ ಮೇಲೆ ಇಳಿದ ಹಿರೇಮಗಳೂರಿನ ಭಾಗಲಕ್ಷ್ಮಿ ಅವರು ಮೂರು ಬಾರಿ ಅಡ್ಡಬಿದ್ದು ನಮಸ್ಕರಿಸಿದರು. </p><p>‘ತಿರುಪತಿ ವೆಂಕಟೇಶ್ವರ ನಮ್ಮ ಮನೆ ದೇವರು, ವರ್ಷಕ್ಕೆ ಮೂರು–ನಾಲ್ಕು ಬಾರಿ ಭೇಟಿ ನೀಡುತ್ತೇನೆ. ಈಗ ಚಿಕ್ಕಮಗಳೂರಿನಿಂದ ನೇರ ರೈಲು ಆರಂಭವಾಗಿರುವುದು ನನಗೆ ಅತೀವ ಸಂತಸವಾಗಿದೆ’ ಎಂದರು.</p><p>ವೃದ್ಧೆಯ ಈ ಭಕ್ತಿಗೆ ಪ್ರತಿಕ್ರಿಯಿಸಿದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಕಲ್ಪನೆಯಿಂದ ಇದು ಸಾಧ್ಯವಾಗಿದೆ. ತಿರುಪತಿಗೆ ರೈಲು ಆರಂಭವಾಗಿರುವುದಕ್ಕೆ ಈ ತಾಯಿಗೆ ಸಂತೋಷವಾಗಿದೆ. ತಿರುಪತಿ ತಿಮ್ಮಪ್ಪನಿಗೆ ಮಾಡಿದಷ್ಟೇ ನಮಸ್ಕಾರವನ್ನು ಈ ತಾಯಿಗೂ ಮಾಡುತ್ತೇನೆ’ ಎಂದರು.</p>.ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ; ಎಕ್ಸ್ಪ್ರೆಸ್ಗೆ ಶೀಘ್ರ ನಾಮಕರಣ: ಸೋಮಣ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ತಿರುಪತಿಗೆ ಹೊರಟಿದ್ದ ಹೊಸ ರೈಲಿಗೆ ವೃದ್ಧೆಯೊಬ್ಬರು ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಭಕ್ತಭಾವ ಮೆರೆದರು.</p><p>ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮ ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ ಆಯೋಜನೆಗೊಂಡಿತ್ತು. ಅಲಂಕಾರಗೊಂಡಿದ್ದ ರೈಲಿನ ಮುಂದೆ ಹಳಿಗಳ ಮೇಲೆ ಇಳಿದ ಹಿರೇಮಗಳೂರಿನ ಭಾಗಲಕ್ಷ್ಮಿ ಅವರು ಮೂರು ಬಾರಿ ಅಡ್ಡಬಿದ್ದು ನಮಸ್ಕರಿಸಿದರು. </p><p>‘ತಿರುಪತಿ ವೆಂಕಟೇಶ್ವರ ನಮ್ಮ ಮನೆ ದೇವರು, ವರ್ಷಕ್ಕೆ ಮೂರು–ನಾಲ್ಕು ಬಾರಿ ಭೇಟಿ ನೀಡುತ್ತೇನೆ. ಈಗ ಚಿಕ್ಕಮಗಳೂರಿನಿಂದ ನೇರ ರೈಲು ಆರಂಭವಾಗಿರುವುದು ನನಗೆ ಅತೀವ ಸಂತಸವಾಗಿದೆ’ ಎಂದರು.</p><p>ವೃದ್ಧೆಯ ಈ ಭಕ್ತಿಗೆ ಪ್ರತಿಕ್ರಿಯಿಸಿದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಕಲ್ಪನೆಯಿಂದ ಇದು ಸಾಧ್ಯವಾಗಿದೆ. ತಿರುಪತಿಗೆ ರೈಲು ಆರಂಭವಾಗಿರುವುದಕ್ಕೆ ಈ ತಾಯಿಗೆ ಸಂತೋಷವಾಗಿದೆ. ತಿರುಪತಿ ತಿಮ್ಮಪ್ಪನಿಗೆ ಮಾಡಿದಷ್ಟೇ ನಮಸ್ಕಾರವನ್ನು ಈ ತಾಯಿಗೂ ಮಾಡುತ್ತೇನೆ’ ಎಂದರು.</p>.ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ; ಎಕ್ಸ್ಪ್ರೆಸ್ಗೆ ಶೀಘ್ರ ನಾಮಕರಣ: ಸೋಮಣ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>