ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಲಾರಿಗೆ ವಿದ್ಯುತ್ ತಂತಿ ತಗುಲಿ ಕ್ಲೀನರ್ ಸಾವು

Last Updated 8 ಆಗಸ್ಟ್ 2021, 6:19 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕಳಸ ತಾಲ್ಲೂಕಿನ ಬಾಳೆಹೊಳೆ ಸಮೀಪ ಪಡೀಲ್ ಬಳಿ ಲಾರಿಗೆ ವಿದ್ಯುತ್ ತಂತಿ ತಗುಲಿ ಕ್ಲೀನರ್ ಅಮ್ಜದ್(32) ಸಾವಿಗೀಡಾಗಿದ್ದಾರೆ.

ನಸುಕಿನ 3 ಗಂಟೆ ಹೊತ್ತಿಗೆ ಅವಘಡ ಸಂಭವಿಸಿದೆ. ಅಮ್ಜದ್ ಅವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ತಾವರೆಕೆರೆ ಗ್ರಾಮದವರು.

'ಲಾರಿಯಲ್ಲಿ ಜೆಸಿಬಿಯನ್ನು ಮಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿತ್ತು. ಪಡೀಲ್ ಬಳಿ ಹಾದು ಹೋಗಿರುವ ವಿದ್ಯುತ್ ಲೇನ್ ತಂತಿ ಲಾರಿಯಲ್ಲಿನ ಜೆಸಿಬಿಗೆ ತಾಗುತ್ತದೆಯೇ ಎಂದು ನೋಡಲು ಕ್ಲೀನರ್ ನನ್ನು ಚಾಲಕ ಕೆಳಗಿಳಿಸಿದ್ದಾರೆ. ಇಳಿದ ಕೂಡಲೇ ಕ್ಲೀನರ್ ಮೃತಪಟ್ಟಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

'ತಂತಿಯು ಜೆಸಿಬಿಗೆ ತಾಗಿದೆ. ಕ್ಲೀನರ್ ಚಪ್ಪಲಿ ಹಾಕಿರಲಿಲ್ಲ, ಅರ್ತಿಂಗ್ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ' ಎಂದು ತಿಳಿಸಿದ್ದಾರೆ.
ಕಳಸ ಪಿಎಸ್‌ಐ ಹರ್ಷವರ್ಧನ್ ಸ್ಥಳ ಪರಿಶೀಲನೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT