ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಳೆಹೊನ್ನೂರು | ವಿದ್ಯುತ್ ಅವಘಡ: ಲೈನ್‌ಮ್ಯಾನ್ ಸಾವು

Published 23 ಏಪ್ರಿಲ್ 2024, 16:05 IST
Last Updated 23 ಏಪ್ರಿಲ್ 2024, 16:05 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಸೀಗೋಡು ಕೆಫೆ ಬಳಿ ವಿದ್ಯುತ್ ಪರಿವರ್ತಕವನ್ನು ದುರಸ್ತಿಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ, ಹೊಳೆನರಸೀಪುರ ಸಮೀಪದ ಚರಣ್ಯ ಗ್ರಾಮದ ಲೈನ್‌ಮ್ಯಾನ್ ಮಹದೇವಪ್ಪ(29) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಮೃತರ ಅಂತ್ಯಸಂಸ್ಕಾರ ಚರಣ್ಯ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಘಟನೆ ಕುರಿತು ಮೃತರ ತಂದೆ ಸೋಮಶೇಖರ್ ಪೊಲೀಸರಿಗೆ ದೂರು ನೀಡಿದ್ದು, ಠಾಣಾಧಿಕಾರಿ ರವೀಶ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT